Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...