Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...