Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...