Homeರಾಜಕೀಯಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

ಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

- Advertisement -
- Advertisement -

ಸಿಕ್ಕಾಪಟ್ಟೆ ಸರ್ಕಸ್ ತರುವಾಯ ಸಮ್ಮಿಶ್ರ ಸರ್ಕಾರದ ಅರೆಬೆಂದ ಸಚಿವ ಸಂಪುಟ ಅಣಿಯಾಗಿದೆ. ಸಚಿವಗಿರಿ ಸಿಗದೆ ಬಂಡಾಯದ ಬಾವುಟ ಹಾರಾಡಿಸಿಕೊಂಡು ದಿಲ್ಲಿಗೂ, ಬೆಂಗ್ಳೂರಿಗೂ ಅಲೆದಾಡಿದ ಪುಣ್ಯಾತ್ಮರೂ ದಿನದಿಂದ ದಿನಕ್ಕೆ ತಣ್ಣಗಾಗುತ್ತಿದ್ದಾರೆ. ಇನ್ನು ಸಿಕ್ಕ ಖಾತೆಗಳ ಬಗ್ಗೆ ಕ್ಯಾತೆ ತೆಗೆದವರೂ, ಪಾಲಿಗೆ ಬಂದ ಪಂಚಾಮೃತದ ಮುಂದೆ ಚಕ್ಕಮಕ್ಕಳ ಹಾಕಿ ಕೂತು, ಕೈ-ಬಾಯಿ ಅಣಿಯಾಗಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಕುಮಾರಣ್ಣನ ಸಂಪುಟದ ರೈಲು ನಿಧಾನಕ್ಕೆ ಹಳಿಗಳಿಗೆ ಕುದುರಿಕೊಳ್ಳಲು ಶುರುವಾಗಿದೆ. ಒಂದು ಸರ್ಕಾರ ಅಂತ ರಚನೆಯಾದಾಗ, ಅದರಲ್ಲೂ ಬಣ್ಣಬಣ್ಣದ ಕೌದಿಯಂತಹ ಸಮ್ಮಿಶ್ರ ಸರ್ಕಾರ ಅಂದಮೇಲೆ ಇಂತದ್ದೆಲ್ಲ ಮಾಮೂಲಿ. ಈ ಸಲದ ಸಂಪುಟ ಕಸರತ್ತಿನಲ್ಲಿ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬಸವರಾಜ್ ಹೊರಟ್ಟಿಯಂತಹ ಘಟಾನುಘಟಿಗಳಿಗೆ ಮಂತ್ರಿಗಿರಿ ಮಿಸ್ ಆಗಿರೋದು ಎಷ್ಟು ಶಾಕ್‍ನ ಸಂಗತಿಯೋ, ಗಿರಿಕನ್ಯೆ ಜಯಮಾಲಾ ಮೇಡಂಗೆ ಮಂತ್ರಿಗಿರಿ ಸಿಕ್ಕಿರೋದೂ ಅಷ್ಟೇ ದಿಗ್ಬ್ರಾಂತಿಯ ವಿಷಯವಾಗಿದೆ. ಯಾಕೆಂದರೆ ಯಾರೊಬ್ಬರೂ ಜಯಮಾಲಾ ಮಿನಿಸ್ಟರ್ ಆಗಲಿದ್ದಾರೆ ಅಂತ ಎಣಿಸಿರಲಿಲ್ಲ. ಮಹಿಳಾ ಕೋಟಾದ ಪ್ರಶ್ನೆ ಬಂದಾಗಲೂ ಡಿಕೇಶಿ ಬಳಗದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮರಾಠಾ ಬ್ರ್ಯಾಂಡಿನ ಖಾನಾಪುರದ ಅಂಜಲಿ ನಿಂಬಾಳ್ಕರ್ ನಡುವೆಯೇ ಹಗ್ಗಜಗ್ಗಾಟ ನಡೆದಿತ್ತು. ಪಾಪದ ಮೋಟಮ್ಮ ನನ್ನನ್ನ ಮಂತ್ರಿ ಮಾಡಿ ಅಂತ ಕೇಳಿದಾಗಲೂ `ಏಯ್ ಸುಮ್ನೇ ಇರಮ್ಮ, ಗೆದ್ದ ಶಾಸಕರನ್ನೇ ಬಿಜೆಪಿಯವರ ಬಕಾಸುರ ಬಾಯಿಂದ ಕಾಪಾಡಿಕೊಳ್ಳಲು ಹೆಣಗಾಡ್ತಿದೀವಿ. ಹಾಗಾಗಿ ಅವ್ರನ್ನ ತೃಪ್ತಿ ಪಡಿಸ್ಲಿಕ್ಕೇ ಸಾಕುಸಾಕಾಗಿ ಹೋಗ್ತಿದೆ. ಅದಕ್ಕೋಸ್ಕರ ಈ ಸಲ ಎಂಎಲ್‍ಸಿಗಳಿಗೆ ಮಂತ್ರಿ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ನಂತ್ರ ನೋಡೋಣ’ ಅನ್ನೋ ಉತ್ತರ ಬಿಸಾಕಿದ ದಿಲ್ಲಿ ದಲ್ಲಾಳಿಗಳು ಆಯಮ್ಮನನ್ನು ಗದರಿಕೊಂಡಿದ್ದರಂತೆ.
ಆದರೆ ಕೊನೇ ಘಳಿಗೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನು ಹಿಂದಿಕ್ಕಿದ್ದಲ್ಲದೇ, ಎಂಎಲ್‍ಸಿಗಳಿಗೆ ಮಂತ್ರಿಭಾಗ್ಯ ಇಲ್ಲ ಎಂಬ ಅಡ್ಡಗೋಡೆಯನ್ನೂ ಜಿಗಿದುಬಂದ ಜಯಮಾಲ ಮೇಡಂ ಮಂತ್ರಿಣಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಮಂತ್ರಿಗಿರಿ ಮಿಸ್ ಮಾಡಿಕೊಂಡ `ಪುಣ್ಯಾತ್ಮ’ರು ಅಂಟಿಸುವ `ನಿಷ್ಠಾವಂತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡದೆ, ಬಕೇಟು ಹಿಡಿದ ಲಾಬಿ ಗಿರಾಕಿಗಳನ್ನು ಮಂತ್ರಿ ಮಾಡಿದ್ದಾರೆ. ನನ್ನ ಬೆಂಬಲಿಗರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರ್ತೀನಿ’ ಅನ್ನೋ ಠುಸ್ ಪಟಾಕಿಗೆ ಪ್ರತಿಯಾಗಿ ಮಂತ್ರಿಗಿರಿ ಸಿಕ್ಕ `ಮಹಾತ್ಮ’ರು `ನನ್ನ ನಿಷ್ಠೆ ನೋಡಿ ಪಕ್ಷ ಈ ಸ್ಥಾನ ನೀಡಿದೆ. ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿದವನೇ/ಳೇ ಅಲ್ಲ. ನನ್ನ ಗೆಲ್ಲಿಸಿದ ಜನರ ಸೇವೆಗೆ ಇದನ್ನು ಸದುಪಯೋಗ ಮಾಡಿಕೊಳ್ತೀನಿ’ ಅನ್ನೋ ಢಂಢಂ ಪಟಾಕಿ ಅಂಟಿಸೋದು ಸಹಜ. ಜಮಯಾಲ ಮೇಡಂ ಕೂಡಾ ಅಂತದ್ದೇ ಒಂದು ಢಂಢಂ ಪಟಾಕಿ ಅಂಟಿಸಿದ್ದಾರಾದರು ಅವರ ಮಂತ್ರಿಗಿರಿಯ ಹಿಂದೆ ಒಂದು ಪೊಲಿಟಿಕಲ್ ಲಾಬಿ ಇದ್ದೇ ಇದೆ ಅನ್ನೋದು ಮಾತ್ರ ಸುಳ್ಳಲ್ಲ.
ಬಣ್ಣದ ಲೋಕದಿಂದ ಬಂದ ಬೇರೆಬೇರೆ ಪಾರ್ಟ್‍ಟೈಂ ರಾಜಕಾರಣಿಗಳಿಗೆ ಹೋಲಿಸಿದರೆ ಜಯಮಾಲ ಮೇಡಮ್ಮು ಹೆಚ್ಚು ದಕ್ಷ, ದಿಟ್ಟ ರಾಜಕಾರಣಿ ಅನ್ನೋದ್ರಲ್ಲಿ ಸಂಶಯವಿಲ್ಲ. ಆದರೆ, ಇರೋ ಒಂದು ರೊಟ್ಟಿಯನ್ನೇ ಹರಿದು, ಹಸಿವಿನಿಂದ ರಂಪಾಟ ಮಾಡುತ್ತಿರುವ ತನ್ನ ಸಂತಾನ ಸೈನ್ಯಕ್ಕೆ ಹಂಚಬೇಕಾದ ನಿಕೃಷ್ಟ ಬರಗಾಲಕ್ಕೆ ಸಿಲುಕಿರುವ ಕಾಂಗ್ರೆಸ್ ಅನ್ನೋ ಶತಮಾನದ ಪಾರ್ಟಿ ಯಾವ ಲಾಬಿಯೂ ಇಲ್ಲದೆ, ದಕ್ಷತೆಯ ಮೈಲೇಜಿನ ಮೇಲೆ ಜಯಮಾಲರನ್ನು ಮಂತ್ರಿ ಮಾಡುತ್ತೆ ಅನ್ನೋದನ್ನು ನಂಬಲು ಕಷ್ಟ; ಅದೂ, ಮ್ಯಾನ್ ಆಫ್ ದಿ ಮ್ಯಾಚ್ ಡಿಕೇಶಿ ಬೆಟಾಲಿಯನ್ನಿನ ವಿಕೆಟನ್ನೇ ರನ್‍ಔಟ್ ಮಾಡಿಸಿ! ಜಯಮಾಲರನ್ನು ಮಂತ್ರಿ ಮಾಡಲೇಬೇಕು ಅಂತ ಪಟ್ಟು ಹಿಡಿದು, ಲಾಬಿ ಮಾಡಿದ್ದು ಮಾಜಿ ಸಿಎಂ ಸಿದ್ರಾಮಯ್ಯನವರು ಅನ್ನೋ ಮಾತುಗಳು ಕಾಂಗ್ರೆಸ್ ಪಡಸಾಲೆಯಿಂದಲೇ ಕೇಳಿಬರುತ್ತಿವೆ. ಜಯಮಾಲ ಮೊದಲಿನಿಂದಲೂ ಸಿದ್ರಾಮಯ್ಯನವರ ಅತ್ಯಾಪ್ತ ವಲಯದ ರಾಜಕೀಯ ಪಟು. ಸಿದ್ದು ಸಿಎಂ ಆಗಿದ್ದಾಗ, ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು 16 ಜನರ ಒಂದು ಸಮಿತಿ ರಚಿಸಿದ್ದರು. ಆ ಸಮಿತಿಗೆ ಅಧ್ಯಕ್ಷೆಯನ್ನಾಗಿ ಸಿದ್ದು ಆಯ್ಕೆ ಮಾಡಿದ್ದು ಇದೇ ಜಯಮಾಲ ಮೇಡಂರನ್ನು. ಇನ್ನು ಮೊನ್ನೆಯ ಎಲೆಕ್ಷನ್ ವೇಳೆ, ಸಿದ್ದುವಿಗೆ ಚಾಮುಂಡೇಶ್ವರಿಯಲ್ಲಿ ಕಂಟಕವಿರುವ ಮುನ್ಸೂಚನೆ ಸಿಕ್ಕಾಗ ಜಯಮಾಲ ಮೇಡಂ, ಒಂದು ಕಾಲದ ಬಿಜೆಪಿ ಒಡನಾಡಿ ಮುಖ್ಯಮಂತ್ರಿ ಚಂದ್ರುರಂತಹ ಸಹೋದ್ಯೋಗಿಯನ್ನೇ ಕರಕೊಂಡು ಬಂದು ಸಿದ್ದು ಪರ ಅದ್ದೂರಿ ಪ್ರಚಾರ ಮಾಡಿದ್ದರು. ಅಷ್ಟರಮಟ್ಟಿಗೆ ಅವರಿಬ್ಬರ ನಡುವೆ ಆಪ್ತತೆ ಇದೆ, ಅಭಿಮಾನವಿದೆ. ಸಿದ್ದು, ಜಯಮಾಲರ ಮೇಲಿಟ್ಟಿರುವ ಆ ಅಭಿಮಾನವೇ ಇವತ್ತು ಅವರನ್ನು ಮಂತ್ರಿ ಮಾಡಿದೆ. ಅಂದಹಾಗೆ, ಸಿದ್ದು ಬಗ್ಗೆ ಜಯಮಾಲ ಮೇಡಂಗೆ ಅಭಿಮಾನ ತುಂಬಿ ಬಂದು, ಅಂತರಾಳದಿಂದ ಹೆಮ್ಮೆ ಎನಿಸಿದಾಗ ಏನಂತ ಹೊಗಳ್ತಾರೆ ಗೊತ್ತುಂಟಾ, `ನಂ ಸಿದ್ರಾಮಯ್ಯನೋರು ಗಂಡು ಹುಲಿ ಕಣ್ರೀ!’.
ಸಂಪುಟ ರಚನೆಯಲ್ಲಿ ಸಿದ್ರಾಮಯ್ಯರನ್ನು ಹೈಕಮಾಂಡ್ ಮೂಲೆಗುಂಪು ಮಾಡಿದೆ, ಅವರ ಆಪ್ತರಿಗೆ ಸಚಿವಗಿರಿ ತಪ್ಪಿಸಲಾಗಿದೆ ಅಂತ ಬೊಬ್ಬಿಡುವ ಖಾಲಿ ಡಬ್ಬಗಳಿಗೆ ಜಯಮಾಲ ಆಯ್ಕೆಯೇ ಒಂದು ದೊಡ್ಡ ಉತ್ತರ. ಕಾಂಗ್ರೆಸ್‍ನೊಳಗೆ ಸಿದ್ದು ಈಗಲೂ ಡಿಗ್ನಿಫೈಡ್ ರೋಲ್ ನಿಭಾಯಿಸುತ್ತಿದ್ದಾರೆ ಅನ್ನೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನ ಓವರ್‍ಟೇಕ್ ಮಾಡಿ ಜಯಮಾಲ ಮಂತ್ರಿಯಾಗಿರೋದು ಸಾಕ್ಷಿ. ಇದೆಲ್ಲ ಆಯ್ಕೆ ಹಿಂದಿನ ಕಸರತ್ತಾಯ್ತು. ಇನ್ನು ದಕ್ಷತೆ ವಿಚಾರಕ್ಕೆ ಬಂದರೆ, ಈ ಸಮ್ಮಿಶ್ರ ಸಂಪುಟದಲ್ಲಿರುವ ಕೆಲವೇ ಕೆಲವು ಅರ್ಹ ಮಂತ್ರಿಗಳಲ್ಲಿ ಜಯಮಾಲ ಕೂಡಾ ಒಬ್ಬರು ಅನ್ನೋದ್ರಲ್ಲಿ ತಪ್ಪಿಲ್ಲ. ಸಿದ್ದು ಲಾಬಿಯಿಂದ ಸಿಕ್ಕಿದೆಯೋ, ಬಿಲ್ಲವ ಕೋಟಾದಡಿ ದಕ್ಕಿದೆಯೋ, ಒಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಬ್ಬ ಸಮರ್ಥ ಸಾರಥಿಯೇ ಸಿಕ್ಕಂತಾಗಿದೆ. ಯಾಕೆಂದರೆ ಜಯಮಾಲ ಗ್ರಾಮೀಣ ಮಹಿಳೆಯರ ಪುನರ್ವಸತಿ ವಿಷಯದ ಮೇಲೆ ಅಧ್ಯಯನ ಮಾಡಿಯೇ ಡಾಕ್ಟರೇಟ್ ಪದವಿ ಪಡೆದುಕೊಂಡಂತವರು. ಮೊದಲೇ ಹೇಳಿದಂತೆ ಕಳೆದ ಸರ್ಕಾರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಸಮಿತಿಯ ಅಧ್ಯಕ್ಷೆಯಾಗಿಯೂ ಮಹಿಳಾ ಸವಾಲುಗಳನ್ನು ಕಂಡ ಅನುಭವವಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ ಕನ್ನಡ ಸಿನಿರಂಗದ ಬಿಕ್ಕಟ್ಟುಗಳನ್ನು ಬಗೆಹರಿಸಿದ ಗಟ್ಟಿತನವಿರುವ ಜಯಮಾಲರಿಗೆ ಮಂತ್ರಿಯಾಗುವ ಸಾಮಥ್ರ್ಯ ಉಳಿದ ಬಣ್ಣದ ಮಂದಿಗಿಂತ ಹೆಚ್ಚಿದೆ ಅನ್ನೋದ್ರಲ್ಲಿ ತಪ್ಪಿಲ್ಲ. ಅಂದಹಾಗೆ, 1993ರಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಘಳಿಗೆಯಿಂದ ಇಲ್ಲಿಯವರೆಗು ಕಾಂಗ್ರೆಸ್‍ನಲ್ಲೇ ಗುರುತಿಸಿಕೊಂಡು ಬಂದಿದ್ದಾರೆ. ಇತರರಂತೆ ಪಕ್ಷಾಂತರ ಮಾಡಿದವರಲ್ಲ.
ತನ್ನ 13ನೇ ವಯಸ್ಸಿಗೇ ಬಣ್ಣ ಹಚ್ಚಿ, 16ನೇ ವಯಸ್ಸಿಗೆ ಡಾ.ರಾಜ್ ಎದುರು ಪ್ರೇಮದ ಕಾಣಿಕೆಯಲ್ಲಿ ನಾಯಕಿಯಾಗಿ ಮಿಂಚಿದ ಈ ಗಿರಿಕನ್ಯೆ ತನ್ನ ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಏಳುಬೀಳು ಕಂಡುಬಂದಂತವರು. ಪ್ರತಿಭಾವಂತ ನಟನಾಗಿದ್ದರೂ, ತನ್ನ ಚಟಗಳಿಗೆ ಮಿತಿ ಹೇರಿಕೊಳ್ಳದೆ ಮರೆಯಾಗಿ ಹೋದ ಟೈಗರ್ ಪ್ರಭಾಕರ್ ಜೊತೆ ಜಯಮಾಲ ಇಟ್ಟ ಮೊದಲ ದಾಂಪತ್ಯ ದೀರ್ಘಕಾಲ ಉಳಿಯಲಿಲ್ಲ. ಯಾವ ಮುಲಾಜುಗಳಿಗೂ ಕಟ್ಟುಬೀಳದೆ ಡೈವೋರ್ಸ್ ಪಡೆದು ಆ ದಾಂಪತ್ಯದಿಂದ ಹೊರಬಂದ ಅವರು ನಂತರ ಛಾಯಾಗ್ರಾಹಕ ರಾಮಚಂದ್ರರವರನ್ನು ಮದುವೆಯಾಗಿ ಮತ್ತೊಮ್ಮೆ ದಿಟ್ಟತೆ ತೋರಿದ್ದರು. ಮಹಿಳೆಯರಿಗೆ ಪ್ರವೇಶವಿಲ್ಲದ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ವಿವಾದ ಭುಗಿಲೆದ್ದಾಗಲೂ ಜಯಮಾಲ ಬಲು ದಿಟ್ಟತೆಯಿಂದಲೇ ಎದುರಿಸಿದ್ದರು. ಕಮರ್ಷಿಯಲ್ ಚಿತ್ರಗಳಲ್ಲಿ ಹೀರೋಯಿನ್ ಆಗಿ ಮಿಂಚುತ್ತಲೇ `ತಾಯಿ ಸಾಹೇಬ’ದಂತಹ ರಾಷ್ಟ್ರಪ್ರಶಸ್ತಿ ವಿಜೇತ ಕಲಾತ್ಮಕ ಚಿತ್ರವನ್ನೂ ನಿರ್ಮಿಸಿ ಸೈ ಅನ್ನಿಸಿಕೊಂಡಿದ್ದ ಅವರು ಮಹಿಳಾ ಕಲ್ಯಾಣ ಹಾಗೂ ಕನ್ನಡ, ಸಂಸ್ಕøತಿ ಇಲಾಖೆಗಳಿಗೆ ನ್ಯಾಯ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...