Homeಮುಖಪುಟಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

ಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

- Advertisement -
- Advertisement -

| ರಮಾನಂದ ಅಂಕೋಲ |

ವಿಶ್ವಬ್ಯಾಂಕ್‌ನ ಮುಖ್ಯ ಆರ್ಥಿಕ ತಜ್ಞ ಮತ್ತು ಭಾರತ ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರ ಕೌಶಿಕ್ ಬಸುರವರು ನಿರುದ್ಯೋಗದ ಸಮಸ್ಯೆಯ ಬಗ್ಗೆ ಭಾರತದ ಕೇಂದ್ರ ಸರ್ಕಾರ ಸಮರ್ಪಕವಾಗಿ ಗಮನ ನೀಡಿಲ್ಲದಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ ಎಂದು ತಮ್ಮ ನ್ಯೂಯಾರ್ಕ ಟೈಮ್ಸ್ ಪತ್ರಿಕೆಗೆ ಬರೆದ ಅಂಕಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನರೆಂದ್ರ ಮೋದಿ ಸರ್ಕಾರವು ಕೆಲವೇ ಜನರ ಬೃಹತ್ ಉದ್ಯಮದತ್ತ ಗಮನ ಹರಿಸಿದೆಯೇ ಹೊರತು ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಹಾಗೂ ಕೃಷಿ ಕ್ಷೇತ್ರದಲ್ಲಿ ಸೃಷ್ಟಿಸಬಹುದಾಗಿದ್ದ ಉದ್ಯೋಗಗಳ ಬಗ್ಗೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ನರೆಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರವು ಅಧಿಕೃತವಾದ ಸರ್ಕಾರಿ ಅಂಕಿ-ಅಂಶಗಳನ್ನು ಮುಚ್ಚಿಟ್ಟ ಕಾರಣ ಭಾರತದಲ್ಲಿ ನಿರುದ್ಯೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಆರ್ಥಿಕ ತಜ್ಞರು ಖಾಸಗಿ ಮತ್ತು ಪರೋಕ್ಷ ಮೂಲಗಳನ್ನು ಅವಲಂಬಿಸಬೇಕಾಗಿದೆ ಎಂದು ತಮ್ಮ ಅಂಕಣದಲ್ಲಿ ದೂರಿದ್ದಾರೆ.

ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಹೇಳಿದಂತೆ ನೋಟು ನಿಷೇಧದ ನಂತರ ಒಂದು ವರ್ಷದ ಅವಧಿಯಲ್ಲಿ (2017-2018) ದಾಖಲಾದ 6.1% ರಷ್ಟು ನಿರುದ್ಯೋಗ ದರದ ಪ್ರಮಾಣ ಕಳೆದ ೪೫ ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ನಿರುದ್ಯೋಗಕ್ಕೆ ಸಂಬಂಧಿಸಿದ ವರದಿಯನ್ನು ಸಿದ್ದಪಡಿಸಿದ್ದ ಕೇಂದ್ರ ಸಾಂಖ್ಯಿಕ ಆಯೋಗದ ಇಬ್ಬರು ಸ್ವತಂತ್ರ ಸದಸ್ಯರು ಸಕಾರ ಈ ಮಾಹಿತಿಯನ್ನು ಪ್ರಕಟಿಸಲು ತಡೆಹಿಡಿದ ಕಾರಣಕ್ಕೆ ರಾಜೀನಾಮೆ ನೀಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಸಾಂಖ್ಯಿಕವಾದ ದತ್ತಾಂಶ ಸಂಗ್ರಹಣೆಯಲ್ಲಿ ಜಾಗತಿಕವಾಗಿ ಪ್ರಶಂಸೆಗೆ ಪಾತ್ರವಾಗಿದ್ದ ಸಂಸ್ಥೆಯೊಂದು ಸಿದ್ದಪಡಿಸಿದ್ದ ವರದಿಯನ್ನು ಮುಚ್ಚಿಟ್ಟಿರುವುದು ಭಾರತದ ಮಟಿಗೆ ಅಸಾಧರಣವಾದುದು. ಸರ್ಕಾರಿ ದತ್ತಾಂಶದ ಅನುಪಸ್ಥಿತಿಯಲ್ಲಿ ಸೆಂಟರ್ ಫಾರ್ ಮಾನಿಟರಿಂಗ್ ಆಫ್ ಇಂಡಿಯನ್ ಎಕಾನಮಿ ಮತ್ತು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯ ಸಂಶೋಧನಾ ವರದಿಗಳು ಭಾರತದಲ್ಲಿನ ನಿರುದ್ಯೋಗದ ಭೀಕರತೆಯ ಬಗ್ಗೆ ಮಾಹಿತಿ ಚೆಲ್ಲುತ್ತಿವೆ ಎಂದಿದ್ದಾರೆ.

ಈ ನಿರುದ್ಯೋಗದ ಭೀಕರತೆ ಆಕಸ್ಮಿಕವೇನಲ್ಲ. ದೇಶದ ಆರ್ಥಿಕತೆಯ ಹಳಿ ತಪ್ಪಿಸಿದ ನೋಟು ನಿಷೇಧ ಮತ್ತು ಜಿ.ಎಸ್.ಟಿ ಯ ಅಸಮರ್ಪಕ ಜಾರಿಯ ಉತ್ಪನ್ನ ಇದು ಕೌಶಿಕ್ ಬಸು ತಮ್ಮ ಲೇಖನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೃಪೆ: ಸ್ಕ್ರೋಲ್.ಇನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...