Homeಮುಖಪುಟಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

ಜಗಳ ತಡೆಯಲು, ವ್ಯಾಜ್ಯಗಳನ್ನು ಪರಿಹರಿಸಲು ಇರುವ ವೈಜ್ಞಾನಿಕ ವಿಧಾನಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-16

ಪರಸ್ಪರ ವೈಯ್ಯುಕ್ತಿಕ ವ್ಯಾಜ್ಯಗಳ ಪರಿಹಾರ

ಜನರು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪರಸ್ಪರ ವೈಯ್ಯುಕ್ತಿಕ ಮತಭೇದ ಮತ್ತು ವ್ಯಾಜ್ಯಗಳು ಸ್ವಾಭಾವಿಕ, ಹಾಗೂ ಸರ್ವೇ ಸಾಮಾನ್ಯ. ಎಲ್ಲಾ ಸಂಬಂಧಗಳು ಈ ದಾರಿಯಿಂದಲೇ ಸಾಗಿ ಪರಿಪಕ್ವವಾಗಬೇಕು. ವ್ಯಾಜ್ಯಗಳ ಸಮರ್ಪಕ ನಿರ್ವಹಣೆಯಿಂದ ಆತಂಕಗಳು ಕಡಿಮೆಯಾಗಿ, ಬೆಳವಣಿಗೆಗೂ ಸಹಕಾರಿಯಾಗುತ್ತದೆ.

ವ್ಯಾಜ್ಯ ಎಂದ ಕೂಡಲೇ ಇದನ್ನು ಭೀಕರ ಕಾಳಗ, ಹೊಡೆದಾಟ, ಬಡಿದಾಟ ಎಂದೇ ಭಾವಿಸಬೇಕಿಲ್ಲ. ಇದು ಸಣ್ಣ ಮತಬೇಧದಿಂದ ಪ್ರಾರಂಭವಾಗಿ ಕೊನೆಗೆ ಹೊಡೆದಾಟ-ಬಡಿದಾಟಕ್ಕೂ ತಲುಪಬಹುದು. ಆದ್ದರಿಂದ ಇದನ್ನು ಸಣ್ಣದಾಗಿರುವಾಗಲೇ ಪರಿಹಾರ ಮಾಡುವುದು ಜಾಣತನದ ಕಲೆ. ತಂಡದಲ್ಲಿ ಜನರು ಕೆಲಸ ಮಾಡುತ್ತಿರುವಾಗ ಒಂದು ವ್ಯಕ್ತಿ ಅಥವಾ ಗುಂಪು ಒಟ್ಟಾಗಿ ಸೇರಿ, ಓರ್ವ ವ್ಯಕ್ತಿ ಅಥವಾ ಇನ್ನೊಂದು ಗುಂಪನ್ನು ಅದರ ಗುರಿ ತಲುಪದಂತೆ ಮಾಡಿದಾಗ ಉಂಟಾಗುವ ಸನ್ನಿವೇಶವನ್ನು ಸಂಸ್ಥೆಗಳ ಒಳವ್ಯಾಜ್ಯ ಎನ್ನಬಹುದು. ಈ ರೀತಿಯ ವ್ಯಾಜ್ಯಗಳಲ್ಲಿ ಮುಖ್ಯವಾಗಿ ಕಾಣುವುದು

· ವೈಯುಕ್ತಿಕ ಅಥವಾ ಸಂಬಂಧದ ತಿಕ್ಕಾಟ: ಇದರಲ್ಲಿ ಸ್ವ-ಪ್ರತಿಷ್ಠೆ, ನಿಷ್ಠೆ, ಅವಿಶ್ವಾಸ, ಅಗೌರವ ಮುಂತಾದ ಸಮಸ್ಯೆ ಇರುತ್ತದೆ.

· ವ್ಯವಸ್ಥೆಯ ತಿಕ್ಕಾಟ: ಇದರಲ್ಲಿ ಅವ್ಯವಸ್ಥೆ ಅಂದರೆ ಏಕ-ಕಾಲಕ್ಕೆ ಇಬ್ಬರು ಒಂದೇ ವಸ್ತುವಿನ ಉಪಯೋಗಕ್ಕೆ ಮುಂದಾಗುವುದು ಅಂದರೆ ವ್ಯವಸ್ಥೆಯಲ್ಲಿನ ಲೋಪ-ದೋಷಗಳಿಂದಾದ ವ್ಯಾಜ್ಯ.

· ಆಸಕ್ತಿಗಳ ಗುದ್ದಾಟ: ಇಬ್ಬರ ಅಥವಾ ಎರಡು ಗುಂಪಿನ ಆಸಕ್ತಿ, ಆದ್ಯತೆ ಇವುಗಳಲ್ಲಿ ಒಂದು ಪಕ್ಷಕ್ಕೆ ಲಾಭವಾಗುವ ಸಾಧ್ಯತೆಯಿಂದಾಗುವ ವ್ಯಾಜ್ಯ.

ಇಲ್ಲಿ “ಅಕ್ಕಿಯ ಮೇಲೆ ಆಸೆ, ನೆಂಟರ ಮೇಲೆ ಇಷ್ಟ” ಎಂಬ ಗಾದೆಯಂತೆ ಬರುವ ಐದು ಸನ್ನಿವೇಶಗಳು:

ಗೆಲುವು-ಸೋಲು: (Win-Lose) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ನಮ್ಮ ಪ್ರತಿಪಾದನೆಯೂ ಜಾಸ್ತಿಯಾದಾಗ ಮತ್ತು ಸಂಬಂಧಗಳಿಗೆ ಮಹತ್ವ ಕಡಿಮೆಯಾಗಿ ಸಹಕಾರವೂ ಇಲ್ಲದಾದಾಗ ಉಂಟಾಗುವ ಸನ್ನಿವೇಶವೇ ಪ್ರತಿಸ್ಪರ್ಧೆ. ಇದರಲ್ಲಿ ಹೇಗಾದರೂ ಎದುರಾಳಿಯನ್ನು ಸೋಲಿಸಬೇಕು ಮತ್ತು ನಾವು ಜಯಶಾಲಿಯಾಗಬೇಕು ಎನ್ನುವ ಹಂಬಲ. ಇದರಲ್ಲಿ ಒಂದು ಪಕ್ಷಕ್ಕೆ ಮಾತ್ರ ಜಯಕ್ಕೆ ಆಸ್ಪದವಿರುತ್ತದೆ.

ಸೋಲು-ಸೋಲು ಅಥವಾ ಹಿಂದೇಟು: (Lose – Lose) ಪದಾರ್ಥದ ಮೇಲೆ ನಮಗೆ ಆಸಕ್ತಿ ಇಲ್ಲವಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಮತ್ತು ಸಂಬಂಧಗಳಿಗೆ ಹೆಚ್ಚಿನ ಮಹತ್ವ ಇಲ್ಲದೆ, ಸಹಕಾರದ ಕೊರತೆಯೂ ಇದ್ದಾಗ, ಸ್ಪರ್ಧೆಯಿಂದ ಹಿಂದೇಟು ಹಾಕಿ, ಉಮೇದುವಾರಿಕೆ ಹಿಂಪಡೆಯುವ ಸನ್ನಿವೇಶ. ಇದರಲ್ಲಿ ಇಬ್ಬರಿಗೂ ಸೋಲುವ ಸಾಧ್ಯತೆ/ಭೀತಿ, ಹಾಗಾಗಿ ಹಿಂದೇಟು. ಯಾರಿಗೂ ಜಯವಿಲ್ಲ. ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ನಡೆಯಲಿಲ್ಲ ಎಂಬ ವಿಷಾದ.

ರಾಜಿ: (Compromise) ಪದಾರ್ಥದ ಮೇಲೆ ನಮಗೆ ಆಸಕ್ತಿ ಮಧ್ಯಮವಾಗಿದ್ದು, ಪ್ರತಿಪಾದನೆಯೂ ಮಧ್ಯಮವಾದಾಗ ಹಾಗೂ ಸಂಬಂಧಗಳಿಗೆ ಮಹತ್ವ ಮಧ್ಯಮವಾಗಿದ್ದು, ಸಹಕಾರದ ಅಪೇಕ್ಷೆಯೂ ಮಧ್ಯಮವಾಗಿದ್ದಾಗ ಉಂಟಾಗುವ ಸನ್ನಿವೇಶವೇ ಪರಸ್ಪರ ರಾಜಿ/ಅಂಗೀಕಾರ. ಇಲ್ಲಿ ಮಾತು-ಕತೆಗೆ ಅವಕಾಶ. ಯಾರಿಗೂ ಸೋಲಿಲ್ಲ, ಯಾರಿಗೂ ಗೆಲುವು ಇಲ್ಲ. ಒಂದು ರೀತಿಯ ಶೂನ್ಯದ ಡ್ರಾ.

ಸೋತು ಗೆಲ್ಲುವುದು: (Accommodate) ಪದಾರ್ಥದ ಮೇಲೆ ನಮ್ಮ ಆಸಕ್ತಿ ಕಡಿಮೆಯಾಗಿ, ಪ್ರತಿಪಾದನೆಯೂ ಕಡಿಮೆಯಾದಾಗ ಹಾಗೂ ಸಂಬಂಧಗಳಿಗೆ ಅಧಿಕ ಬೆಲೆ ಇದ್ದು, ಸಹಕಾರದ ಸಾಧ್ಯತೆ ಹೆಚ್ಚಾದಾಗ ನಾವು ಸ್ಪರ್ಧೆಗೆ ಇಳಿಯದೆ, ಎದುರಾಳಿಗೆ ಆಟ ಬಿಟ್ಟುಕೊಡುವ ಮನಃಸ್ಥಿತಿಗೆ ಬರುತ್ತೇವೆ. ಇಲ್ಲಿಯೂ ಮೇಲ್ನೋಟಕ್ಕೆ ಎಲ್ಲವೂ ತಣ್ಣಗಿದ್ದರೂ ಆಟ ಬಿಟ್ಟುಕೊಟ್ಟವರು ತಮ್ಮ ಅವಕಾಶಕ್ಕೆ ಕಾಯುತ್ತಿರುತ್ತಾರೆ.

ಇಬ್ಬರಿಗೂ ಜಯ: (Win –Win) ಪದಾರ್ಥದ ಮೇಲೆ ನಮಗೆ ಹೆಚ್ಚಿನ ಆಸಕ್ತಿಯಿದ್ದು, ಪ್ರತಿಪಾದನೆಯೂ ಹೆಚ್ಚಾಗಿದ್ದರೂ ಸಹ, ಸಂಬಂಧಗಳಿಗೂ ಬೆಲೆ ಅಧಿಕವಾಗಿದ್ದು ಸಹಕಾರದ ಸಾಧ್ಯತೆಯೂ ಹೆಚ್ಚಾಗಿದ್ದಾಗ ಇಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತೇವೆ. ಇದು ಅತ್ಯಂತ ಅಪೇಕ್ಷಣೀಯ ಪರಿಹಾರ. ಇದಕ್ಕೆ ಯಾವಾಗಲೂ ಪ್ರಯತ್ನಿಸಬೇಕು.

ವ್ಯಾಜ್ಯಗಳ ಪರಿಹಾರ ಹೇಗೆ
ವ್ಯಾಜ್ಯವನ್ನು ಪರಿಹಾರ ಮಾಡಲು ಬೇಕಾಗುವ ಕಲೆಗಳು:

·         ಸಂವಹನ ಕಲೆ

·         ಭಾವನೆಗಳ ಅಥವಾ ಆತಂಕ (ಸ್ಟ್ರೆಸ್ಸ್) ನಿರ್ವಹಣೆ ಮತ್ತು ಅನುಭೂತಿ

·         ಸಮಸ್ಯೆಗಳ ಪರಿಹಾರ / ನಿರ್ಧಾರ ತೆಗೆದುಕೊಳ್ಳುವ ಕಲೆ

·         ತಂಡದಲ್ಲಿ ಕೆಲಸ ಮಾಡುವ ಕಲೆ.

ಪರಿಹಾರದ ಹೆಜ್ಜೆಗಳು:

·         ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು.

·         ಎದುರಾಳಿಯ ಜೊತೆ ಮಾತು-ಕತೆ ನಡೆಸುವುದು.

·         ಮಧ್ಯಸ್ತಿಕೆಯೂ ಸೇರಿದಂತೆ, ಪರಿಹಾರಕ್ಕೆ ಮಾರ್ಗಗಳನ್ನು ಹುಡುಕುವುದು.

·         ಸರಿಯಾದ ಪರ್ಯಾಯದ ಆಯ್ಕೆ.

·         ಭಾವನೆಗಳನ್ನು ನಿರ್ವಹಿಸುವುದು.

ವ್ಯಾಜ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ವ್ಯಾಜ್ಯಕ್ಕೆ ಮೂಲ ಕಾರಣ ಏನು ಎಂದು ತಿಳಿದು ಅದಕ್ಕೆ ಪರಿಹಾರ ಹುಡುಕಬೇಕು. ಇದಕ್ಕಾಗಿ ನಿಮ್ಮ ಮತ್ತು ಎದುರಾಳಿಯ ಇಬ್ಬರ ವಾದವೂ ಏನು ಎಂಬುದನ್ನು ಸ್ಪಷ್ಟವಾಗಿ ಇಡಬೇಕು. ಇಬ್ಬರ ಆಸಕ್ತಿ-ಆಸೆ-ಅಕಾಂಕ್ಷೆ-ಭೀತಿ ಏನು ಎಂಬುದನ್ನು ಅರಿಯಬೇಕು. ಇದನ್ನು ಅರಿಯಲು ಕೆಳಕಂಡ ಪ್ರಶ್ನೆಗಳು ಸಹಕಾರಿಯಾಗಬಹುದು:

ನಮ್ಮ ಆಸಕ್ತಿ ಏನು? ನಮ್ಮ ಮುಖ್ಯ ಅನುಮಾನ ಏನು? ಬೇಡಿಕೆ ಏನು? ಅವಶ್ಯಕತೆ ಏನು? ಆಕಾಂಕ್ಷೆ  ಮತ್ತು ಭೀತಿ ಏನು? ಇದೇ ರೀತಿ ಎದುರಾಳಿಯ ಮಾಹಿತಿಯನ್ನೂ ಪಡೆದು ಅದನ್ನೂ ಕೂಲಂಕಷವಾಗಿ ಅವಲೋಕಿಸಬೇಕು.

ಯಾವ ರೀತಿಯ ಸಂಧಾನಕ್ಕೆ ಬರಬಹುದು?

ಮೂರನೆಯ (ನಿಶ್ಪಕ್ಷ) ಪಕ್ಷವನ್ನು ಮಧ್ಯಸ್ಥಿಕೆ ವಹಿಸಲು ನೇಮಿಸಿದಲ್ಲಿ ನಮಗೆ ಸಂಧಾನಕ್ಕೆ ಬರಲು ಸಾಧ್ಯವೇ? ಇಬ್ಬರಿಗೂ ನ್ಯಾಯ ಸಿಕ್ಕಂತೆ ಆಗುತ್ತದೋ ಅಥವಾ ಇಬ್ಬರ ಜಗಳ ಮೂರನೆಯವರ ಲಾಭ ಆಗುತ್ತದೋ? ಯಾರು ಈ ಮೂರನೆಯ ಪಕ್ಷ? ಅವರು ಸಮಾಜದಲ್ಲಿ ಪ್ರತಿಷ್ಠಿತರೇ? ಸಂಧಾನ ಕಾನೂನಿನ ಚೌಕಟ್ಟಿನಲ್ಲಿರುತ್ತದೆಯೇ? ಅದನ್ನು ಯಾರು ಜಾರಿ ಮಾಡುವುದು ಮತ್ತು ನೋಡಿಕೊಳ್ಳುವುದು? ಖರ್ಚು ವೆಚ್ಚ ಯಾರು ಭರಿಸುವುದು? ಇಂತಹ ಪ್ರಶ್ನೆಗಳಿಗೂ ಸ್ಪಷ್ಟ ಉತ್ತರ ಸಿಗಬೇಕು.

ಕೆಲವೊಮ್ಮೆ ಇಬ್ಬರೂ ತಮ್ಮ ಪ್ರತಿಷ್ಠೆಯನ್ನೇ ದೊಡ್ಡದು ಮಾಡಿಕೊಂಡು, ನಿಜವಾಗಿ ಆಗುತ್ತಿರುವ ತಮ್ಮ ಆಸಕ್ತಿಯ ಹಾನಿಯನ್ನು ನಿರ್ಲಕ್ಷಿಸಿ, ತಮ್ಮ ಮುಖವನ್ನು ಉಳಿಸಿಕೊಳ್ಳುವ (ಸೇವಿಂಗ್ ದಿ ಫೇಸ್) ನಿಟ್ಟಿನಲ್ಲಿ,ನನಗೆ ಕನಿಷ್ಠ ಇಷ್ಟಾದರೂ ಸಿಗಬೇಕು ಎಂದು ಚೌಕಾಸಿ ಮಾಡಲು ಪ್ರಯತ್ನಿಸುತ್ತಾರೆ ಮತ್ತು ತಮ್ಮ ನಿಜವಾದ ಆಸಕ್ತಿ ಹಾನಿಯನ್ನು ಸಹಿಸಿಕೊಳ್ಳುತ್ತಾರೆ. ಆದ್ದರಿಂದ ಇಬ್ಬರ ಆಸಕ್ತಿ ಏನು ಎಂಬುದನ್ನು ತಿಳಿಯುವುದು ಬಹಳ ಮುಖ್ಯ.

ವ್ಯಾಜ್ಯ ಪರಿಹಾರ ಆಗುವ ತನಕ ಎರಡೂ ಪಕ್ಷಗಳು ತಮ್ಮ ಭಾವನಾತಿರೇಕಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗುತ್ತದೆ. ನೆನಪಿಡಿ, ಮಾತು ಬಲ್ಲವನಿಗೆ ಜಗಳವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...