Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...