Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...