Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...