Homeಕರ್ನಾಟಕಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಜಿಂದಾಲ್‍ಗೆ ಭೂಮಿ: ಎಚ್.ಕೆ. ಪಾಟೀಲ, ರಾಘವೇಂದ್ರ ಕುಷ್ಟಗಿ ಏನು ಹೇಳ್ತಾರೆ?

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಿಂದಾಲ್ ಸ್ಟೀಲ್ ಕಂಪನಿಗೆ 3600 ಎಕರೆ ಭೂಮಿ ಹಸ್ತಾಂತರಿಸುವುದನ್ನು ಹಲವರು ಮೊದಲಿಂದಲೂ ವಿರೋಧಿಸುತ್ತ ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕ, ಮಾಜಿ ಸಚಿವ ಎಚ್‍ಕೆ ಪಾಟೀಲ ಮತ್ತು ಜನಸಂಗ್ರಾಮದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ನಾನುಗೌರಿ.ಕಾಂ ನೊಡನೆ ಮಾತಾಡಿ, ಇದರ ಹಿಂದಿನ ಹುನ್ನಾರಗಳನ್ನು ತೆರೆದಿಟ್ಟಿದ್ದಾರೆ…

ಕಾನೂನು ಇಲಾಖೆ ಈ ಭೂಮಿ ಪರಭಾರೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಸ್ತಾಪವನ್ನು ರಾಜ್ಯ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ಪ್ರಸ್ತಾಪದಲ್ಲೇ ಇದ್ದ ಕಾನೂನು ಇಲಾಖೆಯ ವ್ಯತಿರಿಕ್ತ ಅಭಿಪ್ರಾಯವನ್ನು ಉದಾಹರಿಸಿ ಕೆಲವು ಸಂಪುಟ ಸದಸ್ಯರು ವಿರೋಧ ಮಾಡಿದರೂ ರಾಜ್ಯ ಸರ್ಕಾರ ಜಿಂದಾಲ್ ಪರ ನಿಲುವು ಕೈಗೊಂಡಿರುವುದರ ಹಿಂದೆ ಸಾಕಷ್ಟು ‘ವ್ಯವಹಾರ’ ನಡೆದಿರಬಹುದು ಎಂಬ ಸಂಶಯ ಜನರನ್ನು ಕಾಡುತ್ತಿದೆ.

ಆಡಳಿತ ಪಕ್ಷದ ಶಾಸಕ ಮತ್ತು ಮಾಜಿ ಸಚಿವ ಎಚ್.ಕೆ ಪಾಟೀಲರು ಕಳೆದ 4-5 ದಿನದಿಂದ ಜಿಂದಾಲ್‍ಗೆ ಭೂಮಿ ನೀಡುತ್ತಿರುವುದು ಕಾನೂನು ವಿರೋಧ ಮತ್ತು ಅಕ್ರಮ ಎಂದು ಹೇಳುತ್ತಲೇ ಬಂದಿದ್ದಾರೆ. ಎಚ್.ಕೆ ಪಾಟೀಲರು ನಮ್ಮ ಪೋರ್ಟಲ್‍ನೊಂದಿಗೆ ಹಂಚಿಕೊಂಡ ಮಾಹಿತಿಯಿಲ್ಲಿದೆ:

‘ಜಿಂದಾಲ್‍ಗೆ ಭೂಮಿ ಕೊಡುವುದರ ಹಿಂದೆ ಸಂಶಯಾತ್ಮಕ ಕೈವಾಡವಿದೆ. ಯಾಕೆ ಕೊಡಬಾರದು ಎನ್ನುವುದಕ್ಕೆ ಈ ಮೂರು ಕಾರಣಗಳು ಸಾಕು: 1) ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ನೀಡುವ ಮೂಲಕ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದು.

2) ಜಿಂದಾಲ್ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕಷ್ಟು ಮೊತ್ತದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರದ ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್)ಗೆ 2 ಸಾವಿರ ಕೋಟಿಗೂ ಹಣವನ್ನು ಜಿಂದಾಲ್ ಪಾವತಿಸದೇ ಉಳಿಸಿಕೊಂಡಿದೆ. ನಮ್ಮ ಸರ್ಕಾರಿ ಸಂಸ್ಥೆಗೇ ಬಾಕಿ ಉಳಿಸಿಕೊಂಡ ಸಂಸ್ಥೆಗೆ ತರಾತುರಿಯಲ್ಲಿ ಅಗ್ಗದ ದರದಲ್ಲಿ ಭೂಮಿ ನೀಡಿದ್ದು ಅನೈತಿಕ ಮತ್ತು ಕಾನೂನು ವಿರೋಧಿ ತೀರ್ಮಾನ.

3) ಜಿಂದಾಲ್ ಮೇಲೆ ಅಕ್ರಮವಾಗಿ ಅದಿರು ಮಾರಿದ ಆರೋಪಗಳಿವೆ. ನ್ಯಾ. ಸಂತೋಷ ಹೆಗಡೆಯವರ ವರದಿಯಲ್ಲೂ ಇದು ಉಲ್ಲೇಖವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟಿನಲ್ಲಿ ಜಿಂದಾಲ್ ಮೇಲೆ ಕೇಸೂ ಇದೆ. ನಮ್ಮ ರಾಜ್ಯದ ಸಾಮಾಜಿಕ ಹೋರಾಟಗಾರ ಎಸ್. ಆರ್ ಹಿರೇಮಠರು ಸುಪ್ರಿಂಕೋರ್ಟಿನಲ್ಲಿ ಜಿಂದಾಲ್ ವಿರುದ್ಧ ಕೇಸು ಹಾಕಿದ್ದಾರೆ. ಹೀಗಾಗಿ ಕಾನೂನು ಇಲಾಖೆಯು ಜಿಂದಾಲ್‍ಗೆ ಭೂಮಿ ಕೊಡಬಾರದು ಎಂಬ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಜಿಂದಾಲ್ ಮೇಲೆ ಅಂತಹ ಯಾವ ಅಪೀಲೂ ಇಲ್ಲ ಎಂದು ರಾಜ್ಯದ ಅಡ್ವೋಕೇಟ್ ಜನರಲ್ ಕೂಡ ಸಂಪುಟಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ.

ನನ್ನ ಈ ವಿರೋಧದದ ಮಾದರಿಯಲ್ಲೇ ಬಿ.ಕೆ. ಹರಿಪ್ರಸಾದ್ ಮತ್ತು ಎಚ್ ವಿಶ್ವನಾಥ್ ಕೂಡ ವಿರೋಧ ಮಾಡಿದ್ದಾರೆ. ಸಂಪುಟ ಸಭೆಯಲ್ಲೂ ಕೆಲವರು ವಿರೋಧಿಸಿದ್ದಾರೆ , ಇಷ್ಟಿದ್ದೂ ಜಿಂದಾಲ್‍ಗೆ ಖನಿಜಯುಕ್ತ ಭೂಮಿ ನೀಡಿದ್ದು ಅಕ್ಷಮ್ಯ. ಸರ್ಕಾರ ತನ್ನ ನಿಲುವು ಬದಲಿಕೊಳ್ಳಲೇಬೇಕು…..

ರಾಘವೇಂದ್ರ ಕುಷ್ಟಗಿ:

“ಇದರ ಹಿಂದ್ ದೊಡ್ಡ ಲಾಬೀನ ಅದಾರಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕೈವಾಡ ಇದೇರಿ. ಡಿ.ಕೆ. ಶಿವಕುಮಾರಗಂತೂ ಇದು ‘ಲಾಭದ’ ವಹಿವಾಟು ಅಷ್ಟೇ. 80ರದಶಕದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ವಿಜಯನಗರ ಸ್ಟೀಲ್ ಕಂಪನಿಗೆ 17 ಸಾವಿರ ಎಕರೆ ಭೂಮಿ ನೀಡಿದ್ದರು. ಕಾಲಾಂತರದಲ್ಲಿ ಇದು ಲಾಭಯುತವಾಗದಂತೆ ಖಾಸಗಿ ಕಂಪನಿಗಳು ನೋಡಿಕೊಂಡವು. ಮುಂದೆ ಈ ಸರ್ಕಾರಿ ಸ್ವಾಮ್ಯದ ಉದ್ಯಮ ಜಿಂದಾಲ್ ಮಡಿಲಿಗೆ ಬಿತ್ತರಿ. ವಿಜಯನಗರ ಅಟೀಲ್ ಸಂಸ್ಥೆಯ 17 ಸಾವಿರ ಎಕರೆ ಜೊತೆಗೆ ಉಕ್ಕು ಉತ್ಪಾದನೆ ಮಾಡುವ ಲೈಸೆನ್ಸೂ ಜಿಂದಾಲ್‍ಗೆ ಸಿಕ್ಕಿತು.

2010-11 ರ ಸುಮಾರು ಕೆಐಎಡಿಬಿ ತಾನೇ ಮುಂದೆ ನಿಂತು ರೈತರಿಂದ ಮತ್ತೆ 3 ಸಾವಿರ ಎಕರೆ ಭೂಮಿ ಖರೀದಿಸಿ ಇದೇ ಜಿಂದಾಲ್‍ಗೆ ಧಾರೆ ಎರೆಯಿತು. ಇದರ ಹಿಂದೆ ಎಲ್ಲ ಪಾರ್ಟಿಗಳ ದೊಡ್ಡ ಕುಳಗಳಿಗೆ ಸಾಕಷ್ಟು ಕಿಕ್‍ಬ್ಯಾಕ್ ಸಿಕ್ಕೇ ಸಿಕ್ಕಿರ್ತದ… ಈ 3 ಸಾವಿರ ಎಕರೆ ಪರಭಾರೆ ವಿರುದ್ಧ ಇಲ್ಲಿನ ಸ್ಥಳಿಯ ಬಸವಾರಾಜ್ ಅನ್ನೋರು ಸುಪ್ರಿಂಗೆ ಹೋಗ್ಯಾರ.

ಇದೆಲ್ಲಕ್ಕಿಂತ ಗಾಬರಿ ಎಂದರೆ ಜಿಂದಾಲ್‍ನವರು ತಮಗಿದ್ದ ಅಧಿಕೃತ ಭೂಮಿ ಪಕ್ಕದ ಗೋಮಾಳ, ಕೆರೆಕಟ್ಟೆ ಮತ್ತು ಅರಣ್ಯ ಭೂಮಿಯನ್ನು ಅತಿಕ್ರಮ ಮಾಡಿಕೊಂಡಾರ, ಇದರ ವಿರುದ್ಧಾನೂ ಯಾರಾದರೂ ಸುಪ್ರಿಂಗೆ ಹೋಗಬೇಕು.

ಇಲ್ಲಿನ ಜನರಿಗೆ ಉದ್ಯೋಗವನ್ನೂ ಕೊಡದ, ಸರ್ಕಾರಕ್ಕೆ ರಾಯಲ್ಟಿ ರೂಪದಲ್ಲಿ ಜುಜುಬಿ ಫೀಸು ಕಟ್ಟುವ ಇಂತಹ ಜನದ್ರೋಹಿ ಕಂಪನಿಗೆ ಈಗ 3600 ಎಕರೆ ಭೂಮಿ ನೀಡ್ತಾ ಇರೋದರ ಹಿಂದೆ ದೊಡ್ಡ ಕಿಕ್‍ಬ್ಯಾಕ್ ವ್ಯವಹಾರ ಅದಾರಿ….”

ಕಾನೂನು ಇಲಾಖೆ ಜಿಂದಾಲ್‍ಗೆ ಕೊಡುತ್ತಿರುವ ಭೂಮಿ ಖನಿಜ ಸಂಪತ್ತಿನ ಭೂಮಿ ಎಂದು ಕಾನೂನು ಇಲಾಖೆ ಹೇಳಿದರೆ ವಾಣಿಜ್ಯ ಇಲಾಖೆ, ‘ಇಲ್ಲಿ ಖನಿಜ ಸಂಪತ್ತಿಲ್ಲ, ಸಮಗ್ರ ಉಕ್ಕಿನ ಕಾಖಾನೆಯನ್ನು ಜಿಂದಾಲ್ ಸ್ಥಾಪಿಸಿದೆ’ ಎಂದು ನಿರ್ಲಜತನದಿಂದ ವಾಣಿಜ್ಯ ಇಲಾಖೆ ವಾದಿಸಿದೆ!

ಸ್ಥಳಿಯರ ನೆರವಿನಿಂದ ಒಂದು ದೊಡ್ಡ ಆಂದೋಲನ ರೂಪಿಸಿ ಈ ಭೂಮಿ ಪರಭಾರೆಯನ್ನು ಸರ್ಕಾರ ಹಿಂದಕ್ಕೆ ಪಡೆಯುವಂತೆ ಪ್ರಗತಿಪರರು ಮುಂದೆ ಬರಬೇಕಿದೆ.

ಇದನ್ನು ಓದಿರಿ: ಕಾರ್ಮಿಕ ವಿರೋಧಿ ಜಿಂದಾಲ್ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...