Homeಮುಖಪುಟಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

ಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-16

ಪರಸ್ಪರ ವೈಯ್ಯುಕ್ತಿಕ ವ್ಯಾಜ್ಯಗಳ ಪರಿಹಾರ

ಜನರು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪರಸ್ಪರ ವೈಯ್ಯುಕ್ತಿಕ ಮತಭೇದ ಮತ್ತು ವ್ಯಾಜ್ಯಗಳು ಸ್ವಾಭಾವಿಕ, ಹಾಗೂ ಸರ್ವೇ ಸಾಮಾನ್ಯ. ಎಲ್ಲಾ ಸಂಬಂಧಗಳು ಈ ದಾರಿಯಿಂದಲೇ ಸಾಗಿ ಪರಿಪಕ್ವವಾಗಬೇಕು. ವ್ಯಾಜ್ಯಗಳ ಸಮರ್ಪಕ ನಿರ್ವಹಣೆಯಿಂದ ಆತಂಕಗಳು ಕಡಿಮೆಯಾಗಿ, ಬೆಳವಣಿಗೆಗೂ ಸಹಕಾರಿಯಾಗುತ್ತದೆ.

ವ್ಯಾಜ್ಯ ಎಂದ ಕೂಡಲೇ ಇದನ್ನು ಭೀಕರ ಕಾಳಗ, ಹೊಡೆದಾಟ, ಬಡಿದಾಟ ಎಂದೇ ಭಾವಿಸಬೇಕಿಲ್ಲ. ಇದು ಸಣ್ಣ ಮತಬೇಧದಿಂದ ಪ್ರಾರಂಭವಾಗಿ ಕೊನೆಗೆ ಹೊಡೆದಾಟ-ಬಡಿದಾಟಕ್ಕೂ ತಲುಪಬಹುದು. ಆದ್ದರಿಂದ ಇದನ್ನು ಸಣ್ಣದಾಗಿರುವಾಗಲೇ ಪರಿಹಾರ ಮಾಡುವುದು ಜಾಣತನದ ಕಲೆ. ತಂಡದಲ್ಲಿ ಜನರು ಕೆಲಸ ಮಾಡುತ್ತಿರುವಾಗ ಒಂದು ವ್ಯಕ್ತಿ ಅಥವಾ ಗುಂಪು ಒಟ್ಟಾಗಿ ಸೇರಿ, ಓರ್ವ ವ್ಯಕ್ತಿ ಅಥವಾ ಇನ್ನೊಂದು ಗುಂಪನ್ನು ಅದರ ಗುರಿ ತಲುಪದಂತೆ ಮಾಡಿದಾಗ ಉಂಟಾಗುವ ಸನ್ನಿವೇಶವನ್ನು ಸಂಸ್ಥೆಗಳ ಒಳವ್ಯಾಜ್ಯ ಎನ್ನಬಹುದು. ಈ ರೀತಿಯ ವ್ಯಾಜ್ಯಗಳಲ್ಲಿ ಮುಖ್ಯವಾಗಿ ಕಾಣುವುದು

· ವೈಯುಕ್ತಿಕ ಅಥವಾ ಸಂಬಂಧದ ತಿಕ್ಕಾಟ: ಇದರಲ್ಲಿ ಸ್ವ-ಪ್ರತಿಷ್ಠೆ, ನಿಷ್ಠೆ, ಅವಿಶ್ವಾಸ, ಅಗೌರವ ಮುಂತಾದ ಸಮಸ್ಯೆ ಇರುತ್ತದೆ.

· ವ್ಯವಸ್ಥೆಯ ತಿಕ್ಕಾಟ: ಇದರಲ್ಲಿ ಅವ್ಯವಸ್ಥೆ ಅಂದರೆ ಏಕ-ಕಾಲಕ್ಕೆ ಇಬ್ಬರು ಒಂದೇ ವಸ್ತುವಿನ ಉಪಯೋಗಕ್ಕೆ ಮುಂದಾಗುವುದು ಅಂದರೆ ವ್ಯವಸ್ಥೆಯಲ್ಲಿನ ಲೋಪ-ದೋಷಗಳಿಂದಾದ ವ್ಯಾಜ್ಯ.

· ಆಸಕ್ತಿಗಳ ಗುದ್ದಾಟ: ಇಬ್ಬರ ಅಥವಾ ಎರಡು ಗುಂಪಿನ ಆಸಕ್ತಿ, ಆದ್ಯತೆ ಇವುಗಳಲ್ಲಿ ಒಂದು ಪಕ್ಷಕ್ಕೆ ಲಾಭವಾಗುವ ಸಾಧ್ಯತೆಯಿಂದಾಗುವ ವ್ಯಾಜ್ಯ.

ಇಲ್ಲಿ “ಅಕ್ಕಿಯ ಮೇಲೆ ಆಸೆ, ನೆಂಟರ ಮೇಲೆ ಇಷ್ಟ” ಎಂಬ ಗಾದೆಯಂತೆ ಬರುವ ಐದು ಸನ್ನಿವೇಶಗಳು:

ಗೆಲುವು-ಸೋಲು: (Win-Lose) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ನಮ್ಮ ಪ್ರತಿಪಾದನೆಯೂ ಜಾಸ್ತಿಯಾದಾಗ ಮತ್ತು ಸಂಬಂಧಗಳಿಗೆ ಮಹತ್ವ ಕಡಿಮೆಯಾಗಿ ಸಹಕಾರವೂ ಇಲ್ಲದಾದಾಗ ಉಂಟಾಗುವ ಸನ್ನಿವೇಶವೇ ಪ್ರತಿಸ್ಪರ್ಧೆ. ಇದರಲ್ಲಿ ಹೇಗಾದರೂ ಎದುರಾಳಿಯನ್ನು ಸೋಲಿಸಬೇಕು ಮತ್ತು ನಾವು ಜಯಶಾಲಿಯಾಗಬೇಕು ಎನ್ನುವ ಹಂಬಲ. ಇದರಲ್ಲಿ ಒಂದು ಪಕ್ಷಕ್ಕೆ ಮಾತ್ರ ಜಯಕ್ಕೆ ಆಸ್ಪದವಿರುತ್ತದೆ.

ಸೋಲು-ಸೋಲು ಅಥವಾ ಹಿಂದೇಟು: (Lose – Lose) ಪದಾರ್ಥದ ಮೇಲೆ ನಮಗೆ ಆಸಕ್ತಿ ಇಲ್ಲವಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಮತ್ತು ಸಂಬಂಧಗಳಿಗೆ ಹೆಚ್ಚಿನ ಮಹತ್ವ ಇಲ್ಲದೆ, ಸಹಕಾರದ ಕೊರತೆಯೂ ಇದ್ದಾಗ, ಸ್ಪರ್ಧೆಯಿಂದ ಹಿಂದೇಟು ಹಾಕಿ, ಉಮೇದುವಾರಿಕೆ ಹಿಂಪಡೆಯುವ ಸನ್ನಿವೇಶ. ಇದರಲ್ಲಿ ಇಬ್ಬರಿಗೂ ಸೋಲುವ ಸಾಧ್ಯತೆ/ಭೀತಿ, ಹಾಗಾಗಿ ಹಿಂದೇಟು. ಯಾರಿಗೂ ಜಯವಿಲ್ಲ. ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ನಡೆಯಲಿಲ್ಲ ಎಂಬ ವಿಷಾದ.

ರಾಜಿ: (Compromise) ಪದಾರ್ಥದ ಮೇಲೆ ನಮಗೆ ಆಸಕ್ತಿ ಮಧ್ಯಮವಾಗಿದ್ದು, ಪ್ರತಿಪಾದನೆಯೂ ಮಧ್ಯಮವಾದಾಗ ಹಾಗೂ ಸಂಬಂಧಗಳಿಗೆ ಮಹತ್ವ ಮಧ್ಯಮವಾಗಿದ್ದು, ಸಹಕಾರದ ಅಪೇಕ್ಷೆಯೂ ಮಧ್ಯಮವಾಗಿದ್ದಾಗ ಉಂಟಾಗುವ ಸನ್ನಿವೇಶವೇ ಪರಸ್ಪರ ರಾಜಿ/ಅಂಗೀಕಾರ. ಇಲ್ಲಿ ಮಾತು-ಕತೆಗೆ ಅವಕಾಶ. ಯಾರಿಗೂ ಸೋಲಿಲ್ಲ, ಯಾರಿಗೂ ಗೆಲುವು ಇಲ್ಲ. ಒಂದು ರೀತಿಯ ಶೂನ್ಯದ ಡ್ರಾ.

ಸೋತು ಗೆಲ್ಲುವುದು: (Accommodate) ಪದಾರ್ಥದ ಮೇಲೆ ನಮ್ಮ ಆಸಕ್ತಿ ಕಡಿಮೆಯಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಹಾಗೂ ಸಂಬಂಧಗಳಿಗೆ ಅಧಿಕ ಬೆಲೆ ಇದ್ದು, ಸಹಕಾರದ ಸಾಧ್ಯತೆ ಹೆಚ್ಚಾದಾಗ ನಾವು ಸ್ಪರ್ಧೆಗೆ ಇಳಿಯದೆ, ಎದುರಾಳಿಗೆ ಆಟ ಬಿಟ್ಟುಕೊಡುವ ಮನಃಸ್ಥಿತಿಗೆ ಬರುತ್ತೇವೆ. ಇಲ್ಲಿಯೂ ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ಬಿಟ್ಟುಕೊಟ್ಟವರು ತಮ್ಮ ಅವಕಾಶಕ್ಕೆ ಕಾಯುತ್ತಿರುತ್ತಾರೆ.

ಇಬ್ಬರಿಗೂ ಜಯ: (Win –Win) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ಪ್ರತಿಪಾದನೆಯೂ ಹೆಚ್ಚಾಗಿದ್ದರೂ ಸಹ, ಸಂಬಂಧಗಳಿಗೂ ಬೆಲೆ ಅಧಿಕವಾಗಿದ್ದು ಸಹಕಾರದ ಸಾಧ್ಯತೆಯೂ ಹೆಚ್ಚಾಗಿದ್ದಾಗ ಇಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತೇವೆ. ಇದು ಅತ್ಯಂತ ಅಪೇಕ್ಷಣೀಯ ಪರಿಹಾರ. ಇದಕ್ಕೆ ಯಾವಾಗಲೂ ಪ್ರಯತ್ನಿಸಬೇಕು.

ವ್ಯಾಜ್ಯಗಳ ಪರಿಹಾರ ಹೇಗೆ
ವ್ಯಾಜ್ಯವನ್ನು ಪರಿಹಾರ ಮಾಡಲು ಬೇಕಾಗುವ ಕಲೆಗಳು:

·         ಸಂವಹನ ಕಲೆ

·         ಭಾವನೆಗಳ ಅಥವಾ ಆತಂಕ (ಸ್ಟ್ರೆಸ್ಸ್) ನಿರ್ವಹಣೆ ಮತ್ತು ಅನುಭೂತಿ

·         ಸಮಸ್ಯೆಗಳ ಪರಿಹಾರ / ನಿರ್ಧಾರ ತೆಗೆದುಕೊಳ್ಳುವ ಕಲೆ

·         ತಂಡದಲ್ಲಿ ಕೆಲಸ ಮಾಡುವ ಕಲೆ.

ಪರಿಹಾರದ ಹೆಜ್ಜೆಗಳು:

·         ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು.

·         ಎದುರಾಳಿಯ ಜೊತೆ ಮಾತು-ಕತೆ ನಡೆಸುವುದು.

·         ಮಧ್ಯಸ್ತಿಕೆಯೂ ಸೇರಿದಂತೆ, ಪರಿಹಾರಕ್ಕೆ ಮಾರ್ಗಗಳನ್ನು ಹುಡುಕುವುದು.

·         ಸರಿಯಾದ ಪರ್ಯಾಯದ ಆಯ್ಕೆ.

·         ಭಾವನೆಗಳನ್ನು ನಿರ್ವಹಿಸುವುದು.

ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ವ್ಯಾಜ್ಯಕ್ಕೆ ಮೂಲ ಕಾರಣ ಏನು ಎಂದು ತಿಳಿದು ಅದಕ್ಕೆ ಪರಿಹಾರ ಹುಡುಕಬೇಕು. ಇದಕ್ಕಾಗಿ ನಿಮ್ಮ ಮತ್ತು ಎದುರಾಳಿಯ ಇಬ್ಬರ ವಾದವೂ ಏನು ಎಂಬುದನ್ನು ಸ್ಪಷ್ಟವಾಗಿ ಇಡಬೇಕು. ಇಬ್ಬರ ಆಸಕ್ತಿ-ಆಸೆ-ಅಕಾಂಕ್ಷೆ-ಭೀತಿ ಏನು ಎಂಬುದನ್ನು ಅರಿಯಬೇಕು. ಇದನ್ನು ಅರಿಯಲು ಕೆಳಕಂಡ ಪ್ರಶ್ನೆಗಳು ಸಹಕಾರಿಯಾಗಬಹುದು:

ನಮ್ಮ ಆಸಕ್ತಿ ಏನು? ನಮ್ಮ ಮುಖ್ಯ ಅನುಮಾನ ಏನು? ಬೇಡಿಕೆ ಏನು? ಅವಶ್ಯಕತೆ ಏನು? ಆಕಾಂಕ್ಷೆ  ಮತ್ತು ಭೀತಿ ಏನು? ಇದೇ ರೀತಿ ಎದುರಾಳಿಯ ಮಾಹಿತಿಯನ್ನೂ ಪಡೆದು ಅದನ್ನೂ ಕೂಲಂಕಷವಾಗಿ ಅವಲೋಕಿಸಬೇಕು.

ಯಾವ ರೀತಿಯ ಸಂಧಾನಕ್ಕೆ ಬರಬಹುದು?

ಮೂರನೆಯ (ನಿಶ್ಪಕ್ಷ) ಪಕ್ಷವನ್ನು ಮಧ್ಯಸ್ಥಿಕೆ ವಹಿಸಲು ನೇಮಿಸಿದಲ್ಲಿ ನಮಗೆ ಸಂಧಾನಕ್ಕೆ ಬರಲು ಸಾಧ್ಯವೇ? ಇಬ್ಬರಿಗೂ ನ್ಯಾಯ ಸಿಕ್ಕಂತೆ ಆಗುತ್ತದೋ ಅಥವಾ ಇಬ್ಬರ ಜಗಳ ಮೂರನೆಯವರ ಲಾಭ ಆಗುತ್ತದೋ? ಯಾರು ಈ ಮೂರನೆಯ ಪಕ್ಷ? ಅವರು ಸಮಾಜದಲ್ಲಿ ಪ್ರತಿಷ್ಠಿತರೇ? ಸಂಧಾನ ಕಾನೂನಿನ ಚೌಕಟ್ಟಿನಲ್ಲಿರುತ್ತದೆಯೇ? ಅದನ್ನು ಯಾರು ಜಾರಿ ಮಾಡುವುದು ಮತ್ತು ನೋಡಿಕೊಳ್ಳುವುದು? ಖರ್ಚು ವೆಚ್ಚ ಯಾರು ಭರಿಸುವುದು? ಇಂತಹ ಪ್ರಶ್ನೆಗಳಿಗೂ ಸ್ಪಷ್ಟ ಉತ್ತರ ಸಿಗಬೇಕು.

ಕೆಲವೊಮ್ಮೆ ಇಬ್ಬರೂ ತಮ್ಮ ಪ್ರತಿಷ್ಠೆಯನ್ನೇ ದೊಡ್ಡದು ಮಾಡಿಕೊಂಡು, ನಿಜವಾಗಿ ಆಗುತ್ತಿರುವ ತಮ್ಮ ಆಸಕ್ತಿಯ ಹಾನಿಯನ್ನು ನಿರ್ಲಕ್ಷಿಸಿ, ತಮ್ಮ ಮುಖವನ್ನು ಉಳಿಸಿಕೊಳ್ಳುವ (ಸೇವಿಂಗ್ ದಿ ಫೇಸ್) ನಿಟ್ಟಿನಲ್ಲಿ,ನನಗೆ ಕನಿಷ್ಠ ಇಷ್ಟಾದರೂ ಸಿಗಬೇಕು ಎಂದು ಚೌಕಾಸಿ ಮಾಡಲು ಪ್ರಯತ್ನಿಸುತ್ತಾರೆ ಮತ್ತು ತಮ್ಮ ನಿಜವಾದ ಆಸಕ್ತಿ ಹಾನಿಯನ್ನು ಸಹಿಸಿಕೊಳ್ಳುತ್ತಾರೆ. ಆದ್ದರಿಂದ ಇಬ್ಬರ ಆಸಕ್ತಿ ಏನು ಎಂಬುದನ್ನು ತಿಳಿಯುವುದು ಬಹಳ ಮುಖ್ಯ.

ವ್ಯಾಜ್ಯ ಪರಿಹಾರ ಆಗುವ ತನಕ ಎರಡೂ ಪಕ್ಷಗಳು ತಮ್ಮ ಭಾವನಾತಿರೇಕಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗುತ್ತದೆ. ನೆನಪಿಡಿ, ಮಾತು ಬಲ್ಲವನಿಗೆ ಜಗಳವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...