Homeಸಾಮಾಜಿಕಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

ಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

- Advertisement -
- Advertisement -

ನಕಲಿ ಜೋಯಿಸರ ಬುರುಡೆ ಶಾಸ್ತ್ರಗಳು ಹೇಗೆ, ಜನ್ಮದಿಂದ ಸುತ್ತಿಕೊಂಡು, ಹೆಸರಿನಿಂದ ಗಟ್ಟಿಗೊಂಡು, ಪಂಚಾಂಗಗಳೆಂಬ ಬಾಹುಗಳಿಂದ ಕಟ್ಟಿಹಾಕುತ್ತವೆಂಬುದನ್ನು ನೋಡಿದೆವು. ಕಳೆದ ಬಾರಿ ವಿವರಿಸಿದ ಹಲ್ಲಿ ಶಕುನ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಸೂಚಿಸಲು ಓದುಗರಾದ ಪುಷ್ಪಾ ಸುರೇಂದ್ರ ಅವರು ಕಾಂಚಿಪುರಂ ದೇವಾಲಯದ ಉದಾಹರಣೆ ಕೊಟ್ಟಿದ್ದಾರೆ. ಅಲ್ಲೊಂದು ಕಲ್ಲಿನ ಹಲ್ಲಿಯಿದೆಯಂತೆ. ಈ ಹಲ್ಲಿಪತನ ಫಲದಿಂದ ಭಯಗೊಂಡವರು ಬೇರೆಬೇರೆ ರಾಜ್ಯಗಳಿಂದ ಪರಿಹಾರಾರ್ಥ ಇಲ್ಲಿ ಬಂದು ಅದರ ಮೇಲೆ ಎಣ್ಣೆ ಸುರಿಯುತ್ತಾರಂತೆ! ಅಂದರೆ ಈ ಹಲ್ಲಿಯನ್ನೇ ಜನರ ಮೇಲೆಸೆದು ಬೆದರಿಸಿ ದೋಚುವ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿದ್ದೆ ಎಂದಾಯಿತು! ಅದಿರಲಿ, ನಾವೀಗ ಹುಟ್ಟಿನಿಂದ ನೇರವಾಗಿ ಸಾವಿಗೆ ಹೋಗಿ ಅಲ್ಲಾಗಿರುವ ಮಹಾನ್ ಆವಿಷ್ಕಾರಗಳನ್ನು ನೋಡೋಣ. ನಂತರ ವಿಸ್ತಾರವಾದ ಜೀವನಕ್ಕೆ ಬರೋಣ.
ಕೆಲ ವರ್ಷಗಳ ಹಿಂದೆ ನನ್ನ ದೊಡ್ಡಪ್ಪ ಮುಂಬಯಿಯಲ್ಲಿ ತೀರಿಕೊಂಡಾಗ ಅವರ ಮತ್ತು ಅದಕ್ಕೆ ಕೇವಲ ಒಂದು ವಾರ ಮೊದಲು ತೀರಿಕೊಂಡಿದ್ದ ಅವರ ಪತ್ನಿ- ದೊಡ್ಡಮ್ಮನ ಶವಸಂಸ್ಕಾರವನ್ನು ಅವರ ಗೆಳೆಯರು ವಿದ್ಯುತ್ ಚಿತೆಯಲ್ಲಿ ಯಾವುದೇ ಧಾರ್ಮಿಕ ಕ್ರಿಯಾಕರ್ಮ ಇಲ್ಲದೇ ಮಾಡಿದ್ದರು. ಅವರಿಗೆ ಮಕ್ಕಳಿರಲಿಲ್ಲ.
ನಾಸ್ತಿಕರಾಗಿದ್ದ ಅವರ ಪಿಂಡ ಪ್ರಧಾನವನ್ನೂ ಯಾರೂ ಮಾಡಿಲ್ಲ ಎಂದು ಬಹುವಾಗಿ ನೊಂದ ಮುಂಬಯಿಯಲ್ಲೇ ಇದ್ದ ಅವರ ತಂಗಿ, ಅಂದರೆ ನನ್ನ ಅತ್ತೆ ಪಿಂಡ ಬಿಡಲು ನನ್ನನ್ನು ಕರೆಸಿದರು. ಹಿಂದೂ ಆಚರಣೆಗಳ ಬಗ್ಗೆ ಅತೀವ ಶ್ರದ್ಧೆ ಇದ್ದ ಅತ್ತೆ ಮದುವೆಯಾದದ್ದು ಕ್ರೈಸ್ತರನ್ನು ಎಂದರೆ ನಿಮಗೆ ಆಶ್ಚರ್ಯ ಆಗಬಹುದು!
ದೊಡ್ಡಪ್ಪನ ಶಿಷ್ಯನೂ, ದೇವ-ಧರ್ಮ ನಿರ್ಲಿಪ್ತನೂ ಅದ ನಾನು, ಅವರ ಮನ ನೋಯಿಸಲು ಇಚ್ಛಿಸದೇ ಒಪ್ಪಿಕೊಂಡಿದ್ದೆ. ಮುಂಬಯಿಯಲ್ಲೇ ಕೆಲ ವರ್ಷ ಇದ್ದ ನನಗೆ ಜನ ನಿಭಿಡ ಮೆರೀನ್ ಲೈನ್ಸ್ನಲ್ಲಿ ಎತ್ತರವಾದ ಗೋಡೆಗಳ ಹಿಂದೆ ಅಷ್ಟೊಂದು ದೊಡ್ಡ ಸ್ಮಶಾನವಿದೆ ಎಂದು ಗೊತ್ತೇ ಇರಲಿಲ್ಲ. ಅದೊಂದು ಹಳ್ಳಿಯೇ ಅಗಿದ್ದು, ಬೇರೆ ಬೇರೆ ಜಾತಿಗಳವರು ನೂರಾರು ವರ್ಷಗಳ ಹಿಂದೆಯೇ ಕ್ರಿಯಾಕರ್ಮಗಳಿಗೆಂದು ಕಟ್ಟಿಸಿದ್ದ ದೊಡ್ಡ ದೊಡ್ಡ ಪುರಾತನ ಮನೆಗಳಿದ್ದವು. ಅಲ್ಲಿ ಅದಕ್ಕಾಗಿಯೇ ಹಲವಾರು ಅರ್ಚಕ ಕುಟುಂಬಗಳೂ ವಾಸಿಸುತ್ತಿದ್ದವು! ಅದೊಂದು ಬ್ರಾಹ್ಮಣ ಗ್ರಾಮವಾಗಿದ್ದು, ಇವೆಲ್ಲಾ ಬೇಕಾಬಿಟ್ಟಿ ಹಣ ಮಾಡುವ ಅಧಿಕೃತ ಏಜೆನ್ಸಿಗಳು!
ನನ್ನ ಸಂಬಂಧಿಯೊಬ್ಬರು ಕ್ರಿಯೆಗೆ ಕೂತುದರಿಂದ ನನಗೆ ಸಂಕಷ್ಟ ತಪ್ಪಿತು. ನಮಗೆ ಸಿಕ್ಕಿದ ಭಟ್ರು ಮಂತ್ರದ ಅರ್ಥ ಮಾತ್ರವಲ್ಲದೆ, ಆ ಪದ್ಧತಿ ಬಂದುದರ ಹಿನ್ನೆಲೆ, ಆಚರಣೆಯ ವೈದಿಕ ಅರ್ಥ, ಕಾಲಾನುಕ್ರಮದಲ್ಲಿ ಆದ ಬದಲಾವಣೆಗಳು ಎಲ್ಲವನ್ನೂ ವಿವರಿಸಿ ಹೇಳುತ್ತಿದ್ದರು. “ನಿಮಗೆ ಅರ್ಧವಾಗದೆ ನೀವಿದನ್ನು ಮಾಡಿ ಏನು ಪ್ರಯೋಜನ?” ಎಂಬ ಅವರ ಮಾತನ್ನು ಈಗಿನ ಸುಲಿಗೆಕೋರರಿಗೂ, ಅವರ ಬಕ್ರಾಗಳಿಗೂ ಕೇಳಬೇಕು!
ಹಿಂದೂ ಧರ್ಮ ಪ್ರಕಾರ ನನ್ನ ದಿವಂಗತ ದೊಡ್ಡಪ್ಪ ಮತ್ತು ದೊಡ್ಡಮ್ಮನಿಗೆ ಸ್ಥಾನಮಾನ ಬೇರೆ ಬೇರೆಯಾಗಿದ್ದುದರಿಂದ ಪಿತೃ ಪ್ರಧಾನ ಸಂಸ್ಕೃತಿಯಂತೆ ಗಂಡು-ಹೆಣ್ಣು ತಾರತಮ್ಯದ ಕ್ರಿಯೆಗಳು ನಡೆದವು. ಅದು ಯಾಕೆ ಇತ್ಯಾದಿಗಳನ್ನೂ ಅವರು ‘ವೇದಾಧಾರದಲ್ಲಿ’ ವಿವರಿಸಿದರು.
ಇದನ್ನು ಯಾಕೆ ಹೇಳಿದೆನೆಂದರೆ ಈಗ ನಿಮ್ಮನ್ನು ಹುಸಿಮಂತ್ರಗಳ ಭಯದ ಕತ್ತಲಲ್ಲಿಟ್ಟು ನೀವು ಬೆರಳು ತೋರಿಸದೆಯೇ ಹಸ್ತ ಮಾತ್ರವಲ್ಲ, ಇಡೀ ದೇಹವನ್ನೇ ನುಂಗುವ ಜೋಯಿಸರುಗಳು ಟಿವಿಗಳಲ್ಲೇ ವಕ್ಕರಿಸುತ್ತಿರುವಾಗ ಇಂತವರು ‘ನವಗ್ರಹ’ ಯೋಗದಂತೆ ತಾತಾ ಅಪರೂಪ!
ವಿಶೇಷವೆಂದರೆ ಸರಳವಾಗಿದ್ದ ಈ ವ್ಯಕ್ತಿ ‘ಶಾಸ್ತ್ರ’ದಲ್ಲಿ ಎಷ್ಟು ಹೇಳಿದೆಯೋ ಅಷ್ಟೇ- ಅಂದರೆ, ಪೈಸೆ, ಅಣೆ ಲೆಕ್ಕದಲ್ಲಿ ಚಿಲ್ಲರೆ ಹಣ ಮಾತ್ರ ಪಡೆಯುತ್ತಿದ್ದರು!
“ನಿಮ್ಮಲ್ಲಿ ಚಿಲ್ಲರೆ ಇರಲಿಕ್ಕಿಲ್ಲವಾದುದರಿಂದ ಅದನ್ನೂ ನಾನೇ ತಂದಿದ್ದೇನೆ” ಎಂದು ಜೋಳಿಗೆಯಿಂದ ಹಳೆಯ ನಾಣ್ಯಗಳನ್ನು ತೆಗೆದರು. “ನಿಮಗೆ ನಾನು ಸಾಲ ಕೊಡುತ್ತೇನೆ. ಅದನ್ನು ನೀವು ಶಾಸ್ತ್ರದಂತೆ ನನಗೆ ದಾನ ಮಾಡಬೇಕು. ನಂತರ ನನ್ನ ಸಾಲವನ್ನು ಒಟ್ಟಿಗೆ ತೀರಿಸಿ. ಶಾಸ್ತ್ರದ ಪ್ರಕಾರ ನೀವು ನನಗೆ ಗೋದಾನ ಮಾಡಬೇಕು. ಈಗ ಈ ನಗರದಲ್ಲಿ ಗೋವನ್ನು ಎಲ್ಲಿಂದ ತರುತ್ತೀರಿ? ನಾನೆಲ್ಲಿ ಸಾಕಲಿ? ಗೋವು ಇಲ್ಲದಿದ್ದಲ್ಲಿ ಶಾಸ್ತ್ರದಲ್ಲಿ ಚಿನ್ನದ ಪ್ರತಿಮೆ ದಾನ ಮಾಡಬಹುದೆಂದಿದೆ. ನಾನು ಅದನ್ನೂ ತಂದಿದ್ದೇನೆ” ಎಂದು ಜೋಳಿಗೆಯಿಂದ ಚಿನ್ನದ ಚಿಕ್ಕ ದನದ ಪ್ರತಿಮೆ ತೆಗೆದರು.
“ನಾನು ನಿಮಗೆ ಹಣ ಸಾಲಕೊಟ್ಟು ಇದನ್ನು ಮಾರುತ್ತೇನೆ. ಆ ಕಾಲದ ರೇಟು ಒಂದೂ ಕಾಲು ರೂಪಾಯಿ. ಹಣ ನಂತರ ಕೊಡಿ” ಎಂದು ಚಿನ್ನದ ದನವನ್ನು ಅತ್ತೆಗೆ ಮಾರಿದರು. ನಂತರ ಅದನ್ನೇ ದಾನವಾಗಿ ಪಡೆದರು ಎನ್ನಿ! ಮಾರಿದ ಹಣ ಬೇರೆ, ದಾನ ಲಾಭ ಪ್ರತ್ಯೇಕ! ಅದರೂ ಅವರು ದನದ ಪ್ರಸ್ತುತ ರೇಟು ಪಡೆಯಲಿಲ್ಲ! ಅದೇ ರೀತಿ ಜೋಳಿಗೆಯಿಂದ ಮಣ್ಣನ್ನು ತೆಗೆದು ತಾವೇ ಮಾರಿ, ಭೂದಾನವನ್ನೂ ಪಡೆದರು. ಎಲ್ಲವನ್ನೂ ಅಣೆ ಪೈ ಲೆಕ್ಕದಲ್ಲಿ ದಕ್ಷಿಣೆ ಪಡೆದರು. ನಾನು ಈ ವರ್ಚುವಲ್ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ ನೋಡಿ ಅಚ್ಚರಿಪಟ್ಟೆ.
ನನ್ನ ಅತ್ತೆಯವರಿಗಂತೂ ಖುಷಿಯಾಗಿ ಕೊನೆಗೆ ಉದಾರ ದಕ್ಷಿಣೆ ಕೊಟ್ಟ ರೂ, ಅವರು ಅದರಲ್ಲಿ ಈಗಿನ ಲೆಕ್ಕಾಚಾರ ಹಾಕಿ ಸ್ವಲ್ಪವನ್ನೇ ತೆಗೆದುಕೊಂಡರು! “ನಿಮಗಿದು ಈಗ ಕಡಿಮೆ ಕಾಣಬಹುದು. ಹಿಂದಿನ ಕಾಲದಲ್ಲಿ ಇದು ಭಾರೀ ದೊಡ್ಡ ಹಣ!” ಎಂದು ನೆನಪಿಸಿದರು ಬೇರೆ!!
ಇವೆಲ್ಲಾ ನಮಗೆ ಜೀವನದ ಅರ್ಥ ಮಾಡಿಸುವ ಸಾಂಕೇತಿಕ ಕ್ರಿಯೆಗಳು ಮಾತ್ರ ಅವುಗಳಿಗೆ ಪ್ರಸ್ತುತತೆ ಅರ್ಥ ಇಲ್ಲ. ಹಿಂದಿನವರ ಜೀವನಕ್ರಮ, ಅವರು ಕಂಡುಕೊಂಡ ಅರ್ಥವನ್ನು ನೆನಪಿಸುವುದು ಇವುಗಳ ಉದ್ದೇಶ ಎಂದೂ ವಿವರಿಸಿದರು.
ನಾನು ಒಂದು ಕಡೆ ಬೆರಗಾಗುತ್ತಾ, ಇನ್ನೊಂದು ಕಡೆ ಮನಸ್ಸಿನಲ್ಲೇ ನಗುತ್ತಾ ಇದ್ದೆ! ಯಾಕೆಂದರೆ, ಕ್ರಿಯೆ ನಡೆಯುತ್ತಿದ್ದಾಗ ನಾನು ಈ ರೀತಿಯ ಪಿಂಡ ಪ್ರಧಾನ ನಡೆಯುವ ಕೆಲವು ಕಡೆಗೆಲ್ಲ ಹೋಗಿ ಇಣುಕ್ಕಿದ್ದೆ! ಕಾಟಾಚಾರಕ್ಕೆ ಕ್ರಿಯೆಗಳು ಅವಸರವಸರದಲ್ಲಿ ನಡೆದು, ಕಂತೆ ಕಂತೆ ನೋಟುಗಳು ಕೈಬದಲಿಸುತ್ತಿದ್ದವು! ದಂಧೆ ಜೋರಾಗಿ ನಡೆಯುತ್ತಿತ್ತು.
ನಮಗೆ ಸಿಕ್ಕಂತಹ ಪ್ರಾಮಾಣಿಕ ಅರ್ಚಕನನ್ನು ನಾನು ಜನ್ಮದಲ್ಲಿ ನೋಡಿಲ್ಲ. ಸುಲಿಯುವವರೇ ಹೆಚ್ಚು!
ನನಗೆ ಸಂಸ್ಕೃತ ಅರೆಬರೆ ಅರ್ಥ ಅಗುವುದರಿಂದ ತಪ್ಪು ಮಂತ್ರ ಹೇಳಿದ್ದಕ್ಕೆ ಹಿಂದೆ ನಾನು ಒಂದಿಬ್ಬರು ಪರಿಚಯದ ಅರ್ಚಕರನ್ನು ಪ್ರಶ್ನಿಸಿದ್ದೆ! ನನ್ನ ವಿಷಯ ಗೊತ್ತಿದ್ದುದರಿಂದ ‘ನಮ್ಮದು ಬಾಯಿಪಾಠ ಮಾರಾಯ್ರೆ, ಎಲ್ಲರೆದುರು ಮರ್ಯಾದೆ ತೆಗೆಯಬೇಡಿ’ ಅಂದಿದ್ದರು!
ನಂಬಿಕೆ ಸಂಕೀರ್ಣವಾದ ವಿಷಯ. ನುಂಗುವಂತಿಲ್ಲ, ಉಗುಳುವಂತಿಲ್ಲ! ಅದಕ್ಕಾಗಿ ಸುಮ್ಮನಿದ್ದೆ! ಇಂತವರನ್ನು ನಾವು ದೇವರ ಕಮೀಷನ್ ಏಜೆಂಟರಾಗಿ ಒಪ್ಪಿಕೊಂಡು ಬಕ್ರಾಗಳಾಗುತ್ತಿದ್ದೇವೆ.
ಮೇಲೆ ಹೇಳಿದ ಅರ್ಚಕರಿಗೆ ವ್ಯತಿರಿಕ್ತವಾಗಿ ಈಗಿನ ವಂಚಕರು ಗೋದಾನ, ಭೂದಾನ, ಸುವರ್ಣ ದಾನ ಎಂದು ಅವರೇ ಮಾರಿ, ಅವರೇ ಪಡೆದು ಎಂತಹ ದರೋಡೆ ಮಾಡುತ್ತಿದ್ದಾರೆಂಬುದಕ್ಕೆ ಹಿನ್ನೆಲೆಯಾಗಿ ಈ ಘಟನೆಯನ್ನು ವಿವರಿಸಿದೆ. ಇವರಲ್ಲಿ ಕೆಲವರು ‘ಕನ್ಯಾದಾನ’ ಪಡೆಯಲು ಹೋಗಿ ಏಟುತಿಂದ, ಕೇಸು ಸುತ್ತಿಸಿಕೊಂಡ ಮಹಾನುಭಾವರೂ ಇದ್ದಾರೆಂಬುದನ್ನು ನೆನಪಿಸಿಕೊಳ್ಳಿ! ಸಾವಿನಂತಹ ದುಃಖದ ಘಟನೆಯಿಂದಲೂ ಹಿಂಡಲು ಎಂತಹಾ ಮಹಾ ಭಯಂಕರ ಆವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ಮುಂದೆ ನೋಡೋಣ. ಅದಕ್ಕಿದು ಪೀಠಿಕೆ ಅಷ್ಟೇ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...