Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...