Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...