Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...