Homeಮುಖಪುಟಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

ಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

- Advertisement -
- Advertisement -

ಒಬ್ಬ ಗಂಡು ಮತ್ತು ಹೆಣ್ಣು ಜೊತೆಯಾಗಿ ಓಡಾಡ್ತಿದ್ದಾರೆ, ಹೆಚ್ಚು ಸಮಯ ಮಾತಾಡ್ತಿದ್ದಾರೆ ಅಂತ ನೋಡಿದ ತಕ್ಷಣ ಅವರಿಬ್ಬರು ಪ್ರೇಮಿಗಳೆಂದು ನಿರ್ಧಾರಕ್ಕೆ ಬಂದುಬಿಡುವುದು ನಮ್ಮ ಸಮಾಜದೊಳಗೆ ಹಳ್ಳಿಯಿಂದ ದಿಲ್ಲಿ(ನಗರ)ಯವರೆಗೆ ಸಾಮಾನ್ಯವೆಂಬಂತೆ ಬೆಳೆದುಹೋಗಿದೆ. ಹಳ್ಳಿಗಳಲ್ಲಿ ಇಂಥ ವಿಷಯಗಳು ಸಿಕ್ಕಿಬಿಟ್ಟರೆ ಆ ಇಬ್ಬರು ಮಾತನಾಡಿದ್ದೇ ಘನ ಘೋರ ಅಪರಾಧವೆಂಬಷ್ಟರ ಮಟ್ಟಕ್ಕೆ ಬಾಯಿಗೆ ತಾಂಬೂಲವಾಗಿ ಪರಿಣಮಿಸುತ್ತವೆ. ಇನ್ನು ಸಿಟಿಗಳಲ್ಲೋ ಹೈ-ಫೈ ಲೈಫ್‍ನ ಡೇಟಿಂಗ್, ಸಂಥಿಂಗ್-ಸಂಥಿಂಗ್‍ಗಳಾಗಿ ಕಾಡುತ್ತವೆ. ಇಂತಹ ವಿಚಾರಗಳಲ್ಲಿ ಸಿನಿಮಾ ಸ್ಟಾರ್‍ಗಳು ಸಿಕ್ಕಿಕೊಂಡರಂತೂ ಮಾಧ್ಯಮದವರಿಗೆ ಅಂದು ಬಾಡೂಟ ಸಿಕ್ಕಂತೆ. ಟಿಆರ್‍ಪಿ ಗೀಳಿನಲ್ಲಿ ಸರಣಿ ಕಾರ್ಯಕ್ರಮಗಳು ನಡೆದೋಗುತ್ತವೆ. ಇತ್ತೀಚೆಗೆ ಕಲ್ಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ಸ್ಪರ್ಧಿಗಳ ನಡುವಿನ ತಮಾಷೆಗಳೂ ಅವರ ನಡುವೆ ಇರುವವರಿಗೇ ಅನುಮಾನವಾಗಿ ಕಾಡಲಾರಂಭಿಸಿದ್ದವು. ಅಲ್ಲದೆ, ಬುಲ್‍ಬುಲ್ ಬೆಡಗಿ ಎಂದೇ ಖ್ಯಾತಿ ಪಡೆದಿರುವ ರಚಿತಾ ರಾಮ್ ಸೀತಾರಾಮ ಕಲ್ಯಾಣ ಸಿನಿಮಾ ಮಾಡಿದ ನಂತರ ಕುಮಾರಸ್ವಾಮಿ ಕುಟುಂಬದೊಂದಿಗೆ ಒಂದು ಹಂತದ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ರಚಿತಾರಾಮ್ ಅಕ್ಕನ ಮದುವೆಯಲ್ಲಿ ನಿಖಿಲ್ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಶೃಂಗೇರಿಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಲ್ಲಿಸಿದ ಪೂಜೆಯಲ್ಲಿ ರಚಿತಾ ಭಾಗಿಯಾಗಿದ್ದರು ಅದಾದ ಕೆಲವೇ ದಿನಗಳ ನಂತರ ನಿಖಿಲ್ ಹುಟ್ಟಿದ ಹಬ್ಬಕ್ಕೆ ಶುಭಾಷಯವನ್ನು ಕೋರಿದ್ದರು. ಇಷ್ಟು ನಡೆದದ್ದೇ ತಡ ಮಾಂಸದಂಗಡಿ ಮುಂದೆ ಮೂಳೆ ತುಂಡಿಗಾಗಿ ಕಾದು ಕುಳಿತಿದ್ದ ನಾಯಿಯ ರೀತಿಯಲ್ಲಿ ರಚಿತಾ-ನಿಖಿಲ್ ಲವ್ವಿ-ಡವ್ವಿ, ನಿಖಿಲ್-ರಚಿತಾ ಮದುವೆ ಫಿಕ್ಸ್ ಎಂಬಂತ ಸುದ್ದಿಗಳನ್ನು ಬಿತ್ತರಿಸಲಾರಂಭಿಸಿದ್ದವು. ಪದೇ ಪದೇ ಇಂಥ ಗಾಸಿಪ್‍ಗಳನ್ನು ಕೇಳಿದ್ದ ರಚಿತಾ ಮತ್ತು ನಿಖಿಲ್ ನಾವಿಬ್ಬರು ಫ್ರೆಂಡ್ಸ್ ಅಷ್ಟೇ ಬೇರೇನೂ ಇಲ್ಲ ಎಂದು ಇಬ್ಬರೂ ಹೇಳಿದ್ದರು. ಅದಾದ ಕೆಲವೇ ದಿನಗಳಲ್ಲಿ ನಿಖಿಲ್‍ಗೆ ಬೇರೊಂದು ಹುಡುಗಿಯೊಂದಿಗೆ ಜೊತೆ ಮದುವೆ ಫಿಕ್ಸ್ ಆಗಿದೆ. ಸದ್ಯಕ್ಕೆ ಇಬ್ಬರ ಸ್ಟೋರಿಗೆ ಬ್ರೇಕ್ ಬಿದ್ದಿದ್ದು, ಮಾಧ್ಯಮಗಳು ಇಂಥದ್ದೇ ಸುದ್ದಿಯ ಹುಡುಕಾಟದಲ್ಲಿ ನಿರತವಾಗಿವೆ. ಅಂದಹಾಗೇ ಈ ರೀತಿಯ ಗಾಸಿಪ್ ಸುದ್ದಿಗಳು ಇದೇ ಮೊದಲೇನೂ ಅಲ್ಲ ಎಂಬುದು ಸಮಾಧಾನಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...