Homeಮುಖಪುಟಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

ಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

- Advertisement -
- Advertisement -

ಸಂತ ತುಕಾರಾಂ ಎಂದರೆ ನಮಗೆ ಡಾ ರಾಜ್ ಅಭಿನಯದ “ಜಯತು ಜಯ ವಿಠಲ” ಎಂದು ಹಾಡಿಕೊಂಡು, ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ, ಸದಾ ಸಾಧು ಸ್ವಭಾವದ ಆಕಳಂತೆ ಇದ್ದು, ಪಡಬಾರದ ಪಾಡನ್ನೆಲ್ಲಾ ಪಟ್ಟ ಭಕ್ತನ ಕಾಪಾಡದ ದೇವರು ಕೊನೆಗೆ ನನ್ನ ಹತ್ತಿರ ನೆಮ್ಮದಿಯಾಗಿರು ಎಂದು ಪುಷ್ಪಕವಿಮಾನದಲ್ಲಿ ಬಂದು ಕರೆದುಕೊಂಡು ಹೋಗುವ ಚಿತ್ರವು ಮನಸ್ಸಿನಲ್ಲಿ ಬಂದರೆ ಅದು ನಮ್ಮ ತಪ್ಪಲ್ಲ. ಪೌರಾಣಿಕದ ಬೂದಿಯಲ್ಲಿ ಇತಿಹಾಸದ ಕೆಂಡವನ್ನು ಮರೆಮಾಡುತ್ತಾ ಒಂದು ನಿರ್ದಿಷ್ಟ ಮನಸ್ಥಿತಿಯಿಂದ ಬರಹಗಾರರು ಸಾಮಾಜಿಕ ಸಾಮರಸ್ಯದಲ್ಲಿ, ಧಾರ್ಮಿಕ ಸಮಾನತೆಯಲ್ಲಿ, ಆಧ್ಯಾತ್ಮಿಕ ಔನ್ನತ್ಯದಲ್ಲಿ ಕ್ರಾಂತಿಕಾರಿ ಸಿಂಹಗಳಾಗಿದ್ದವರನ್ನೂ ಮುಂದೆ ಕುರಿಗಳಂತೆ ತೋರಿಬಿಡುತ್ತಾರೆ ಎಂದು ಸಾಳುಂಖೆ ಎಚ್ಚರಿಸುತ್ತಾರೆ.

ಕಳೆದ ಮೂರು ಶತಮಾನಗಳಿಂದ ತುಕಾರಾಮ ಮಹಾರಾಷ್ಟ್ರದ ಜನರ ಹೃದಯದಲ್ಲಿ ಸಂವೇದನೆಯಾದ. ಅವನ ಅಭಂಗಗಳು ಮರಾಠ ಸಂಸ್ಕೃತಿಯ ಭಾಗವಾಗುವಷ್ಟು ನಾಡು ಅವನನ್ನು ಪ್ರೀತಿಸಿತು. ಅದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಬೇಕಾದರೆ ಮನಸ್ಸಿನಲ್ಲಿರುವ ಹಳೆಯ ಸಂತ ತುಕಾರಾಮನ ಪ್ರತಿಮೆಯನ್ನು ದೂರ ಮಾಡಬೇಕಾಗುತ್ತದೆ ಎನ್ನುವರು ಸಾಳುಂಖೆ. ಏಕೆಂದರೆ ಅದು ಅವನ ಮೂಲ ವ್ಯಕ್ತಿತ್ವಕ್ಕೆ ಹೋಲುವುದಿಲ್ಲ. ದಿವಾಳಿಯಾಗಿ, ಅಸಹಾಯಕನಾಗಿ ದೇವರ ಭಕ್ತನಾಗಿ, ಸರಿಯಾಗಿ ಸಂಸಾರ ತೂಗಿಸಲಾಗದೇ, ಸದಾ ತಾಳ ಕುಟ್ಟುತ್ತಾ ಕುಳಿತುಕೊಂಡು, ವ್ಯವಹಾರ ಶೂನ್ಯ, ಮುಗ್ಧ ಭೋಳೆ ಸಂತನಂತೆ (ಅದೇ ಸಂತ ತುಕಾರಾಂ ಚಿತ್ರದಲ್ಲಿ ತೋರಿಸುವಂತೆ) ಇರಿಸಲಾಗಿದೆ. ಆದರೆ ಧರ್ಮದ ಹೆಸರಿನಲ್ಲಿ ಅನೀತಿಯ ವ್ಯಾಪಾರ ನಡೆಸುತ್ತಿದ್ದ ಧಾರ್ಮಿಕಸತ್ತೆಯ ವಿರುದ್ಧವಾಗಿ ಇವನು ಮಹಾನ್ ಯೋಧನಂತೆ ಹೋರಾಡಿದ್ದ. ಅತ್ಯಂತ ಪ್ರಬಲ ಮತ್ತು ಮಜಬೂತಾಗಿರುವ ಸಮಾಜ ವ್ಯವಸ್ಥೆಯ ಮೂಲಕ್ಕೆ ಸಿಡಿಮದ್ದು ಇರಿಸುವ ಕಾರ್ಯವನ್ನು ಅವನು ಬದುಕಿನ ಉದ್ದಕ್ಕೂ ಮಾಡುತ್ತಲೇ ಬಂದಿದ್ದ.

ತುಕಾರಾಮನ ಜೀವನದ ಕ್ರಾಂತಿಕಾರಕ ಅನೇಕ ಘಟನೆಗಳನ್ನು ನಿರ್ಲಕ್ಷಿಸಿ, ಅವನನ್ನು ಸಂತನಾಗಿ ತೋರುವ ಧಾವಂತದಲ್ಲಿ ಮರೆಮಾಚಲಾಗಿರುವ ಸಂಗತಿಗಳ ಮೇಲೆ ಸಾಳುಂಖೆ ಬೆಳಕು ಚೆಲ್ಲುತ್ತಾರೆ.

ತನ್ನ ಅಭಂಗಗಳಲ್ಲಿ ತುಕಾರಾಮ ಬುವಾ ಡಾಂಭಿಕ ವ್ಯವಸ್ಥೆಯ ಮೇಲೆ ನೇರಾನೇರ ಪ್ರಹಾರ ಮಾಡುತ್ತಾರೆ. ಧಾರ್ಮಿಕತೆಯು ಮಾಡುವ ಅನ್ಯಾಯಗಳನ್ನು ಖಂಡಿಸಿ ಬರೆಯುತ್ತಿದ್ದ ಅವನ ಅಭಂಗಗಳನ್ನು ಇಂದ್ರಾಣಿ ನದಿಯಲ್ಲಿ ಮುಳುಗಿಸಿಬಿಡುವ ಶಿಕ್ಷೆ ಕೊಡುವುದು ತಿಳಿದಿರುವುದೇ. ಆದರೆ ಹೊಡೆದು, ಬಡಿದು, ನಿಂದಿಸಿ ನಾನಾ ರೀತಿಯಲ್ಲಿ ಹಿಂಸೆಗಳನ್ನು ಕೊಟ್ಟರೂ, “ತುಂಡು ಮಾಡಿ ಕೊಚ್ಚಿ ಹಾಕಿದರೂ ಹೆದರಲಾರೆ” ಎನ್ನುವ ತುಕಾರಾಮ ಅಭಂಗಗಳನ್ನು ಬರೆಯುತ್ತಾನೆ.

ಧಾರ್ಮಿಕನಾಗಿಯೇ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ತುಕಾರಾಮ ಸತ್ತದ್ದೂ ನಿಗೂಢವೇ. ಇಂದ್ರಾಣಿ ನದಿಯ ತೀರದಲ್ಲಿ ಕೀರ್ತನೆ ಹಾಡುತ್ತಿದ್ದಾಗ ಅದೃಶ್ಯನಾದ ಎಂಬ ಐತಿಹ್ಯವನ್ನು ಬೇಧಿಸಿದರೆ ರಾಮೇಶ್ವರ ಭಟ್ಟ ತುಕಾರಾಮನ ಮೇಲೆ ಖಟ್ಲೆ ಹೂಡಿದವನು, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡವನು, ಬಹಿಷ್ಕಾರ ಹಾಕಿಸಿದವನು, ಗಡಿಪಾರಿನ ಆಜ್ಞೆ ಮಾಡಿಸಿದವನು, ಅಭಂಗಗಳನ್ನು ಇಂದ್ರಾಯಣಿ ನದಿಯಲ್ಲಿ ಮುಳುಗಿಸಿದವನು, ಅಂತವನು ಸಾರುವುದೇನೆಂದರೆ, ತುಕಾರಾಮನು ಸದೇಹಿಯಾಗಿ ವೈಕುಂಠಕ್ಕೆ ಹೋದನೆಂದು. ಅಂದರೆ ಹೆಣವೂ ಕೂಡ ಸಿಗದಂತೆ ಮುಗಿಸಿದರೇ?

ತುಕಾರಾಮನ ವೈಕುಂಠಯಾನ ಹೇಗೆ ಹತ್ಯೆಯಾಗಿದ್ದಿರಬಹುದೆಂದು ಸಾಳುಂಖೆ ಎಳೆ ಎಳೆಯಾಗಿ ಬಿಡಿಸುತ್ತಾ ಹೋಗುತ್ತಾರೆ.

ಒಟ್ಟಾರೆ ತುಕಾರಾಮನೆಂಬ ಕ್ರಾಂತಿಕಾರಿಯನ್ನು ಅವನ ಸಾಮಾಜಿಕ ಹೋರಾಟದ ಮತ್ತು ಆಧ್ಯಾತ್ಮಿಕತೆಯ ಮೌಲ್ಯದ ಸಮೇತ ಪರಿಚಯಿಸಿ ಕೊಡುವ ಸಾಳುಂಖೆಯವರ ಕೃತಿಯನ್ನು ಚಂದ್ರಕಾಂತ ಪೋಕಳೆ ಕನ್ನಡಕ್ಕೆ ತಂದಿದ್ದಾರೆ. ಪುಟಪುಟದಲ್ಲೂ ನಮ್ಮ ಭಾರತದ ಧಾರ್ಮಿಕತೆಯಲ್ಲಿ ತನ್ನ ಕ್ರೌರ್ಯ ಮತ್ತು ಅಸಹನೆಯನ್ನು ಮೆರೆದ ಧಾರ್ಮಿಕಸತ್ತೆಯ ದೌರ್ಜನ್ಯದ ಅನಾವರಣವಾಗುತ್ತದೆ. ಜೊತೆಗೆ ತುಕಾರಾಮನ ಹೋರಾಟದ ಘನತೆ ಮತ್ತು ತಾತ್ವಿಕತೆಯು ಪುಟಕ್ಕಿಟ್ಟಂತೆ ಹೊಳೆಯುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಇದನ್ನು ಪ್ರಕಟಿಸಿ ಸಂತ ಯೋಧನ ಅರಿಯುವಲ್ಲಿ ಉಪಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂತ ತುಕಾರಾಮನ ನಿಜ ಚರಿತ್ರೆಯನ್ನು ತಿಳಿಸಿರುವ ಡಾ.ಸಾಳುಂಕೆ ಮತ್ತು ಚಂದ್ರಕಾಂತ ಪೋಕಳೆಯವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...