Homeಮುಖಪುಟಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

ಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

- Advertisement -
- Advertisement -

ಒಬ್ಬ ಗಂಡು ಮತ್ತು ಹೆಣ್ಣು ಜೊತೆಯಾಗಿ ಓಡಾಡ್ತಿದ್ದಾರೆ, ಹೆಚ್ಚು ಸಮಯ ಮಾತಾಡ್ತಿದ್ದಾರೆ ಅಂತ ನೋಡಿದ ತಕ್ಷಣ ಅವರಿಬ್ಬರು ಪ್ರೇಮಿಗಳೆಂದು ನಿರ್ಧಾರಕ್ಕೆ ಬಂದುಬಿಡುವುದು ನಮ್ಮ ಸಮಾಜದೊಳಗೆ ಹಳ್ಳಿಯಿಂದ ದಿಲ್ಲಿ(ನಗರ)ಯವರೆಗೆ ಸಾಮಾನ್ಯವೆಂಬಂತೆ ಬೆಳೆದುಹೋಗಿದೆ. ಹಳ್ಳಿಗಳಲ್ಲಿ ಇಂಥ ವಿಷಯಗಳು ಸಿಕ್ಕಿಬಿಟ್ಟರೆ ಆ ಇಬ್ಬರು ಮಾತನಾಡಿದ್ದೇ ಘನ ಘೋರ ಅಪರಾಧವೆಂಬಷ್ಟರ ಮಟ್ಟಕ್ಕೆ ಬಾಯಿಗೆ ತಾಂಬೂಲವಾಗಿ ಪರಿಣಮಿಸುತ್ತವೆ. ಇನ್ನು ಸಿಟಿಗಳಲ್ಲೋ ಹೈ-ಫೈ ಲೈಫ್‍ನ ಡೇಟಿಂಗ್, ಸಂಥಿಂಗ್-ಸಂಥಿಂಗ್‍ಗಳಾಗಿ ಕಾಡುತ್ತವೆ. ಇಂತಹ ವಿಚಾರಗಳಲ್ಲಿ ಸಿನಿಮಾ ಸ್ಟಾರ್‍ಗಳು ಸಿಕ್ಕಿಕೊಂಡರಂತೂ ಮಾಧ್ಯಮದವರಿಗೆ ಅಂದು ಬಾಡೂಟ ಸಿಕ್ಕಂತೆ. ಟಿಆರ್‍ಪಿ ಗೀಳಿನಲ್ಲಿ ಸರಣಿ ಕಾರ್ಯಕ್ರಮಗಳು ನಡೆದೋಗುತ್ತವೆ. ಇತ್ತೀಚೆಗೆ ಕಲ್ಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ಸ್ಪರ್ಧಿಗಳ ನಡುವಿನ ತಮಾಷೆಗಳೂ ಅವರ ನಡುವೆ ಇರುವವರಿಗೇ ಅನುಮಾನವಾಗಿ ಕಾಡಲಾರಂಭಿಸಿದ್ದವು. ಅಲ್ಲದೆ, ಬುಲ್‍ಬುಲ್ ಬೆಡಗಿ ಎಂದೇ ಖ್ಯಾತಿ ಪಡೆದಿರುವ ರಚಿತಾ ರಾಮ್ ಸೀತಾರಾಮ ಕಲ್ಯಾಣ ಸಿನಿಮಾ ಮಾಡಿದ ನಂತರ ಕುಮಾರಸ್ವಾಮಿ ಕುಟುಂಬದೊಂದಿಗೆ ಒಂದು ಹಂತದ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ರಚಿತಾರಾಮ್ ಅಕ್ಕನ ಮದುವೆಯಲ್ಲಿ ನಿಖಿಲ್ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಶೃಂಗೇರಿಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಲ್ಲಿಸಿದ ಪೂಜೆಯಲ್ಲಿ ರಚಿತಾ ಭಾಗಿಯಾಗಿದ್ದರು ಅದಾದ ಕೆಲವೇ ದಿನಗಳ ನಂತರ ನಿಖಿಲ್ ಹುಟ್ಟಿದ ಹಬ್ಬಕ್ಕೆ ಶುಭಾಷಯವನ್ನು ಕೋರಿದ್ದರು. ಇಷ್ಟು ನಡೆದದ್ದೇ ತಡ ಮಾಂಸದಂಗಡಿ ಮುಂದೆ ಮೂಳೆ ತುಂಡಿಗಾಗಿ ಕಾದು ಕುಳಿತಿದ್ದ ನಾಯಿಯ ರೀತಿಯಲ್ಲಿ ರಚಿತಾ-ನಿಖಿಲ್ ಲವ್ವಿ-ಡವ್ವಿ, ನಿಖಿಲ್-ರಚಿತಾ ಮದುವೆ ಫಿಕ್ಸ್ ಎಂಬಂತ ಸುದ್ದಿಗಳನ್ನು ಬಿತ್ತರಿಸಲಾರಂಭಿಸಿದ್ದವು. ಪದೇ ಪದೇ ಇಂಥ ಗಾಸಿಪ್‍ಗಳನ್ನು ಕೇಳಿದ್ದ ರಚಿತಾ ಮತ್ತು ನಿಖಿಲ್ ನಾವಿಬ್ಬರು ಫ್ರೆಂಡ್ಸ್ ಅಷ್ಟೇ ಬೇರೇನೂ ಇಲ್ಲ ಎಂದು ಇಬ್ಬರೂ ಹೇಳಿದ್ದರು. ಅದಾದ ಕೆಲವೇ ದಿನಗಳಲ್ಲಿ ನಿಖಿಲ್‍ಗೆ ಬೇರೊಂದು ಹುಡುಗಿಯೊಂದಿಗೆ ಜೊತೆ ಮದುವೆ ಫಿಕ್ಸ್ ಆಗಿದೆ. ಸದ್ಯಕ್ಕೆ ಇಬ್ಬರ ಸ್ಟೋರಿಗೆ ಬ್ರೇಕ್ ಬಿದ್ದಿದ್ದು, ಮಾಧ್ಯಮಗಳು ಇಂಥದ್ದೇ ಸುದ್ದಿಯ ಹುಡುಕಾಟದಲ್ಲಿ ನಿರತವಾಗಿವೆ. ಅಂದಹಾಗೇ ಈ ರೀತಿಯ ಗಾಸಿಪ್ ಸುದ್ದಿಗಳು ಇದೇ ಮೊದಲೇನೂ ಅಲ್ಲ ಎಂಬುದು ಸಮಾಧಾನಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...