Homeಮುಖಪುಟಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

ಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

- Advertisement -
- Advertisement -

ಸಂತ ತುಕಾರಾಂ ಎಂದರೆ ನಮಗೆ ಡಾ ರಾಜ್ ಅಭಿನಯದ “ಜಯತು ಜಯ ವಿಠಲ” ಎಂದು ಹಾಡಿಕೊಂಡು, ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ, ಸದಾ ಸಾಧು ಸ್ವಭಾವದ ಆಕಳಂತೆ ಇದ್ದು, ಪಡಬಾರದ ಪಾಡನ್ನೆಲ್ಲಾ ಪಟ್ಟ ಭಕ್ತನ ಕಾಪಾಡದ ದೇವರು ಕೊನೆಗೆ ನನ್ನ ಹತ್ತಿರ ನೆಮ್ಮದಿಯಾಗಿರು ಎಂದು ಪುಷ್ಪಕವಿಮಾನದಲ್ಲಿ ಬಂದು ಕರೆದುಕೊಂಡು ಹೋಗುವ ಚಿತ್ರವು ಮನಸ್ಸಿನಲ್ಲಿ ಬಂದರೆ ಅದು ನಮ್ಮ ತಪ್ಪಲ್ಲ. ಪೌರಾಣಿಕದ ಬೂದಿಯಲ್ಲಿ ಇತಿಹಾಸದ ಕೆಂಡವನ್ನು ಮರೆಮಾಡುತ್ತಾ ಒಂದು ನಿರ್ದಿಷ್ಟ ಮನಸ್ಥಿತಿಯಿಂದ ಬರಹಗಾರರು ಸಾಮಾಜಿಕ ಸಾಮರಸ್ಯದಲ್ಲಿ, ಧಾರ್ಮಿಕ ಸಮಾನತೆಯಲ್ಲಿ, ಆಧ್ಯಾತ್ಮಿಕ ಔನ್ನತ್ಯದಲ್ಲಿ ಕ್ರಾಂತಿಕಾರಿ ಸಿಂಹಗಳಾಗಿದ್ದವರನ್ನೂ ಮುಂದೆ ಕುರಿಗಳಂತೆ ತೋರಿಬಿಡುತ್ತಾರೆ ಎಂದು ಸಾಳುಂಖೆ ಎಚ್ಚರಿಸುತ್ತಾರೆ.

ಕಳೆದ ಮೂರು ಶತಮಾನಗಳಿಂದ ತುಕಾರಾಮ ಮಹಾರಾಷ್ಟ್ರದ ಜನರ ಹೃದಯದಲ್ಲಿ ಸಂವೇದನೆಯಾದ. ಅವನ ಅಭಂಗಗಳು ಮರಾಠ ಸಂಸ್ಕೃತಿಯ ಭಾಗವಾಗುವಷ್ಟು ನಾಡು ಅವನನ್ನು ಪ್ರೀತಿಸಿತು. ಅದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಬೇಕಾದರೆ ಮನಸ್ಸಿನಲ್ಲಿರುವ ಹಳೆಯ ಸಂತ ತುಕಾರಾಮನ ಪ್ರತಿಮೆಯನ್ನು ದೂರ ಮಾಡಬೇಕಾಗುತ್ತದೆ ಎನ್ನುವರು ಸಾಳುಂಖೆ. ಏಕೆಂದರೆ ಅದು ಅವನ ಮೂಲ ವ್ಯಕ್ತಿತ್ವಕ್ಕೆ ಹೋಲುವುದಿಲ್ಲ. ದಿವಾಳಿಯಾಗಿ, ಅಸಹಾಯಕನಾಗಿ ದೇವರ ಭಕ್ತನಾಗಿ, ಸರಿಯಾಗಿ ಸಂಸಾರ ತೂಗಿಸಲಾಗದೇ, ಸದಾ ತಾಳ ಕುಟ್ಟುತ್ತಾ ಕುಳಿತುಕೊಂಡು, ವ್ಯವಹಾರ ಶೂನ್ಯ, ಮುಗ್ಧ ಭೋಳೆ ಸಂತನಂತೆ (ಅದೇ ಸಂತ ತುಕಾರಾಂ ಚಿತ್ರದಲ್ಲಿ ತೋರಿಸುವಂತೆ) ಇರಿಸಲಾಗಿದೆ. ಆದರೆ ಧರ್ಮದ ಹೆಸರಿನಲ್ಲಿ ಅನೀತಿಯ ವ್ಯಾಪಾರ ನಡೆಸುತ್ತಿದ್ದ ಧಾರ್ಮಿಕಸತ್ತೆಯ ವಿರುದ್ಧವಾಗಿ ಇವನು ಮಹಾನ್ ಯೋಧನಂತೆ ಹೋರಾಡಿದ್ದ. ಅತ್ಯಂತ ಪ್ರಬಲ ಮತ್ತು ಮಜಬೂತಾಗಿರುವ ಸಮಾಜ ವ್ಯವಸ್ಥೆಯ ಮೂಲಕ್ಕೆ ಸಿಡಿಮದ್ದು ಇರಿಸುವ ಕಾರ್ಯವನ್ನು ಅವನು ಬದುಕಿನ ಉದ್ದಕ್ಕೂ ಮಾಡುತ್ತಲೇ ಬಂದಿದ್ದ.

ತುಕಾರಾಮನ ಜೀವನದ ಕ್ರಾಂತಿಕಾರಕ ಅನೇಕ ಘಟನೆಗಳನ್ನು ನಿರ್ಲಕ್ಷಿಸಿ, ಅವನನ್ನು ಸಂತನಾಗಿ ತೋರುವ ಧಾವಂತದಲ್ಲಿ ಮರೆಮಾಚಲಾಗಿರುವ ಸಂಗತಿಗಳ ಮೇಲೆ ಸಾಳುಂಖೆ ಬೆಳಕು ಚೆಲ್ಲುತ್ತಾರೆ.

ತನ್ನ ಅಭಂಗಗಳಲ್ಲಿ ತುಕಾರಾಮ ಬುವಾ ಡಾಂಭಿಕ ವ್ಯವಸ್ಥೆಯ ಮೇಲೆ ನೇರಾನೇರ ಪ್ರಹಾರ ಮಾಡುತ್ತಾರೆ. ಧಾರ್ಮಿಕತೆಯು ಮಾಡುವ ಅನ್ಯಾಯಗಳನ್ನು ಖಂಡಿಸಿ ಬರೆಯುತ್ತಿದ್ದ ಅವನ ಅಭಂಗಗಳನ್ನು ಇಂದ್ರಾಣಿ ನದಿಯಲ್ಲಿ ಮುಳುಗಿಸಿಬಿಡುವ ಶಿಕ್ಷೆ ಕೊಡುವುದು ತಿಳಿದಿರುವುದೇ. ಆದರೆ ಹೊಡೆದು, ಬಡಿದು, ನಿಂದಿಸಿ ನಾನಾ ರೀತಿಯಲ್ಲಿ ಹಿಂಸೆಗಳನ್ನು ಕೊಟ್ಟರೂ, “ತುಂಡು ಮಾಡಿ ಕೊಚ್ಚಿ ಹಾಕಿದರೂ ಹೆದರಲಾರೆ” ಎನ್ನುವ ತುಕಾರಾಮ ಅಭಂಗಗಳನ್ನು ಬರೆಯುತ್ತಾನೆ.

ಧಾರ್ಮಿಕನಾಗಿಯೇ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ತುಕಾರಾಮ ಸತ್ತದ್ದೂ ನಿಗೂಢವೇ. ಇಂದ್ರಾಣಿ ನದಿಯ ತೀರದಲ್ಲಿ ಕೀರ್ತನೆ ಹಾಡುತ್ತಿದ್ದಾಗ ಅದೃಶ್ಯನಾದ ಎಂಬ ಐತಿಹ್ಯವನ್ನು ಬೇಧಿಸಿದರೆ ರಾಮೇಶ್ವರ ಭಟ್ಟ ತುಕಾರಾಮನ ಮೇಲೆ ಖಟ್ಲೆ ಹೂಡಿದವನು, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡವನು, ಬಹಿಷ್ಕಾರ ಹಾಕಿಸಿದವನು, ಗಡಿಪಾರಿನ ಆಜ್ಞೆ ಮಾಡಿಸಿದವನು, ಅಭಂಗಗಳನ್ನು ಇಂದ್ರಾಯಣಿ ನದಿಯಲ್ಲಿ ಮುಳುಗಿಸಿದವನು, ಅಂತವನು ಸಾರುವುದೇನೆಂದರೆ, ತುಕಾರಾಮನು ಸದೇಹಿಯಾಗಿ ವೈಕುಂಠಕ್ಕೆ ಹೋದನೆಂದು. ಅಂದರೆ ಹೆಣವೂ ಕೂಡ ಸಿಗದಂತೆ ಮುಗಿಸಿದರೇ?

ತುಕಾರಾಮನ ವೈಕುಂಠಯಾನ ಹೇಗೆ ಹತ್ಯೆಯಾಗಿದ್ದಿರಬಹುದೆಂದು ಸಾಳುಂಖೆ ಎಳೆ ಎಳೆಯಾಗಿ ಬಿಡಿಸುತ್ತಾ ಹೋಗುತ್ತಾರೆ.

ಒಟ್ಟಾರೆ ತುಕಾರಾಮನೆಂಬ ಕ್ರಾಂತಿಕಾರಿಯನ್ನು ಅವನ ಸಾಮಾಜಿಕ ಹೋರಾಟದ ಮತ್ತು ಆಧ್ಯಾತ್ಮಿಕತೆಯ ಮೌಲ್ಯದ ಸಮೇತ ಪರಿಚಯಿಸಿ ಕೊಡುವ ಸಾಳುಂಖೆಯವರ ಕೃತಿಯನ್ನು ಚಂದ್ರಕಾಂತ ಪೋಕಳೆ ಕನ್ನಡಕ್ಕೆ ತಂದಿದ್ದಾರೆ. ಪುಟಪುಟದಲ್ಲೂ ನಮ್ಮ ಭಾರತದ ಧಾರ್ಮಿಕತೆಯಲ್ಲಿ ತನ್ನ ಕ್ರೌರ್ಯ ಮತ್ತು ಅಸಹನೆಯನ್ನು ಮೆರೆದ ಧಾರ್ಮಿಕಸತ್ತೆಯ ದೌರ್ಜನ್ಯದ ಅನಾವರಣವಾಗುತ್ತದೆ. ಜೊತೆಗೆ ತುಕಾರಾಮನ ಹೋರಾಟದ ಘನತೆ ಮತ್ತು ತಾತ್ವಿಕತೆಯು ಪುಟಕ್ಕಿಟ್ಟಂತೆ ಹೊಳೆಯುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಇದನ್ನು ಪ್ರಕಟಿಸಿ ಸಂತ ಯೋಧನ ಅರಿಯುವಲ್ಲಿ ಉಪಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂತ ತುಕಾರಾಮನ ನಿಜ ಚರಿತ್ರೆಯನ್ನು ತಿಳಿಸಿರುವ ಡಾ.ಸಾಳುಂಕೆ ಮತ್ತು ಚಂದ್ರಕಾಂತ ಪೋಕಳೆಯವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...