Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...