Homeಅಂಕಣಗಳುಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

- Advertisement -
- Advertisement -

| ವಾಸು.ಎಚ್.ವಿ |

ಒಂದುವೇಳೆ ಅಂದು ಪತ್ರಿಕೆಯ ತಯಾರಿಯ ಕೆಲಸ ಇರದೇ ಇದ್ದಿದ್ದರೆ, ನೋಟು ರದ್ದತಿಯ ಒಂದು ವರ್ಷದ ಪರಿಣಾಮಗಳ ಕುರಿತಂತೆ ಕಾರ್ಯಕ್ರಮ ರೂಪಿಸಲು ನಾವು ಬಸವನಗುಡಿಯ ಕಚೇರಿಯಲ್ಲೇ ಸಭೆ ಸೇರಬೇಕಾಗಿತ್ತು. ಮೇಡಂ (ಗೌರಿ ಲಂಕೇಶ್) ಹಿಂದಿನ ದಿನವೇ ‘ಮರೀ, ನಾಳೆ ಆಫೀಸಿನಲ್ಲಿ ಆಗಲ್ಲ, ಗುರುವಾರದ ನಂತರವಾದರೆ ಇಲ್ಲೇ ಮಾಡಿಕೊಳ್ಳಬಹುದು’ ಎಂದಿದ್ದರು. ಅಂದಿನ ಸಭೆಯಲ್ಲಿ ದಕ್ಷಿಣ ಬೆಂಗಳೂರಿನ ಕೆಲವರು ಇರಲೇಬೇಕಿದ್ದುದರಿಂದ, ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ಸೇರಿಕೊಂಡಿದ್ದೆವು. ಸಭೆ ಮುಗಿಸಿ ಹೊರಡುವ ಹೊತ್ತಿಗೆ ಮೇಡಂ ಹತ್ಯೆಯ ಷಾಕಿಂಗ್ ಸುದ್ದಿ ಗೊತ್ತಾಯಿತು.

ಭಾರೀ ದುಃಖ ಹಾಗೂ ಆತಂಕದಿಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತು ನಾನು ಮೇಡಂ ಮನೆಯ ಕಡೆಗೆ ಹೊರಟೆವು. ನಮ್ಮ ಮುಂದಿನ ಸಾರ್ವಜನಿಕ ಕೆಲಸದ ಜವಾಬ್ದಾರಿಯ ಪ್ರಯಾಣವೂ ಇನ್ನು ಮುಂದೆ ಬೇರೆಯಾಗುತ್ತದೆಂಬ ಕಲ್ಪನೆ ಆಗ ನಮ್ಮಿಬ್ಬರಿಗೂ ಇರಲಿಲ್ಲ. ರಾಜರಾಜೇಶ್ವರಿ ನಗರದ ಮನೆಯ ಮುಂದೆ ಕಳೆದ ಕೆಲವು ಗಂಟೆಗಳಲ್ಲೇ ಮುಂದಿನ ಜವಾಬ್ದಾರಿ ಅರ್ಥವಾಗತೊಡಗಿತು. ಕಚೇರಿಯ ಸಿಬ್ಬಂದಿ ಅಲ್ಲಿಗೆ ಬಂದು ತಲುಪಿದಾಗ ಮರುದಿನ ಪತ್ರಿಕೆ ಮುದ್ರಣಕ್ಕೆ ಹೋಗಬೇಕೆಂಬುದು ನೆನಪಾಯಿತು.

ಅಲ್ಲಿಂದ ಆಚೆಗೆ ಹಲವು ಬೆಳವಣಿಗೆಗಳು ನಡೆದವು. ಅದುವರೆಗಿನ ನಮ್ಮ ಇತರ ಜವಾಬ್ದಾರಿಗಳಿಂದ ಸ್ವಲ್ಪ ಸ್ವಲ್ಪ ಬಿಡಿಸಿಕೊಂಡು, ಇದೀಗ ಪತ್ರಿಕೆಯ ನೊಗಕ್ಕೆ ಹೆಗಲು ಕೊಡುವ ಕೆಲಸವನ್ನು ಪತ್ರಿಕೆಯ ಹಿಂದಿನ ಸಿಬ್ಬಂದಿಯ ಜೊತೆಗೆ ನಾವೂ ಮಾಡುತ್ತಿದ್ದೇವೆ.

ಇದು ಹಿಂದಿನ ಗೌರಿ ಲಂಕೇಶ್ ಪತ್ರಿಕೆಯ ಯಥಾರೂಪವಲ್ಲ. ಸ್ವತಃ ಮೇಡಂ ಈಗ ಭೌತಿಕವಾಗಿ ಇಲ್ಲ. ಅವರ ಬದಲಿಗೆ ರಾಜ್ಯ ಮತ್ತು ದೇಶಗಳ ಗಡಿ ದಾಟಿ ಸತ್ಯ ನುಡಿಯುವ ದಿಟ್ಟತೆಗೆ ಪ್ರತೀಕವಾಗಿರುವ ಗೌರಿಯವರ ನೆನಪು ಹಾಗೂ ಬಲಿದಾನದ ಔನ್ನತ್ಯ ಇಲ್ಲೇ ನಮ್ಮೊಂದಿಗಿದೆ.

ಸೆಪ್ಟೆಂಬರ್ 12ರಂದು ನಡೆದ ಪ್ರತಿರೋಧ ಸಮಾವೇಶದ ಹೊತ್ತಿಗೇ ಅದು ಸ್ಪಷ್ಟವಾಗತೊಡಗಿತ್ತು. ಗೌರಿಯವರ ರೇಖಾಚಿತ್ರವೊಂದನ್ನು ಕಲಾವಿದ ವಿಜಯ್ ಮತ್ತು ಗೆಳೆಯರು ತಯಾರಿಸಿದ್ದರು. ಆ ಚಿತ್ರ ಎಲ್ಲೆಡೆ ಕಾಣತೊಡಗಿತ್ತು. ಬ್ಯಾನರ್, ಎದೆಬಿಲ್ಲೆ, ತಲೆಪಟ್ಟಿ ಹೀಗೆ. ಸಾವಿರಗಟ್ಟಲೇ ಸಂಖ್ಯೆಯಲ್ಲಿ ಬಂದವರೆಲ್ಲರ ಹೃದಯದಲ್ಲಿ, ಮನಸ್ಸಿನಲ್ಲಿ ಮಾತ್ರವಲ್ಲದೇ ಭೌತಿಕವಾಗಿಯೂ ಗೌರಿಯವರ ಫೋಟೋ ಎದ್ದು ಕಾಣುತ್ತಿತ್ತು. ಆ ದಿನದ ಮಟ್ಟಿಗಂತೂ ಎಲ್ಲೆಲ್ಲೂ ಕಾಣುವ ಚೆಗೆವಾರನ ಫೋಟೋದಂತೆ ಗೌರಿಯವರ ಚಿತ್ರ ಕಾಣುತ್ತಿತ್ತು. ಅಲ್ಲಿಂದಾಚೆಗೆ ದೇಶದ ಮತ್ತು ಪ್ರಪಂಚದ ನೂರಾರು ಕಡೆ ಗೌರಿಯವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆದವು. ಎಲ್ಲೆಡೆ ಬೆಳೆಯುತ್ತಿದ್ದ ಬಲಪಂಥೀಯ ದಬ್ಬಾಳಿಕೆಯನ್ನು ವಿರೋಧಿಸುತ್ತಿದ್ದ ಪ್ರಜಾತಂತ್ರವಾದಿಗಳಿಗೆ ಗೌರಿ ತಮ್ಮ ಪ್ರತಿನಿಧಿ ಎನಿಸಿತು.

ಭಾರತವೆಂಬ ದೇಶದ ಕಲ್ಪನೆಗೇ ಅಪಾಯ ತಂದೊಡ್ಡಿದ್ದವರು ಸರ್ಕಾರ ಮತ್ತು ಸಮಾಜದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದ ಬದಲಾಗುತ್ತಿದ್ದ ಕಾಲಘಟ್ಟವದು. ಅಂತಹ ಹೊತ್ತಿನಲ್ಲಿ ಸಾಮಾನ್ಯ ಜನರನ್ನೆಲ್ಲಾ ತಲುಪಬಹುದಾದ ಮಾಧ್ಯಮ, ಕಥನ, ಭಾಷೆ ಹಾಗೂ ಭಾವ ಏನಿರಬೇಕು ಎಂದು ಯೋಚಿಸುವ ನಿಟ್ಟಿನಲ್ಲಿ ಗೌರಿಯವರ ಪ್ರಯತ್ನ ಇರಲಿಲ್ಲ. ಅವರಷ್ಟೇ ಅಲ್ಲದೇ, ದೇಶದ ಬಹುತೇಕ ಪ್ರಜಾತಂತ್ರವಾದಿಗಳು ಅಂತಹ ಹುಡುಕಾಟಕ್ಕೆ ತೊಡಗಿರಲಿಲ್ಲ. ಭಾರತದ ಪ್ರಜಾತಂತ್ರ ವಿಸ್ತಾರಗೊಂಡ 60, 70, 80ರ ದಶಕದ ಪರಿಭಾಷೆಯೇ ಚಾಲ್ತಿಯಲ್ಲಿತ್ತು. ಆದರೆ, ಎಷ್ಟೋ ‘ದೊಡ್ಡವರು’ ಪ್ರತಿರೋಧದ ಗಟ್ಟಿ ದನಿಯನ್ನೂ ಮೊಳಗಿಸದೇ ಇದ್ದಾಗ ಗೌರಿ ಲಂಕೇಶ್ ಒಂದಿನಿತೂ ಹಿಂಜರಿಯಲಿಲ್ಲ. ಅದಕ್ಕಾಗಿ ಅವರೆಂದಿಗೂ ನಮಗೆ ಮಾದರಿಯಾಗಿ ನಿಲ್ಲುತ್ತಾರೆ. ಎರಡು ವರ್ಷದ ನಂತರವೂ ನಮ್ಮೆದೆಯೊಳಗೆ ಪ್ರತಿರೋಧದ ಪ್ರತೀಕ ಗೌರಿಯವರು ಮಾಸದೇ ಉಳಿದಿರುವುದೇ ಅದಕ್ಕೆ ಸಾಕ್ಷಿ.

‘ನಿನ್ನನ್ನು ಕೊಲ್ಲಬೇಕು’ ಎಂದು ಫೇಸ್‍ಬುಕ್‍ನಲ್ಲಿ ಬರೆದ ಯುವಕನಿಗೆ, ‘ಮಗೂ, ನನ್ನನ್ನು ಕೊಲ್ಲುವ ಮಾತನಾಡುತ್ತಿರುವ ನೀನೂ ನನ್ನ ಮಗನೇ. ಆದರೆ, ನಿನಗೆ ನಿನ್ನ ಚಿಂತನೆ ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದು ಎಂಬ ವಾಸ್ತವದ ಅರಿವಿಲ್ಲ’ ಎಂದು ಪ್ರೀತಿಯಿಂದ ಬರೆದಿದ್ದ ಗೌರಿಯವರ ನಡೆ ಬಹುಶಃ ನಮಗೆ ದಾರಿ ತೋರಬಹುದು.
ಪತ್ರಿಕಾ ಸಂಸ್ಥೆಯ ಆರ್ಥಿಕ ಸ್ಥಿತಿ ಅತ್ಯಂತ ಸುಸ್ಥಿತಿಯಲ್ಲಿ ಎಂದೂ ಇಲ್ಲದಿದ್ದರೂ, ನಿರಂತರ ಶ್ರಮ ಹಾಗೂ ನೈತಿಕವಾದ ರೀತಿಯಲ್ಲಿಯೇ ಸಂಪನ್ಮೂಲ ಹೊಂದಿಸುವ ಒದ್ದಾಟದಲ್ಲೇ ಸಂಸ್ಥೆಯನ್ನು ನಡೆಸುತ್ತಾ ಬಂದ ಅವರ ನಿಲುವು ನಮ್ಮನ್ನು ಎಚ್ಚರಿಸುತ್ತಿರುತ್ತದೆ. ಜೂನ್ 2016ರಲ್ಲಿ ಮೇಡಂ ಇದ್ದಾಗಲೇ ತೀರ್ಮಾನಿಸಿದಂತೆ, ಪತ್ರಿಕೆಯೊಂದಿಗೆ ಇಂದಿನ ಅಗತ್ಯಕ್ಕೆ ತಕ್ಕಂತೆ ವೆಬ್ ಮತ್ತು ಇನ್ನಿತರ ಸಾಧ್ಯತೆಗಳಿಗೆ ಅಪ್‍ಡೇಟ್ ಆಗುವ ನಿಟ್ಟಿನಲ್ಲಿ ನಾವು ಸತತವಾಗಿ ಮುನ್ನಡೆಯುತ್ತಿರಬೇಕಿದೆ.

ನಿಂದಿಸುವ, ಅಪಪ್ರಚಾರಗಳನ್ನು ಮಾಡುವ, ದ್ವೇಷಿಸುವ ಜನರು, ಹಿತಶತ್ರುಗಳು ಅಂದೂ ಇದ್ದರು; ಮುಂದೆಯೂ ಇರುತ್ತಾರೆ. ಆದರೆ, ಅದು ಉನ್ನತ ಆಶಯದತ್ತ ಸಾಗಬೇಕಾದ ನಮ್ಮ ಸಂಕಲ್ಪವನ್ನು ಅಲುಗಾಡಿಸಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಬದಲಾದ ಕಾಲಘಟ್ಟದಲ್ಲಿ ಬದಲಾಗಬೇಕಾದ ಮಾಧ್ಯಮದ ಸ್ವರೂಪ, ಪರಿಭಾಷೆಗಳು ಮತ್ತು ಕಥನದ ಕುರಿತು ಗಂಭೀರವಾಗಿ ಆಲೋಚಿಸಿ ಆ ನಿಟ್ಟಿನಲ್ಲಿ ಮುಂದಡಿಯಿಡಬೇಕಿದೆ. ಆ ದಿಕ್ಕಿನಲ್ಲಿ ನಮ್ಮಲ್ಲಿರುವ ಆಲೋಚನೆಗಳನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾಲೋಚನಾ ಸಭೆಗಳು, ಚರ್ಚಾಗೋಷ್ಠಿಗಳನ್ನು ಆಯೋಜಿಸಲು ಗೆಳೆಯರು ಉತ್ಸುಕತೆ ತೋರಿದ್ದಾರೆ. ಖುದ್ದಾಗಿ ಇಲ್ಲವೇ ಪತ್ರದ ಮುಖಾಂತರ ನಿಮ್ಮೆಲ್ಲರ ಜೊತೆ ನಡೆಯುವ ಸಂವಾದದಲ್ಲಿ, ನಿಮ್ಮ ಆಲೋಚನೆಗಳನ್ನೂ ಒಳಗೊಂಡು ನಮ್ಮ ಕರ್ತವ್ಯವನ್ನು ನಿಭಾಯಿಸುತ್ತೇವೆಂಬ ಭರವಸೆ ನೀಡಬಯಸುತ್ತೇವೆ.

ಮೇಡಂ ಇಲ್ಲವಾದ ಎರಡು ವರ್ಷದ ಈ ದಿನದಂದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿರುವುದನ್ನು ಅರ್ಥ ಮಾಡಿಕೊಂಡಿದ್ದೇವೆಂದು ತಂಡದ ಪರವಾಗಿ ಹೇಳಬಯಸುತ್ತೇನೆ. ನಾವು ನೀವೆಲ್ಲರೂ ಜೊತೆಗೂಡಿ ಸಾಗಬೇಕಾದ ದಾರಿ ಇದು. ಜೊತೆಗೂಡಿದರೆ ಮಾತ್ರ ಸಾಗುವ ದಾರಿಯೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜವಾಗಿ ಆ ಕೆಲಸವನ್ನು ನಾವು ನಮ್ಮ ನೀವುಗಳು ಕೂಡಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಸಮಾನತೆಯ ಸಭೆ ಮಾಡಬೇಕಿರುವದು.

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...