Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...