Homeಚಳವಳಿಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

ಗೌರಿ ಲಂಕೇಶ್ ಹತ್ಯೆಯ ಕೊಡಗು ನಂಟು ಬಿಚ್ಚಿಟ್ಟ  ಕಾಂಗ್ರೆಸ್‍ನ  ಅಧೋಗತಿ!

- Advertisement -
ಎಸ್‍ಐಟಿ ತಂಡ ತನಿಖೆ ಬಿಗಿಗೊಳಿಸಿದಂತೆಲ್ಲ `ಕ್ಯಾಪ್ಟನ್’ ಗೌರಿ ಹತ್ಯೆಯ ಒಂದೊಂದೇ ಸಿಕ್ಕುಗಳು ಬಿಡಿಸಿಕೊಳ್ಳುತ್ತಿವೆ. ಜೊತೆಗೆ ಕೊಲೆಗಡುಕ ಹಿಂದೂತ್ವವಾದಿಗಳ ಬಯಲಾಟವೂ ಬೆತ್ತಲಾಗುತ್ತಿದೆ. ಅರೆಸ್ಟಾದ ಹನ್ನೊಂದೂ ಜನರ ಬೇರುಗಳು ಒಂದಿಲ್ಲೊಂದು ರೂಪದಲ್ಲಿ ಸಂಘ ಪರಿವಾರದೊಡನೆ ನಂಟು ಹೊಂದಿರುವುದು ಖಾತ್ರಿಯಾಗುತ್ತಿದ್ದಂತೆಯೇ ಎಲ್ಲರ ಊಹೆಗಳು ದಿಟವಾಗುತ್ತಿವೆ. ನೋ ಡೌಟ್, ಸನಾತನಿ ಮನಸ್ಥಿತಿಗಳೇ ಗೌರಿಯನ್ನು ಕೊಂದಿವೆ! ಕೆಲ ಆಪಾದಿತರ ಪರ ವಾದಿಸಲು ಹಿಂದೂ ಸಂಘಟನೆಗಳೇ ವಕೀಲರನ್ನು ನೇಮಕ ಮಾಡೋದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿರೋದು ಇದನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತು ಮಾಡುತ್ತದೆ.
ಆದರೆ, ಅಷ್ಟೂ ಅರೆಸ್ಟುಗಳಲ್ಲಿ ಕೊಡಗಿನ ರಾಜೇಶ್ ಬಂಗೇರಾನ ಬಂಧನವಿದೆಯಲ್ಲ ಅದು, ಕಾಂಗ್ರೆಸ್ ಎಂಬ ಪೊಲಿಟಿಕಲ್ ಪಾರ್ಟಿ ಕೊಡಗಿನ ಮಟ್ಟಿಗೆ ಅದೆಷ್ಟು ಹೊಣೆಗೇಡಿ ಕೂಟದಂತಾಗಿದೆ ಅನ್ನೋದನ್ನೂ ಸಾಬೀತುಮಾಡಿದೆ. ಈ ರಾಜೇಶ್ ಬಂಗೇರಾ ಸಂಘ ಪರಿವಾರದ ಹಿನ್ನೆಲೆಯವ ಅನ್ನೋದು ಎಷ್ಟು ಸತ್ಯವೋ, ಕಾಂಗ್ರೆಸ್‍ನ ಎಂಎಲ್‍ಸಿ ವೀಣಾ ಅಚ್ಚಯ್ಯ ಎಂಬ ಹೆಂಗಸಿನ ಆಪ್ತ ಕಾರ್ಯದರ್ಶಿಯಾಗಿದ್ದವ ಅನ್ನೋದೂ ಅಷ್ಟೇ ಆಘಾತಕಾರಿ ಸಂಗತಿ! ಕೊಡಗಿನ ಕಾಂಗ್ರೆಸ್ಸನ್ನು ಇಡಿಯಾಗಿ ನಿಯಂತ್ರಿಸುತ್ತಿರೋದು ಇದೇ ಹೆಂಗಸು. ಖರ್ಗೆ ಸಾಹೇಬರ ಖಡಕ್ ಕೃಪೆಯೇ ವೀಣಮ್ಮಳನ್ನು ಈ ಪರಿ ಪ್ರಭಾವಿಯಾಗಿ ಬೆಳೆಸಿದೆ. ಇಲ್ಲೇ ಇರೋದು ನೋಡಿ ಕಾಂಗ್ರೆಸ್‍ನ ದುರಂತ. ತನ್ನ ಪಕ್ಷದ ರಾಜಕೀಯ ಸಿದ್ಧಾಂತಕ್ಕೆ ತದ್ವಿರುದ್ಧ ನಿಲುವಿನ ವ್ಯಕ್ತಿಯೊಬ್ಬನನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸಿಕೊಳ್ಳುವಷ್ಟು ರಾಜಕೀಯ ಮುಠ್ಠಾಳರು ಅಥವಾ ಅವಕಾಶವಾದಿಗಳ ಕೈಯಲ್ಲಿ ಕಾಂಗ್ರೆಸ್‍ನ ತಳಮಟ್ಟದ ಚುಕ್ಕಾಣಿ ಸಿಕ್ಕಿರೋದೆ ಆ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಹೀಗೆ ಮುಗ್ಗರಿಸಲು ಕಾರಣ.
ರಾಜೇಶ್ ಬಂಗೇರಾನ ಬಂಧನವಾಗುತ್ತಿದ್ದಂತೆಯೇ ತನ್ನ ತಪ್ಪಿನ ಅರಿವಾಗಿರುವ ವೀಣಮ್ಮ ಕಂಡಕಂಡಲ್ಲೆಲ್ಲ ನನಗೂ ಆತನಿಗೂ ಎಂಥ ಸಂಬಂಧವೂ ಇಲ್ಲ, ಕೆಲಕಾಲ ನನ್ನ ಆಪ್ತಸಹಾಯಕ ಆಗಿದ್ದ ಅಷ್ಟೇ ಅಂತ ಸ್ಪಷ್ಟೀಕರಣದ ಪ್ಲೇಕಾರ್ಡ್ ಹಿಡಿದುಕೊಂಡು ಓಡಾಡುವಂತಾಗಿದೆ. ಮೇಲ್ನೋಟಕ್ಕೆ ಅದು ನಿಜದಂತೆಯೇ ಕಂಡುಬರುತ್ತದಾದರು ವೀಣಾ ಅಚ್ಚಯ್ಯ ತಾನೇ ತಾನಾಗಿ ಸೃಷ್ಟಿಸಿಕೊಂಡಿರುವ ಈ ಅವಾಂತರದ ಫಸಲುಗಳನ್ನು ಅನುಭವಿಸಲೇಬೇಕಿದೆ. ಯಾಕೆಂದರೆ ರಾಜೇಶ್ ಬಂಗೇರಾನ ಸೈದ್ಧಾಂತಿಕ ನಿಲುವು ಅದೇನೆ ಆಗಿರಲಿ, ಕನಿಷ್ಠ ಪಕ್ಷ ಅವನ ಪೊಲಿಟಿಕಲ್ ಹಿನ್ನೆಲೆಯನ್ನು ಗಮನಿಸಿದ ಎಂಥದ್ದೇ ರಾಜಕೀಯ ಗಮಾರ ಕೂಡಾ, ಕಾಂಗ್ರೆಸ್ ಎಂಎಲ್‍ಸಿಯೊಬ್ಬರಿಗೆ ಆಪ್ತ ಸಹಾಯಕನಾಗಲು ಈತ ನಾಲಾಯಕ್ಕು ಅಂತ ಹೇಳಿಬಿಡುತ್ತಾನೆ. ಯಾಕೆಂದರೆ ಶಿಕ್ಷಣ ಇಲಾಖೆಯ ಸರ್ಕಾರಿ ನೌಕರನಾಗಿದ್ದರೂ ಈತ ಈ ಹಿಂದೆ ಬಿಜೆಪಿಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿಕುಶಾಲಪ್ಪನಿಗೆ ಪಿಎ ಆಗಿ ಕೆಲಸ ಮಾಡಿದ್ದವ! ತನ್ನ ವಿರೋಧಿ ಪಕ್ಷದ ನಾಯಕನ ಪಿಎ ಆಗಿದ್ದವನನ್ನೇ ತನ್ನ ಆಪ್ತ ಸಹಾಯಕನನ್ನಾಗಿ ನೇಮಕ ಮಾಡಿಕೊಳ್ಳುತ್ತಾರೆಂದರೆ ಈ ವೀಣಮ್ಮನ ಕಾಮನ್‍ಸೆನ್ಸು, ಪೊಲಿಟಿಕಲ್ ನಾಲೆಡ್ಜು ಅದಿನ್ನೆಂತದ್ದಿರಬೇಡ.
ಕಾಂಗ್ರೆಸ್‍ನೊಳಗೆ ಕಮಲದ ಕಲರವ
ಕೊಡಗು ಕಾಂಗ್ರೆಸ್ ದುಸ್ಥಿತಿಯ ವಿಚಾರಕ್ಕೆ ಮರಳುವುದಾದರೆ ಕೈ ಪಾರ್ಟಿಯ ಕೀ ಪೊಸೀಷನ್‍ಗಳಲ್ಲಿ ಸಂಘ ಪರಿವಾರದ ಮನಸ್ಸುಗಳೇ ಅಧಿಕೃತವಾಗಿ ಠಳಾಯಿಸಿವೆ! ಕಾಂಗ್ರೆಸಿನಲ್ಲಿ ಸೈದ್ಧಾಂತಿಕ ಕಾಂಗ್ರೆಸ್ ಕಾರ್ಯಕರ್ತರಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಸಂಘ ಪರಿವಾರದವರೇ ಬೇರೂರಿದ್ದಾರೆ. ಮೇಲ್ನೋಟಕ್ಕೆ ಇವರು ಕಾಂಗ್ರೆಸಿಗರು ಅನಿಸಿದರು ಕೂಡ, ಸಂಘ ಪರಿವಾರದ ಅಜೆಂಡಾಗಳು ಸುಲಭವಾಗಿ ಕೊಡಗು ಜಿಲ್ಲೆಯ ಕಾಂಗ್ರೆಸಿನಲ್ಲಿ ಕಾರ್ಯಾಚರಣೆಗೆ ಬರುತ್ತದೆ. ಇದಕ್ಕೊಂದು ಸೂಕ್ತ ನಿದರ್ಶನ ಟಿಪ್ಪು ಜಯಂತಿ. ಸ್ವತಃ ತಮ್ಮದೇ ಕಾಂಗ್ರೆಸ್ ಸರ್ಕಾರ ಪಣತೊಟ್ಟು, ಕೋಮುವಾದಿಗಳಿಗೆ ಸೆಡ್ಡು ಹೊಡೆದು ಟಿಪ್ಪು ಜಯಂತಿಗೆ ಅಡಿಗಲ್ಲು ಹಾಕಿದ್ದರೂ, ಬಿಜೆಪಿ ಹಾಗೂ ಸಂಘ ಪರಿವಾರ ವಿರೋಧಿಸುತ್ತದೆನ್ನುವ ಕಾರಣಕ್ಕೆ ಟಿಪ್ಪು ಜಯಂತಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯೂ ವಿರೋಧಿಸುತ್ತದೆ! ಅದೇರೀತಿ, ಬಿಜೆಪಿ ಬೆಂಬಲಿಸುವ ಕೊಡಗು ಪ್ರತ್ಯೇಕತಾ ಹೋರಾಟವನ್ನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರು ಬೆಂಬಲಿಸುತ್ತಾರೆ!!
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್‍ರ ಒಂದು ವ್ಯಂಗ್ಯೋಕ್ತಿ ಇಡೀ ಕೊಡಗು ಕೈ ಪಾರ್ಟಿಯ ಅಧೋಗತಿಯನ್ನು ಸಮಗ್ರವಾಗಿ ಕಟ್ಟಿಕೊಡುತ್ತೆ. ಜಿಲ್ಲಾ ಕಾಂಗ್ರೆಸ್ಸಿಗೆ ಅಧ್ಯಕ್ಷರು ಯಾರಾಗಬೇಕೆನ್ನುವ ಭರ್ಜರಿ ಚರ್ಚೆ ನಡೆದಿದ್ದ ಸಂದರ್ಭದಲ್ಲಿ ರಮಾನಾಥ್ ಹೀಗೆ ಹೇಳಿದ್ದರು, `ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸಿಗೆ ಪ್ರತ್ಯೇಕ ಅಧ್ಯಕ್ಷರು ಬೇಡ, ಬಿಜೆಪಿಗೂ, ಕಾಂಗ್ರೆಸಿಗೇ ಒಬ್ಬರೇ ಅಧ್ಯಕ್ಷರು ಸಾಕು!’. ಕಳೆದ ಒಂದು ದಶಕದಿಂದ ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯನವರು ಕೂಡಾ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್‍ನ ರಾಜ್ಯ ನಾಯಕರ್ಯಾರೂ ತಲೆಕೆಡಿಸಿಕೊಂಡಿಲ್ಲ.
ಪ್ರತ್ಯೇಕತಾ ಹೋರಾಟವನ್ನು ನಡೆಸುತ್ತಿರುವ ಸಿ.ಎನ್.ಸಿ. ಸಂಘಟನೆಯ ಎನ್.ಯು. ನಾಚಪ್ಪ ಬಿಜೆಪಿಯ ಸುಬ್ರಹ್ಮಣ್ಯಸ್ವಾಮಿಯವರನ್ನು ಕರೆಸಿ, ಅವರ ಬಾಯಿಂದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ವಾಚಾಮಗೋಚರ ಟೀಕಿಸುವಂತೆ ಮಾಡಿದ ಕಾರ್ಯಕ್ರಮಗಳಲ್ಲಿ ಕಾಂಗ್ರೆಸಿನ ರಾಷ್ಟ್ರೀಯ ವಕ್ತಾರ ಎನಿಸಿಕೊಳ್ಳುವ ಬ್ರಿಜೇಶ್ ಕಾಳಪ್ಪ ಹಾಗೂ ವೀಣಾ ಅಚ್ಚಯ್ಯ ಸನ್ಮಾನ ಸ್ವೀಕರಿಸಿ ಮರಳುತ್ತಾರೆ. ಹೀಗೆ ಬಿಜೆಪಿಮಯವಾಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಬೆರಳೆಣಿಕೆಯಷ್ಟಿರುವ ಜಾತ್ಯತೀತ ನಿಲುವಿನ ಮುಖಂಡರಿಗೆ ಕವಡೆ ಕಿಮ್ಮತ್ತಿಲ್ಲ. ಅಂತವರನ್ನು ಅಧಿಕಾರದಿಂದ ದೂರ ಇಡಲಾಗಿದೆ. ಕಾಂಗ್ರೆಸಿನ ಸಮಸ್ತ ಅಧಿಕಾರ ಕಮಲ-ಕಾಂಗ್ರೆಸಿಗರ ಕೈಯಲ್ಲಿದೆ. ಈ ಕಮಲ-ಕಾಂಗ್ರೆಸಿನ ಚುಕ್ಕಾಣಿ ಹಿಡಿದು ಕೂತಿರೋದು ಇದೇ ವೀಣಾ ಅಚ್ಚಯ್ಯ!
ಇಲ್ಲದೇ ಹೋಗಿದ್ದರೆ, ಸತತವಾಗಿ ಬಿಜೆಪಿ ನಾಯಕರಿಗೇ ಪಿಎ ಆಗುತ್ತಿದ್ದ ವ್ಯಕ್ತಿಯನ್ನು ಕರೆತಂದು ತನ್ನ ಪಿಎ ಆಗಿ ನೇಮಿಸಿಕೊಳ್ಳುತ್ತಿರಲಿಲ್ಲ. ಇವತ್ತು ಗೌರಿ ಲಂಕೇಶ್‍ರ ಹತ್ಯೆಯ ಕೇಸಿನಲ್ಲಿ ಅರೆಸ್ಟಾಗಿರುವ ರಾಜೇಶ್ ಬಂಗೇರಾ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷನಾಗಿದ್ದ ರವಿ ಕುಶಾಲಪ್ಪ ಎಂಬ ಖಟ್ಟರ್ ಆರೆಸ್ಸೆಸ್ಸಿಗ-ಕಂ-ಬಿಜೆಪಿ ಆಸಾಮಿಗೆ ಪಿಎ ಆಗಿದ್ದ. ಆ ನೇಮಕಾತಿಯ ಹಿಂದೆ ಸಂಘ ಪರಿವಾರ ಕೆಲಸ ಮಾಡಿತ್ತು. ರವಿ ಕುಶಾಲಪ್ಪನ ನಂತರ ಬಿಜೆಪಿಯ ಶರೀನ್ ಸುಬ್ಬಯ್ಯ ಎಂಬಾತ ಜಿಪಂ ಅಧ್ಯಕ್ಷನಾಗಿದ್ದಾಗಲು ಈ ಬಂಗೇರಾನೆ ಪಿಎ ಆಗಿ ಮುಂದುವರೆದ. ಆದರೆ ಆಮೇಲೆ, ಜಿಪಂ ಚುಕ್ಕಾಣಿ ಕೆ.ಜಿ.ಬೋಪಯ್ಯನ ಆಪ್ತ ಹರೀಶ್ ತೆಕ್ಕೆಗೆ ಜಾರಿದಾಗ ಪಿಎ ಹುದ್ದೆ ಬಂಗೇರಾನ ಪಾಲಿಗೆ ಉಳಿಯಲಿಲ್ಲ. ಯಾಕೆಂದರೆ ಒಂದೇ ಪಕ್ಷದ ಬೋಪಯ್ಯ ಮತ್ತು ರವಿ ಕುಶಾಲಪ್ಪನದು ಹಾವು ಮುಂಗುಸಿ ಸಂಬಂಧ. ಕಳೆದ ಎಲೆಕ್ಷನ್‍ನಲ್ಲೇ ಬೋಪಯ್ಯಗೆ ಟಿಕೆಟ್ ತಪ್ಪಿಸಿ ತಾನೇ ವಿರಾಜಪೇಟೆ ಬಿಜೆಪಿ ಅಭ್ಯರ್ಥಿಯಾಗಲು ರವಿ ಕುಶಾಲಪ್ಪ ತಂತ್ರ ನಡೆಸಿದ್ದ. ಅದೂಅಲ್ಲದೆ, ಯಡ್ಯೂರಪ್ಪನ ಪಕ್ಕಾ ಫಾಲೋವರ್ ಥರಾ ವರ್ತಿಸುವ ಬೋಪಯ್ಯನೆಂದರೆ ಸಂಘ ಪರಿವಾರಕ್ಕೂ ಅಷ್ಟಕ್ಕಷ್ಟೇ. ಬೋಪಯ್ಯನಿಗೂ ಪರಿವಾರದ ಮೇಲೆ ಸೇಮ್-ಟು-ಸೇಮ್ ಮಮಕಾರ! ಆ ಕಾರಣಕ್ಕೆ ರವಿಯ ಆಪ್ತ ಬಳಗದ, ಸಂಘ ಪರಿವಾರ ಲಿಂಕಿನ ರಾಜೇಶ್ ಬಂಗೇರಾಗೆ ಗೇಟ್‍ಪಾಸ್ ಕೊಟ್ಟು ಗದುಮಿದ ಬೋಪಯ್ಯ ತನ್ನ ಭಂಟನ ದೇಖಾರೇಖಿಗೆಂದು ಬೇರೊಬ್ಬ ಸಹಾಯಕನನ್ನು ಗೊತ್ತು ಮಾಡಿದ್ದ.
ತನ್ನ ಚೇಲಾ ಬಂಗೇರಾಗೆ ಹೇಗಾದರು ಸರ್ಕಾರಿ ಸೋಗಿನ ರಾಜಕೀಯ ಪುನರ್ವಸತಿ ಕಲ್ಪಿಸುವ ಅನಿವಾರ್ಯತೆಗೆ ಬಿದ್ದ ರವಿ ಕುಶಾಲಪ್ಪ ಎಡತಾಕಿದ್ದು ತನ್ನದೇ ಶಾಂತೆಯಂಡ ಕುಟುಂಬಸ್ಥೆಯಾದ ಕಾಂಗ್ರೆಸ್‍ನ ವೀಣಾ ಅಚ್ಚಯ್ಯರನ್ನು. ಪಕ್ಷದ ಸಿದ್ಧಾಂತ, ರಾಜಕೀಯ ನಿಲುವು ಯಾವುದೂ ಲೆಕ್ಕಕ್ಕಿರದ ವೀಣಾ ಮೇಡಮ್ಮು ಕಳ್ಳುಬಳ್ಳಿ ಸಂಬಂಧಕ್ಕೆ ಬೆಲೆಕೊಟ್ಟು ರವಿಕುಶಾಲಪ್ಪನ ಭಂಟ ಬಂಗೇರಾನನ್ನು ತನ್ನ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿಕೊಂಡಿದ್ದರು! ಸಂಘ ಪರಿವಾರದ ಈ ಆಸಾಮಿ ಕಾಂಗ್ರೆಸಿನ ಪದಾಧಿಕಾರಿಗಳ ನೇಮಕಾತಿ ವಿಚಾರದಲ್ಲೂ ಕೈ ಆಡಿಸುತ್ತಿದ್ದುದಲ್ಲದೆ ಅಲ್ಪಸಂಖ್ಯಾತ ವರ್ಗದವರು ಯಾವುದಾದರೂ ಕೆಲಸ ಕಾರ್ಯಗಳಿಗೆ ವೀಣಾ ಅಚ್ಚಯ್ಯಗೆ ಮನವಿ ನೀಡಿದರೆ, ಆ ಮನವಿಯೇ ಕಡತದಿಂದ ನಾಪತ್ತೆಯಾಗುವಂತೆ ಮಾಡಿಬಿಡುತ್ತಿದ್ದನಂತೆ!! ಇನ್ನು ಕಾಂಗ್ರೆಸ್ ಹೇಗೆ ತಾನೆ ಉದ್ದಾರವಾದೀತು….
– ಬಿ.ಎನ್. ಮನುಶೆಣೈ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...