Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...