Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...