Homeಕರ್ನಾಟಕತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ'

ತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ’

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ.

- Advertisement -
- Advertisement -

| ಕುಮಾರ್  |

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ. ಬದಲಿಗೆ ಬೀದಿಕಾಳಗದ ರೂಪ ಪಡೆಯುವ ಸಂಭವ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆದು ನಿಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಯಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೇ ಉಲ್ಟಾ ಹೊಡೆದಿರುವುದು ಎಲ್ಲರಿಗೂ ತಿಳಿದಿದೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ವತಃ ಮಾಜಿ ಪ್ರಧಾನಿ ದೇವೆಗೌಡರೇ ಅಭ್ಯರ್ಥಿಯಾಗಿ ಸೋತಿದ್ದಾರೆ. ಮೂರು ಜನ ಜೆಡಿಎಸ್ ಶಾಸಕರು ಒಬ್ಬ ಕಾಂಗ್ರೆಸ್ ಶಾಸಕ ಇದ್ದರು ಸಹ ದೇವೇಗೌಡರು ಪರಾಭವಗೊಂಡಿರುವುದು ಎರಡು ಪಕ್ಷಗಳಿಗೂ ಮುಖಭಂಗವಾಗಿದೆ. ಆದರೆ ಇದರಿಂದ ಎರಡು ಪಕ್ಷಗಳ ಕೆಲವರಿಗೆ ಒಳಗೊಳಗೆ ಖುಷಿಯಾಗಿರುವಂತೆ ಕಾಣಿಸುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‍ನವರು ಕಣಕ್ಕಿಳಿಯುವುದನ್ನು ತೀವ್ರವಾಗಿ ವಿರೋಧಿಸಿದ್ದ ಕೆ.ಎನ್.ರಾಜಣ್ಣ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಎರಡು ಪಕ್ಷಗಳಲ್ಲಿದೆ. ಇದೇ ಕಾರಣಕ್ಕೆ ರಾಜಣ್ಣನ ವಿರುದ್ಧ ಅಭಿಪ್ರಾಯ ರೂಪಿಸಲು ಹೊರಟ ಕೆಲವು ಕಾಂಗ್ರೆಸ್ ಮುಖಂಡರು ಈಗ ರಾಜಣ್ಣನ ತಂಟೆಗೆ ಹೋಗಿದ್ದೆ ತಪ್ಪಾಯಿತು ಎನ್ನುವಂತೆ ಕಸಿವಿಸಿ ಅನುಭವಿಸುತ್ತಿದ್ದಾರೆ.

ದೇವೆಗೌಡ

ಚುನಾವಣೆಯ ಫಲಿತಾಂಶ ಬಂದನಂತರ ಕೆ.ಎನ್.ರಾಜಣ್ಣ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ‘ತುಮಕೂರಿನಲ್ಲಿ ದೇವೇಗೌಡರು ಸೋಲಲು ನಿಕಿಲ್ ಕುಮಾರಸ್ವಾಮಿ ಕಾರಣ. ಆತ ಕುಂಚಿಟಿಗ ಹೆಣ್ಣುಮಗಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ನಂತರ ಮದುವೆಯಾಗದೆ ಇದ್ದರಿಂದ ಮಧುಗಿರಿಯಲ್ಲಿರುವ ಕುಂಚಿಟಿಗರು ಮತನೀಡಿಲ್ಲ ಮತ್ತು ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡರು ಕೂಡ ಒಕ್ಕಲಿಗರಾಗಿದ್ದು ಅವರನ್ನು ಕಡೆಗಣಿಸಿದ್ದುಕಾರಣ ಎಂದು ಹೇಳಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನ ನಾನು ಉಪಮುಖ್ಯಮಂತ್ರಿ ಎಂದು ಪರಿಗಣನೆಯೇ ಮಾಡೋದಿಲ್ಲ, ಅವರು ಜೀರೋ ಟ್ರಾಫಿಕ್‍ಗೆ ಮಾತ್ರ ಸೀಮಿತ ಎಂದು ಹೇಳಿದ್ದರು.

ಇದರಿಂದ ಅಸಮಾಧಾನ ಹೆಚ್ಚಾಗಿ ಜೆಡಿಎಸ್ ನಾಯಕರು ನೇರವಾಗಿ ಕೆ.ಎನ್.ರಾಜಣ್ಣನವರನ್ನು ಟಾರ್ಗೆಟ್ ಮಾಡಿ ಟೀಕೆ ಮಾಡಲು ಶುರು ಮಾಡಿದರು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತನ್ನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ರಾಜಣ್ಣ ಬಿಜೆಪಿಗೆ ಬೆಂಬಲಿಸಿದ್ದರೆ ನೇರವಾಗಿ ಹೇಳಲಿ ಅತಿಯಾಗಿ ಮಾತಾನಾಡುವುದನ್ನ ನಿಲ್ಲಿಸಲಿ ಮತ್ತು ನೇರ ಯುದ್ಧಕ್ಕೆ ಬರಲಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯಿಂದ ಅನಾನೂಕೂಲವೇ ಹೆಚ್ಚು ಇದರಿಂದ ಹೊರಬರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎನ್.ಆರ್ ಕೇವಲ 500 ಮತಗಳ ಅಂತರದಿಂದ ಒಮ್ಮೆ ಮಧುಗಿರಿಯಿಂದ ಆರಿಸಿ ಬಂದ ಗೌರಿಶಂಕರ್ ಆಪರೇಷನ್ ಕಮಲದಲ್ಲಿ ಸೇಲಾಗಿದ್ದರು ಅವರ ಬಗ್ಗೆ ಮಾತನಾಡಲು ನನಗೆ ಹೇಸಿಗೆಯಾಗುತ್ತದೆ ಎಂದಿದ್ದಾರೆ.
ಡಾ.ಜಿ.ಪರಮೇಶ್ವರ್ ಹಠಾವೋ ಕಾಂಗ್ರೇಸ್ ಬಚಾವೋ

ಪರಮೇಶ್ವರ್

ತುಮಕೂರಿನ ವಾಲ್ಮೀಕಿ ನಗರದಲ್ಲಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಈ ಪೋಸ್ಟರ್‍ಗಳಲ್ಲಿ ಡಾ.ಜಿ.ಪರಮೇಶ್ವರ್ ಅವರ ಭಾವಚಿತ್ರಗಳನ್ನು ಹಾಕಿದ್ದರು ಮತ್ತು ಮಧ್ಯಾಹ್ನದ ನಂತರ ಇವನ್ನು ತೆರವುಗೊಳಿಸಿದ್ದಾರೆ. ಇದು ಕೂಡ ಕೆ.ಎನ್.ಆರ್ ಕೆಲಸವೇ ಎಂದು ಕಾಂಗ್ರೆಸ್‍ನ ಕೆಲವರ ಅನುಮಾನ.

ಈ ಬಗ್ಗೆ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷರಾದ ಕೆಂಚಮಾರಯ್ಯನವರು, ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ವಿರೋಧಿಸಿದ್ಧು, ಪರಮೇಶ್ವರರನ್ನ ಜೀರೋ ಟ್ರಾಪಿಕ್ ಎಂದು ಅವಹೇಳನ ಮಾಡುವುದು ಅಸ್ಪøಶ್ಯರ ಏಳಿಗೆಯನ್ನ ಸಹಿಸಿಕೊಳ್ಳದ ಕೆ.ಎನ್.ರಾಜಣ್ಣನ ಮನಸ್ಥಿತಿ ಎಂದು ಹೇಳಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಪಕ್ಷದಿಂದ ಹೊರಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ

ಕೆಂಚಮಾರಯ್ಯ

ಇತ್ತ ಕಾಂಗ್ರೆಸ್ ಬೆಂಬಲಿತ ದಲಿತ ಮುಖಂಡರಿಂದ ಕೆಂಚಮಾರಯ್ಯ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಪ್ರೆಸ್ ಮೀಟ್ ಮಾಡಿಸುವ ಮೂಲಕ ಅವರನ್ನು ಹತ್ತಿಕ್ಕಲೂ ಕೆ.ಎನ್.ಆರ್ ಪಡೆ ಪ್ರಯತ್ನಿಸಿದೆ. ಇದರಿಂದ ಹಠವಾದಿ ರಾಜಣ್ಣ ತನ್ನ ಉಳಿವಿಗಾಗಿ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳಲು ಸಿದ್ಧ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.

ಕೆ.ಎನ್.ರಾಜಣ್ಣರ ಮಗ ಆರ್.ರಾಜೇಂದ್ರ ಸಹಾ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ಸೋಲಿಗೆ ಅವರ ಇಬ್ಬರು ಸೊಸೆಯಂದಿರೆ ಕಾರಣ. ಇಬ್ಬರು ಮಕ್ಕಳಿಗೆ ಟಿಕೆಟ್ ಬೇಕೆಂದು ಹಠ ಹಿಡಿದರು. ಒಲ್ಲದ ಮನಸ್ಸಿನಲ್ಲಿ ದೇವೆಗೌಡರು ತುಮಕೂರಿನಲ್ಲಿ ಸ್ಫರ್ಧಿಸಿದ್ದಾರೆ. ಇದು ಅವರ ಸೋಲಿಗೆ ಕಾರಣ ಎಂದಿದ್ದಾರೆ.

ರಾಜಣ್ಣನಿಗೆ ಹೆದರಿ ನಾಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತರು

ಗೌರಿಶಂಕರ

ಬಿಜೆಪಿ ಗೆಲ್ಲಲು ಕೆ.ಎನ್.ರಾಜಣ್ಣನೇ ಕಾರಣ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಛೇರಿಯಲ್ಲಿ ಧಿಕ್ಕಾರ ಕೂಗಿದ್ದಾರೆ ಮತ್ತು ಟೌನ್‍ಹಾಲ್ ಹತ್ತಿರ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ತಿಳಿದ ರಾಜಣ್ಣ, ತಾನೇ ಪಕ್ಷದ ಕಛೇರಿಗೆ ಹೋದರು. ಅಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಲ್ಲಿಂದ ಸೀದಾ ಪ್ರತಿಭಟನೆ ಸ್ಥಳಕ್ಕೆ ಹೋದರು. ಅಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಸ್ಥಳಬಿಟ್ಟು ಒಬ್ಬೊಬ್ಬರೇ ಓಟ ಕಿತ್ತಿದ್ದಾರೆ. ಅಲ್ಲೇ ಪತ್ರಕರ್ತರ ಜೊತೆ ಮಾತನಾಡಿದ ಕೆ.ಎನ್.ಆರ್ ‘ತಾಕತ್ ಇದ್ದರೆ ನನ್ನ ಎದುರುಗಡೆ ಧಿಕ್ಕಾರ ಕೂಗಲಿ, ದೊಡ್ಡವರಾಗಲಿ ಚಿಕ್ಕವರಾಗಲಿ ನಾಲಿಗೆ ಸೀಳುತ್ತೇನೆ ಎಂದಿದ್ದಾರೆ . ದೇವೆಗೌಡರ ಸೋಲಿಗೆ ಜೀರೋ ಟ್ರಾಫಿಕ್ ಮಂತ್ರಿಯೇ ಕಾರಣ. ಅವರು ಒಮ್ಮೆ ತುಮಕೂರಿಗೆ ಬಂದರೆ 500 ಓಟುಗಳು ಹೋಗುತ್ತವೆ’ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವನ್ನು ನಾನು ಮತ್ತೆ ಕಟ್ಟುತ್ತೇನೆ ಎಲ್ಲಾ ಅತೃಪ್ತರನ್ನು ಒಂದುಗೂಡಿಸುತ್ತೇನೆ. ಬಸವರಾಜು ಅವರನ್ನು ಮತ್ತೆ ಕಾಂಗ್ರೆಸ್ ತರುತ್ತೇನೆ ಎಂದು ಹೇಳಿದ್ದಾರೆ. ‘ನನ್ನನ್ನು ಆಪೆಕ್ಸ್ ಬ್ಯಾಂಕಿಂದ ಕೆಳಗಿಳಿಸಲು ನೋಡುತ್ತಿದ್ದಾರೆ. ಐದು ವರ್ಷ ನಾನೇ ಮುಂದುವರೆಯುವುದು ಖಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಪ್ರೆಸ್ ಮೀಟ್

ಈ ನಡುವೆ ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ. ಇದು ಬರಿ ಅಧಿಕಾರದ ಆಸೆಯಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ರಾಮಕೃಷ್ಣ

ಈ ಮಧ್ಯೆ ಕಾಂಗ್ರೆಸ್‍ನ ತುಮಕೂರು ಜಿಲ್ಲಾಧ್ಯಾಕ್ಷ ರಾಮಕೃಷ್ಣ , ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆ.ಎನ್.ರಾಜಣ್ಣನ ವಿರುಧ್ಧ ದೂರು ನೀಡಿದ್ದಾರೆ. ಕೆ.ಎನ್.ಆರ್ ಮೈತ್ರಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ ಹಾಗೂ ಜಿಲ್ಲಾ ಕಛೇರಿಗೆ ಬಂದು ತನ್ನ ವಿರುಧ್ದ ಮಾತನಾಡದಂತೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ . ಜಿಲ್ಲೆಯ ಮತ್ತೊಬ್ಬ ಮುಖಂಡ ಮುರುಳಿಧರ್ ಹಾಲಪ್ಪ ‘ಪಕ್ಷದ ವಿರುದ್ಧ ಮಾತಾನಾಡುವ ಕೆಲಸ ಮಾಡಿದ ಎಲ್ಲರನ್ನೂ ಪಕ್ಷದಿಂದ ಉಚ್ವಾಟಿಸಬೇಕು’ ಎಂದು ಹೇಳಿದ್ದಾರೆ.

ಚಲುವರಾಯಸ್ವಾಮಿ

ತುಮಕೂರು ಜಿಲ್ಲೆ ಮೈತ್ರಿ ಪಕ್ಷ ಸೋತಿದ್ದೇ ಇಲ್ಲಿನ ಮುಖಂಡರ ಒಣ ಪ್ರತಿಷ್ಟೆ ಮತ್ತು ಇಂತಹ ಹತ್ತು ಹಲವು ಅಹಂಗಳಿಂದ ಎಂಬುದು ಸೋಲಿನ ನಂತರದಲ್ಲಾದರೂ ಅರಿವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಬದಲಾಗಿ ವಾತಾವರಣ ಹದಗೆಡುತ್ತಿದೆ. ಸಹಜವಾಗಿ ಅದರ ಲಾಭ ಬಿಜೆಪಿಗೆ ಆಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...