Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...