Homeಕರ್ನಾಟಕತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ'

ತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ’

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ.

- Advertisement -
- Advertisement -

| ಕುಮಾರ್  |

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ. ಬದಲಿಗೆ ಬೀದಿಕಾಳಗದ ರೂಪ ಪಡೆಯುವ ಸಂಭವ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆದು ನಿಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಯಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೇ ಉಲ್ಟಾ ಹೊಡೆದಿರುವುದು ಎಲ್ಲರಿಗೂ ತಿಳಿದಿದೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ವತಃ ಮಾಜಿ ಪ್ರಧಾನಿ ದೇವೆಗೌಡರೇ ಅಭ್ಯರ್ಥಿಯಾಗಿ ಸೋತಿದ್ದಾರೆ. ಮೂರು ಜನ ಜೆಡಿಎಸ್ ಶಾಸಕರು ಒಬ್ಬ ಕಾಂಗ್ರೆಸ್ ಶಾಸಕ ಇದ್ದರು ಸಹ ದೇವೇಗೌಡರು ಪರಾಭವಗೊಂಡಿರುವುದು ಎರಡು ಪಕ್ಷಗಳಿಗೂ ಮುಖಭಂಗವಾಗಿದೆ. ಆದರೆ ಇದರಿಂದ ಎರಡು ಪಕ್ಷಗಳ ಕೆಲವರಿಗೆ ಒಳಗೊಳಗೆ ಖುಷಿಯಾಗಿರುವಂತೆ ಕಾಣಿಸುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‍ನವರು ಕಣಕ್ಕಿಳಿಯುವುದನ್ನು ತೀವ್ರವಾಗಿ ವಿರೋಧಿಸಿದ್ದ ಕೆ.ಎನ್.ರಾಜಣ್ಣ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಎರಡು ಪಕ್ಷಗಳಲ್ಲಿದೆ. ಇದೇ ಕಾರಣಕ್ಕೆ ರಾಜಣ್ಣನ ವಿರುದ್ಧ ಅಭಿಪ್ರಾಯ ರೂಪಿಸಲು ಹೊರಟ ಕೆಲವು ಕಾಂಗ್ರೆಸ್ ಮುಖಂಡರು ಈಗ ರಾಜಣ್ಣನ ತಂಟೆಗೆ ಹೋಗಿದ್ದೆ ತಪ್ಪಾಯಿತು ಎನ್ನುವಂತೆ ಕಸಿವಿಸಿ ಅನುಭವಿಸುತ್ತಿದ್ದಾರೆ.

ದೇವೆಗೌಡ

ಚುನಾವಣೆಯ ಫಲಿತಾಂಶ ಬಂದನಂತರ ಕೆ.ಎನ್.ರಾಜಣ್ಣ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ‘ತುಮಕೂರಿನಲ್ಲಿ ದೇವೇಗೌಡರು ಸೋಲಲು ನಿಕಿಲ್ ಕುಮಾರಸ್ವಾಮಿ ಕಾರಣ. ಆತ ಕುಂಚಿಟಿಗ ಹೆಣ್ಣುಮಗಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ನಂತರ ಮದುವೆಯಾಗದೆ ಇದ್ದರಿಂದ ಮಧುಗಿರಿಯಲ್ಲಿರುವ ಕುಂಚಿಟಿಗರು ಮತನೀಡಿಲ್ಲ ಮತ್ತು ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡರು ಕೂಡ ಒಕ್ಕಲಿಗರಾಗಿದ್ದು ಅವರನ್ನು ಕಡೆಗಣಿಸಿದ್ದುಕಾರಣ ಎಂದು ಹೇಳಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನ ನಾನು ಉಪಮುಖ್ಯಮಂತ್ರಿ ಎಂದು ಪರಿಗಣನೆಯೇ ಮಾಡೋದಿಲ್ಲ, ಅವರು ಜೀರೋ ಟ್ರಾಫಿಕ್‍ಗೆ ಮಾತ್ರ ಸೀಮಿತ ಎಂದು ಹೇಳಿದ್ದರು.

ಇದರಿಂದ ಅಸಮಾಧಾನ ಹೆಚ್ಚಾಗಿ ಜೆಡಿಎಸ್ ನಾಯಕರು ನೇರವಾಗಿ ಕೆ.ಎನ್.ರಾಜಣ್ಣನವರನ್ನು ಟಾರ್ಗೆಟ್ ಮಾಡಿ ಟೀಕೆ ಮಾಡಲು ಶುರು ಮಾಡಿದರು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತನ್ನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ರಾಜಣ್ಣ ಬಿಜೆಪಿಗೆ ಬೆಂಬಲಿಸಿದ್ದರೆ ನೇರವಾಗಿ ಹೇಳಲಿ ಅತಿಯಾಗಿ ಮಾತಾನಾಡುವುದನ್ನ ನಿಲ್ಲಿಸಲಿ ಮತ್ತು ನೇರ ಯುದ್ಧಕ್ಕೆ ಬರಲಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯಿಂದ ಅನಾನೂಕೂಲವೇ ಹೆಚ್ಚು ಇದರಿಂದ ಹೊರಬರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎನ್.ಆರ್ ಕೇವಲ 500 ಮತಗಳ ಅಂತರದಿಂದ ಒಮ್ಮೆ ಮಧುಗಿರಿಯಿಂದ ಆರಿಸಿ ಬಂದ ಗೌರಿಶಂಕರ್ ಆಪರೇಷನ್ ಕಮಲದಲ್ಲಿ ಸೇಲಾಗಿದ್ದರು ಅವರ ಬಗ್ಗೆ ಮಾತನಾಡಲು ನನಗೆ ಹೇಸಿಗೆಯಾಗುತ್ತದೆ ಎಂದಿದ್ದಾರೆ.
ಡಾ.ಜಿ.ಪರಮೇಶ್ವರ್ ಹಠಾವೋ ಕಾಂಗ್ರೇಸ್ ಬಚಾವೋ

ಪರಮೇಶ್ವರ್

ತುಮಕೂರಿನ ವಾಲ್ಮೀಕಿ ನಗರದಲ್ಲಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಈ ಪೋಸ್ಟರ್‍ಗಳಲ್ಲಿ ಡಾ.ಜಿ.ಪರಮೇಶ್ವರ್ ಅವರ ಭಾವಚಿತ್ರಗಳನ್ನು ಹಾಕಿದ್ದರು ಮತ್ತು ಮಧ್ಯಾಹ್ನದ ನಂತರ ಇವನ್ನು ತೆರವುಗೊಳಿಸಿದ್ದಾರೆ. ಇದು ಕೂಡ ಕೆ.ಎನ್.ಆರ್ ಕೆಲಸವೇ ಎಂದು ಕಾಂಗ್ರೆಸ್‍ನ ಕೆಲವರ ಅನುಮಾನ.

ಈ ಬಗ್ಗೆ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷರಾದ ಕೆಂಚಮಾರಯ್ಯನವರು, ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ವಿರೋಧಿಸಿದ್ಧು, ಪರಮೇಶ್ವರರನ್ನ ಜೀರೋ ಟ್ರಾಪಿಕ್ ಎಂದು ಅವಹೇಳನ ಮಾಡುವುದು ಅಸ್ಪøಶ್ಯರ ಏಳಿಗೆಯನ್ನ ಸಹಿಸಿಕೊಳ್ಳದ ಕೆ.ಎನ್.ರಾಜಣ್ಣನ ಮನಸ್ಥಿತಿ ಎಂದು ಹೇಳಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಪಕ್ಷದಿಂದ ಹೊರಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ

ಕೆಂಚಮಾರಯ್ಯ

ಇತ್ತ ಕಾಂಗ್ರೆಸ್ ಬೆಂಬಲಿತ ದಲಿತ ಮುಖಂಡರಿಂದ ಕೆಂಚಮಾರಯ್ಯ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಪ್ರೆಸ್ ಮೀಟ್ ಮಾಡಿಸುವ ಮೂಲಕ ಅವರನ್ನು ಹತ್ತಿಕ್ಕಲೂ ಕೆ.ಎನ್.ಆರ್ ಪಡೆ ಪ್ರಯತ್ನಿಸಿದೆ. ಇದರಿಂದ ಹಠವಾದಿ ರಾಜಣ್ಣ ತನ್ನ ಉಳಿವಿಗಾಗಿ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳಲು ಸಿದ್ಧ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.

ಕೆ.ಎನ್.ರಾಜಣ್ಣರ ಮಗ ಆರ್.ರಾಜೇಂದ್ರ ಸಹಾ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ಸೋಲಿಗೆ ಅವರ ಇಬ್ಬರು ಸೊಸೆಯಂದಿರೆ ಕಾರಣ. ಇಬ್ಬರು ಮಕ್ಕಳಿಗೆ ಟಿಕೆಟ್ ಬೇಕೆಂದು ಹಠ ಹಿಡಿದರು. ಒಲ್ಲದ ಮನಸ್ಸಿನಲ್ಲಿ ದೇವೆಗೌಡರು ತುಮಕೂರಿನಲ್ಲಿ ಸ್ಫರ್ಧಿಸಿದ್ದಾರೆ. ಇದು ಅವರ ಸೋಲಿಗೆ ಕಾರಣ ಎಂದಿದ್ದಾರೆ.

ರಾಜಣ್ಣನಿಗೆ ಹೆದರಿ ನಾಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತರು

ಗೌರಿಶಂಕರ

ಬಿಜೆಪಿ ಗೆಲ್ಲಲು ಕೆ.ಎನ್.ರಾಜಣ್ಣನೇ ಕಾರಣ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಛೇರಿಯಲ್ಲಿ ಧಿಕ್ಕಾರ ಕೂಗಿದ್ದಾರೆ ಮತ್ತು ಟೌನ್‍ಹಾಲ್ ಹತ್ತಿರ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ತಿಳಿದ ರಾಜಣ್ಣ, ತಾನೇ ಪಕ್ಷದ ಕಛೇರಿಗೆ ಹೋದರು. ಅಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಲ್ಲಿಂದ ಸೀದಾ ಪ್ರತಿಭಟನೆ ಸ್ಥಳಕ್ಕೆ ಹೋದರು. ಅಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಸ್ಥಳಬಿಟ್ಟು ಒಬ್ಬೊಬ್ಬರೇ ಓಟ ಕಿತ್ತಿದ್ದಾರೆ. ಅಲ್ಲೇ ಪತ್ರಕರ್ತರ ಜೊತೆ ಮಾತನಾಡಿದ ಕೆ.ಎನ್.ಆರ್ ‘ತಾಕತ್ ಇದ್ದರೆ ನನ್ನ ಎದುರುಗಡೆ ಧಿಕ್ಕಾರ ಕೂಗಲಿ, ದೊಡ್ಡವರಾಗಲಿ ಚಿಕ್ಕವರಾಗಲಿ ನಾಲಿಗೆ ಸೀಳುತ್ತೇನೆ ಎಂದಿದ್ದಾರೆ . ದೇವೆಗೌಡರ ಸೋಲಿಗೆ ಜೀರೋ ಟ್ರಾಫಿಕ್ ಮಂತ್ರಿಯೇ ಕಾರಣ. ಅವರು ಒಮ್ಮೆ ತುಮಕೂರಿಗೆ ಬಂದರೆ 500 ಓಟುಗಳು ಹೋಗುತ್ತವೆ’ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವನ್ನು ನಾನು ಮತ್ತೆ ಕಟ್ಟುತ್ತೇನೆ ಎಲ್ಲಾ ಅತೃಪ್ತರನ್ನು ಒಂದುಗೂಡಿಸುತ್ತೇನೆ. ಬಸವರಾಜು ಅವರನ್ನು ಮತ್ತೆ ಕಾಂಗ್ರೆಸ್ ತರುತ್ತೇನೆ ಎಂದು ಹೇಳಿದ್ದಾರೆ. ‘ನನ್ನನ್ನು ಆಪೆಕ್ಸ್ ಬ್ಯಾಂಕಿಂದ ಕೆಳಗಿಳಿಸಲು ನೋಡುತ್ತಿದ್ದಾರೆ. ಐದು ವರ್ಷ ನಾನೇ ಮುಂದುವರೆಯುವುದು ಖಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಪ್ರೆಸ್ ಮೀಟ್

ಈ ನಡುವೆ ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ. ಇದು ಬರಿ ಅಧಿಕಾರದ ಆಸೆಯಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ರಾಮಕೃಷ್ಣ

ಈ ಮಧ್ಯೆ ಕಾಂಗ್ರೆಸ್‍ನ ತುಮಕೂರು ಜಿಲ್ಲಾಧ್ಯಾಕ್ಷ ರಾಮಕೃಷ್ಣ , ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆ.ಎನ್.ರಾಜಣ್ಣನ ವಿರುಧ್ಧ ದೂರು ನೀಡಿದ್ದಾರೆ. ಕೆ.ಎನ್.ಆರ್ ಮೈತ್ರಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ ಹಾಗೂ ಜಿಲ್ಲಾ ಕಛೇರಿಗೆ ಬಂದು ತನ್ನ ವಿರುಧ್ದ ಮಾತನಾಡದಂತೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ . ಜಿಲ್ಲೆಯ ಮತ್ತೊಬ್ಬ ಮುಖಂಡ ಮುರುಳಿಧರ್ ಹಾಲಪ್ಪ ‘ಪಕ್ಷದ ವಿರುದ್ಧ ಮಾತಾನಾಡುವ ಕೆಲಸ ಮಾಡಿದ ಎಲ್ಲರನ್ನೂ ಪಕ್ಷದಿಂದ ಉಚ್ವಾಟಿಸಬೇಕು’ ಎಂದು ಹೇಳಿದ್ದಾರೆ.

ಚಲುವರಾಯಸ್ವಾಮಿ

ತುಮಕೂರು ಜಿಲ್ಲೆ ಮೈತ್ರಿ ಪಕ್ಷ ಸೋತಿದ್ದೇ ಇಲ್ಲಿನ ಮುಖಂಡರ ಒಣ ಪ್ರತಿಷ್ಟೆ ಮತ್ತು ಇಂತಹ ಹತ್ತು ಹಲವು ಅಹಂಗಳಿಂದ ಎಂಬುದು ಸೋಲಿನ ನಂತರದಲ್ಲಾದರೂ ಅರಿವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಬದಲಾಗಿ ವಾತಾವರಣ ಹದಗೆಡುತ್ತಿದೆ. ಸಹಜವಾಗಿ ಅದರ ಲಾಭ ಬಿಜೆಪಿಗೆ ಆಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...