Homeಅಂಕಣಗಳುದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು.

- Advertisement -
- Advertisement -

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ ಏಗಬೇಕಿದೆ. ಒಂದುವೇಳೆ ವಿಚ್ಛೇದನವಾದರೆ, ಅದನ್ನೆ ಕಾಯುತ್ತ ಕುಳಿತ ವೈರಿಪಡೆ, ಬೇಕಾದಷ್ಟು ಧನಕನಕ ವಸ್ತುಗಳನ್ನು ಕೊಟ್ಟು ಹುಡುಗಿ ಹೇಗಾದರೂ ಇರಲಿ ಆರಿಸಿಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಇಂತಹ ಅಪಾಯದ ಸನ್ನಿವೇಶವರಿತ ವಧುವಿನ ತಂದೆಯ ಪಾಡು ಹೇಳತೀರದು. ಇಂತದೊಂದು ಕುಟುಂಬದ ಸ್ಥಿತಿ ಕರ್ನಾಟಕದ ರಾಜಕಾರಣವನ್ನೇ ಹೋಲುತ್ತಿದೆಯಂತಲ್ಲಾ. ಈ ನಡುವೆ ವಧುವಿನ ಕಡೆಯ ಕುರುಬರ ಪೈಕಿಯ ಯಜಮಾನನೊಬ್ಬ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವ ತೀರ್ಮಾನ ಕೇಳಿ ಫೋನ್ ಮಾಡಬೇಕೆನಿಸಿತಲ್ಲಾ. ತಡ ಮಾಡದೆ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: … ನಿನಗ್ಯಾರಿದ್ದರೇನು ಸುಖವಿಲ್ಲಾ ಪ್ರಭುವೆ. ದಾರಿ ಸುಖವಿಲ್ಲ… ಬಾಯಾರಿತು ಎಂದು ದಳದ ಬಾವಿಗೆ ಪೋದೆ.
“ಹಲೋ ಯಾರೂ”
“ನಾನೂ ಸರ್ ಯಾಹೂ”
“ಏನಪ್ಪ ಯಾಹೂ”
“ಚೆನ್ನಾಗಿದ್ದೀರಾ ಸರ್”
“ಏನೋ ಹಿಂಗಿದೀನಿ”
“ದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರಂತಲ್ಲ ಸಾರ್”
“ಜವಾಬ್ದಾರಿ ಸಾಕು ಅನ್ನುಸ್ತು ಕೊಟ್ಟೆ”
“ಜವಾಬ್ದಾರಿ ಏನಿತ್ತು ಸಾರ್ ಅಲ್ಲಿ”
“ಒಂದು ಪಾರ್ಟಿ ಅಧ್ಯಕ್ಷ ಅಂದಮೇಲೆ ಜವಾಬ್ದಾರಿ ಇರಲ್ವೆ”

“ನಾನು ತಿಳಕಂಡಂಗೆ ಸಾರ್, ಜನತಾದಳದ ಜವಾಬ್ದಾರಿ ಅಂದ್ರೆ, ಬೆಳಿಗ್ಗೆ ತಿಂಡಿ ತಿನ್ನುವಾಗ ದೇವೇಗೌಡ್ರು ಕುಮಾರಣ್ಣ ರೇವಣ್ಣ ಆಡಿದ ಮಾತುಗಳು ನಿಮಗೆ ತಲುಪ್ತವೆ, ಅವನ್ನ ಕೇಳಿಸಿಗಂಡು ಸುಮ್ಮನಾಗದು ಅಲವೆ ಸಾರ್”
“ಅದು ನಿಮ್ಮ ಊಹೆ”

“ಆಮೇಲೆ ಅಡುಗೆ ಮನೆಯಿಂದ ಚೆನ್ನಮ್ಮ ಅದೇನೇನೊ ಹೇಳ್ತಾರೆ. ಮತ್ತೆ ಭವಾನಿ ಹೇಳಿದ್ದ ರೇವಣ್ಣ ತಂದಿರತನೆ. ಈ ತರ ಮಾತು ಕತೆ ಪಾರ್ಟಿ ಅಧ್ಯಕ್ಷನಿಗೆ ತಲುಪಬಹುದು ಅಥವಾ ತಲುಪದೆಯೂ ಇರಬಹುದು. ಇಂತಹ ಪಾರ್ಟಿಯ ಅಧ್ಯಕ್ಷನಾದವನು ಅಸಾಮಾನ್ಯ ತಾಳ್ಮೆ, ಮುಜುಗರ ಸಹಿಸಿಕೊಳೊ ಶಕ್ತಿ ಪಡೆದಿರಬೇಕು ಅಲ್ವ ಸಾರ್”
“ನೀವು ಹೇಳ್ತಕಂತ ಯಾವುದೇ ಸನ್ನಿವೇಶನ ನಾನು ಎದುರಿಸಿಲ್ಲ”

“ಪಂಚಾಯ್ತಿ ಚುನಾವಣೇಲಿ ಸ್ವಜಾತಿಗೊಂದು ಟಿಕೆಟ್ ಕೊಡಲಿಕ್ಕಾಗದ ಪಾರ್ಟಿ ಅಧ್ಯಕ್ಷಗಿರಿ ಇನ್ನೆಂತದಿರಬೇಕು ಸಾರ್”
“ನನ್ನ ರಾಜೀನಾಮೆ ಅವನ್ನೆಲ್ಲಾ ಒಳಗೊಂಡಿದೆ”

“ಒಳ್ಳೆ ಕೆಲಸ ಮಾಡಿದ್ರಿ. ಸಾಮಾನ್ಯವಾಗಿ ದೇವೇಗೌಡ್ರು ಪಾರ್ಟಿ ಅಧ್ಯಕ್ಷನ್ನ ಅವನ ಅನುಪಸ್ಥಿತೀಲಿ ಬದ್ಲಾಯಿಸ್ತಾರೆ. ಆದ್ರೆ ನೀವೇ ರಾಜೀನಾಮೆ ಕೊಟ್ಟಿದ್ದು ಒಳ್ಳೆದು. ಸಾರ್”
“ನೋಡಿ ಯಾಹೂ, ಕಾಲಕ್ಕೆ ನಾವು ಅಂಟಿಕೊಂಡು ಕೂತ್ಗಬಾರ್ದು. ಕಾಲ ಬದಲಾವಣೆ ಬಯಸಿದಾಗ ನಾವು ಬದಲಾಗಬೇಕು”

“ನಿಜ ಸಾರ್, ಆ ಸಿದ್ದರಾಮಯ್ಯನ್ನ ಹಿಡಕಂಡೋಗಿ ಕಾಂಗೈ ಸೇರಿಸಿದ್ರಿ. ನೀವು ಬಂದು ದಳದ ಅಧ್ಯಕ್ಷರಾದ್ರಿ. ಏನಾಶ್ಚರ್ಯ ಅಲವಾ”
‘‘ಅದಕ್ಕೆ ರಾಜಕಾರಣ ಅನ್ನದು”

“ಅಂದ್ರೆ ರಾಜಕಾರಣದಲ್ಲಿ ಏನಾದ್ರು ಆಗಬವುದ?”
“ನೀವೇ ನೋಡಿದ್ರಲ್ಲ, ನಿಮ್ಮಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಬೆಳಿಗ್ಗೆ ಕುಮಾರಸ್ವಾಮಿಗೆ ಹೇಳಿದ ಸಿದ್ದರಾಮಯ್ಯ, ಮಧ್ಯಾಹ್ನ ಒಂದು ಗಂಟೆಗೆ ಬಂದು ನಿಮ್ಮಪ್ಪನಾಣೆ ನೀನೆ ಮುಖ್ಯಮಂತ್ರಿ ಆಗು ಬಾ ಅಂದಿರೋದು. ಇಂತದ್ದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿರಲಿಲ್ಲ”

“ಇದನ್ನ ಅವಮಾನಕರ ನಡವಳಿಕೆ ಅಂತೀರಾ”
“ಇಲ್ಲ ಹಾಗನ್ನಲ್ಲ. ಮತೀಯ ಶಕ್ತಿಗೆ ಅವಕಾಶ ಕೊಡಬಾರ್ದು ಅನ್ನೊ ತೀರ್ಮಾನಕ್ಕೆ ತಲೆಬಾಗಿದ್ದು ಅಂತ ಭಾವುಸ್ತೀನಿ. ಆದ್ರೆ ಅಹಂಕಾರದ ಮಾತು ಯಾರಿಗೂ ಒಳ್ಳೆದಲ್ಲ”

“ಸಿದ್ದರಾಮಯ್ಯನಿಗೆ ಅಹಂಕಾರ ಇದೆ ಅಂತೀರಾ?”
“ಅಹಂಕಾರದ ಮೂರ್ತಿರೂಪ ಆತ”

“ಅದು ಅಹಂಕಾರದ ತರದ ವ್ಯಕ್ತಿರೂಪವಂತಲ್ಲಾ”
“ಹಾಗೇನೂ ಇಲ್ಲ. ಉಪಕಾರ ಸ್ಮರಣೆ ಇಲ್ಲದ ಧಿಮಾಕಿನ ಮನ್ಸ ಆತ. ಮನುಷ್ಯನಿಗೆ ತಪ್ಪು ತಿದ್ದಿಕಳೊ ಒಳನೋಟ, ಅಹಂಕಾರಕ್ಕೆ ಅವಕಾಶ ಕೊಡದ ವ್ಯಕ್ತಿತ್ವ ಇರಬೇಕು”

“ನೀವು ಒಂದು ಕಾಲದ ಸಿದ್ದು ಅಭಿಮಾನಿ. ಅವರಿಗಾದ ಅವಮಾನಾನ ನೀವು ಸಹಿಸುತಿರಲಿಲ್ಲ. ಸಿದ್ದುನ ಯಾರಾದ್ರು ಟೀಕೆ ಮಾಡಿದ್ರೆ ನೀವು ಪ್ರತಿಕ್ರಿಯಿಸ್ತಿದ್ರಿ. ಇದು ನಿಮ್ಮ ತಪ್ಪೊ ಸಿದ್ದರಾಮಯ್ಯರ್ ತಪ್ಪೊ ಹೇಳಿ”
“ನನ್ನದೇ ತಪ್ಪು”

“ಈ ತಪ್ಪಿನಲ್ಲಿ ಮತೀಯ ಅಂಶ ಇದೆ ಅಲ್ವ”
“ಇರಬವುದು”

“ಇರಬವುದೇನು, ಇದೆ ಸಾರ್. ನಮ್ಮ ಜನಾಂಗದ ಲೀಡ್ರು, ಅವನನ್ನ ಯಾರೂ ಟೀಕೆ ಮಾಡಬಾರ್ದು ಬೈಯ್ಯಬಾರ್ದು ಅಂತ ಭಾವಿಸಿದ್ದ ಮನಸ್ಸಿನ ಕಣ್ಣು ತೆರಿಸಿದಾನಲ್ಲ ಸಿದ್ದರಾಮಯ್ಯ”
“ಇರಬವುದು”

“ಅವುರಂಗೆ ಮಾಡಿದ್ರಿಂದ ನೀವು ದಳಕ್ಕೆ ಬಂದು ಲೀಡರಾದ್ರಿ, ಶಾಸಕರಾದ್ರಿ, ಅಧ್ಯಕ್ಷರಾದ್ರಿ”
“ನಿಜ ನನ್ನ ರಾಜಕೀಯದ ಅಂತ್ಯ, ನಿರಾಶೆಗೊಳ್ಳೊತರ ಇಲ್ಲ. ಮಾಜೀ ಪ್ರಧಾನಿಯ ಪಾರ್ಟಿಗೆ ಅಧ್ಯಕ್ಷನಾದದ್ದು ಸಾಮಾನ್ಯ ಸಂಗತಿಯಲ್ಲ”

“ಈಗಲಾದ್ರು ದೇವೇಗೌಡ್ರಿಗೆ ಕುರುಬರನ್ನ ಕಂಡ್ರೆ ಅವ್ಯಕ್ತ ಅಕ್ಕರೆ ಇದೆ ಅನ್ನದನ್ನ ಒಪ್ಪಿಗತಿರಾ”
“ನೋಡಿ ಯಾಹು, ದೇವೇಗೌಡ್ರಿಗೆ ಯಾವ ಜನಾಂಗ ಕಂಡ್ರೂ ದ್ವೇಷ ಇಲ್ಲ. ರಾಜಕಾರಣದ ಕಾರಣಕ್ಕೆ ಅಂತ ಆಪಾದನೆಗಳಿಗೆ ಗುರಿಯಾಗ್ತಾರೆ”

“ಹೌದ ಸಾರ್”
“ನೋಡಿ, ಅವುರು ಬ್ರಾಹ್ಮಣ ವಿರೋಧಿ ಅಂತಾರೆ, ಅದೂ ಕೂಡ ಸುಳ್ಳು. ಲಿಂಗಾಯತರ ಬೊಮ್ಮಾಯಿ ಅಂದ್ರೆ ಅವರಿಗೆ ಪಂಚಪ್ರಾಣ. ದಲಿತರ ಡಾ.ತಿಪ್ಪೇಸ್ವಾಮಿನ ಪಾರ್ಟಿ ಪ್ರೆಸಿಡೆಂಟ್ ಮಾಡಿದ್ರು. ಲಿಂಗಾಯಿತರ ತಿಪ್ಪಣ್ಣನ್ನ ಅಧ್ಯಕ್ಷನ್ನ ಮಾಡಿದ್ರು. ಆ ನಂತರ ಕುರುಬರ ಸಿದ್ದರಾಮಯ್ಯನ್ನ ಅಧ್ಯಕ್ಷನನ್ನಾಗಿ ಮಾಡಿ ಫೈನಾನ್ಸ್ ಮಿನಿಷ್ಟ್ರು ಮಾಡಿದ್ರು. ಈಗ ನನ್ನ ಮಾಡಿದಾರೆ”

“ಅದೇ ಸಾರ್ ನಾನೇಳಿದ್ದೂ, ಕುರುಬರನ್ನ ಮುಂದೆ ತಂದಂಗೆ ಒಕ್ಕಲಿಗರನ್ನ ತರಲಿಲ್ಲ. ಒಕ್ಕಲಿಗರನ್ನೆಲ್ಲಾ ಮುಗಿಸಿ ಅಲ್ಲಿಗೆ ತಮ್ಮ ಕುಟುಂಬವನ್ನ ನಾಟಿ ಮಾಡ್ತಾ ಬಂದ್ರು. ಇದನ್ನ ಒಪ್ಪಿಗಳ್ತಿರಾ”
“ಒಕ್ಕಲಿಗ ನಾಯಕರನ್ನ ತುಳುದ್ರು ಪರ್ಯಾಯವಾಗಿ ಒಕ್ಕಲಿಗ ಲೀಡರನ್ನ ಬೆಳಸಿದಾರೆ”

“ಅದೆಲ್ಲಾ ಅಂಗಿರ್ಲಿ. ಲೋಕಸಭಾ ಚುನಾವಣೇಲಿ ಜನ ಸಮ್ಮಿಶ್ರ ಸರ್ಕಾರದ ವಿರುದ್ಧ ಓಟು ಕೊಟ್ಟಿರೋದನ್ನ ಒಪ್ಪಿಗಳ್ತೀರಾ”

“ಮೋದಿ ಅಲೆ”
“ಮೋದಿದೂ ಇಲ್ಲ ಯಂತದೂ ಇಲ್ಲ. ಒಂದೊರ್ಸದಿಂದ ದಳದೋರು ಕಾಂಗ್ರೆಸ್‍ನೋರು ಆಡ್ತಾಯಿರೊ ಜಗಳ ನಿಲ್ಸಕ್ಕೆ ಸೋಲ್ಸಿದ್ರು”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...