Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...