Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...