Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...