Homeಸಾಮಾಜಿಕಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

ಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

- Advertisement -
- Advertisement -

ನಕಲಿ ಜೋಯಿಸರ ಬುರುಡೆ ಶಾಸ್ತ್ರಗಳು ಹೇಗೆ, ಜನ್ಮದಿಂದ ಸುತ್ತಿಕೊಂಡು, ಹೆಸರಿನಿಂದ ಗಟ್ಟಿಗೊಂಡು, ಪಂಚಾಂಗಗಳೆಂಬ ಬಾಹುಗಳಿಂದ ಕಟ್ಟಿಹಾಕುತ್ತವೆಂಬುದನ್ನು ನೋಡಿದೆವು. ಕಳೆದ ಬಾರಿ ವಿವರಿಸಿದ ಹಲ್ಲಿ ಶಕುನ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಸೂಚಿಸಲು ಓದುಗರಾದ ಪುಷ್ಪಾ ಸುರೇಂದ್ರ ಅವರು ಕಾಂಚಿಪುರಂ ದೇವಾಲಯದ ಉದಾಹರಣೆ ಕೊಟ್ಟಿದ್ದಾರೆ. ಅಲ್ಲೊಂದು ಕಲ್ಲಿನ ಹಲ್ಲಿಯಿದೆಯಂತೆ. ಈ ಹಲ್ಲಿಪತನ ಫಲದಿಂದ ಭಯಗೊಂಡವರು ಬೇರೆಬೇರೆ ರಾಜ್ಯಗಳಿಂದ ಪರಿಹಾರಾರ್ಥ ಇಲ್ಲಿ ಬಂದು ಅದರ ಮೇಲೆ ಎಣ್ಣೆ ಸುರಿಯುತ್ತಾರಂತೆ! ಅಂದರೆ ಈ ಹಲ್ಲಿಯನ್ನೇ ಜನರ ಮೇಲೆಸೆದು ಬೆದರಿಸಿ ದೋಚುವ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿದ್ದೆ ಎಂದಾಯಿತು! ಅದಿರಲಿ, ನಾವೀಗ ಹುಟ್ಟಿನಿಂದ ನೇರವಾಗಿ ಸಾವಿಗೆ ಹೋಗಿ ಅಲ್ಲಾಗಿರುವ ಮಹಾನ್ ಆವಿಷ್ಕಾರಗಳನ್ನು ನೋಡೋಣ. ನಂತರ ವಿಸ್ತಾರವಾದ ಜೀವನಕ್ಕೆ ಬರೋಣ.
ಕೆಲ ವರ್ಷಗಳ ಹಿಂದೆ ನನ್ನ ದೊಡ್ಡಪ್ಪ ಮುಂಬಯಿಯಲ್ಲಿ ತೀರಿಕೊಂಡಾಗ ಅವರ ಮತ್ತು ಅದಕ್ಕೆ ಕೇವಲ ಒಂದು ವಾರ ಮೊದಲು ತೀರಿಕೊಂಡಿದ್ದ ಅವರ ಪತ್ನಿ- ದೊಡ್ಡಮ್ಮನ ಶವಸಂಸ್ಕಾರವನ್ನು ಅವರ ಗೆಳೆಯರು ವಿದ್ಯುತ್ ಚಿತೆಯಲ್ಲಿ ಯಾವುದೇ ಧಾರ್ಮಿಕ ಕ್ರಿಯಾಕರ್ಮ ಇಲ್ಲದೇ ಮಾಡಿದ್ದರು. ಅವರಿಗೆ ಮಕ್ಕಳಿರಲಿಲ್ಲ.
ನಾಸ್ತಿಕರಾಗಿದ್ದ ಅವರ ಪಿಂಡ ಪ್ರಧಾನವನ್ನೂ ಯಾರೂ ಮಾಡಿಲ್ಲ ಎಂದು ಬಹುವಾಗಿ ನೊಂದ ಮುಂಬಯಿಯಲ್ಲೇ ಇದ್ದ ಅವರ ತಂಗಿ, ಅಂದರೆ ನನ್ನ ಅತ್ತೆ ಪಿಂಡ ಬಿಡಲು ನನ್ನನ್ನು ಕರೆಸಿದರು. ಹಿಂದೂ ಆಚರಣೆಗಳ ಬಗ್ಗೆ ಅತೀವ ಶ್ರದ್ಧೆ ಇದ್ದ ಅತ್ತೆ ಮದುವೆಯಾದದ್ದು ಕ್ರೈಸ್ತರನ್ನು ಎಂದರೆ ನಿಮಗೆ ಆಶ್ಚರ್ಯ ಆಗಬಹುದು!
ದೊಡ್ಡಪ್ಪನ ಶಿಷ್ಯನೂ, ದೇವ-ಧರ್ಮ ನಿರ್ಲಿಪ್ತನೂ ಅದ ನಾನು, ಅವರ ಮನ ನೋಯಿಸಲು ಇಚ್ಛಿಸದೇ ಒಪ್ಪಿಕೊಂಡಿದ್ದೆ. ಮುಂಬಯಿಯಲ್ಲೇ ಕೆಲ ವರ್ಷ ಇದ್ದ ನನಗೆ ಜನ ನಿಭಿಡ ಮೆರೀನ್ ಲೈನ್ಸ್ನಲ್ಲಿ ಎತ್ತರವಾದ ಗೋಡೆಗಳ ಹಿಂದೆ ಅಷ್ಟೊಂದು ದೊಡ್ಡ ಸ್ಮಶಾನವಿದೆ ಎಂದು ಗೊತ್ತೇ ಇರಲಿಲ್ಲ. ಅದೊಂದು ಹಳ್ಳಿಯೇ ಅಗಿದ್ದು, ಬೇರೆ ಬೇರೆ ಜಾತಿಗಳವರು ನೂರಾರು ವರ್ಷಗಳ ಹಿಂದೆಯೇ ಕ್ರಿಯಾಕರ್ಮಗಳಿಗೆಂದು ಕಟ್ಟಿಸಿದ್ದ ದೊಡ್ಡ ದೊಡ್ಡ ಪುರಾತನ ಮನೆಗಳಿದ್ದವು. ಅಲ್ಲಿ ಅದಕ್ಕಾಗಿಯೇ ಹಲವಾರು ಅರ್ಚಕ ಕುಟುಂಬಗಳೂ ವಾಸಿಸುತ್ತಿದ್ದವು! ಅದೊಂದು ಬ್ರಾಹ್ಮಣ ಗ್ರಾಮವಾಗಿದ್ದು, ಇವೆಲ್ಲಾ ಬೇಕಾಬಿಟ್ಟಿ ಹಣ ಮಾಡುವ ಅಧಿಕೃತ ಏಜೆನ್ಸಿಗಳು!
ನನ್ನ ಸಂಬಂಧಿಯೊಬ್ಬರು ಕ್ರಿಯೆಗೆ ಕೂತುದರಿಂದ ನನಗೆ ಸಂಕಷ್ಟ ತಪ್ಪಿತು. ನಮಗೆ ಸಿಕ್ಕಿದ ಭಟ್ರು ಮಂತ್ರದ ಅರ್ಥ ಮಾತ್ರವಲ್ಲದೆ, ಆ ಪದ್ಧತಿ ಬಂದುದರ ಹಿನ್ನೆಲೆ, ಆಚರಣೆಯ ವೈದಿಕ ಅರ್ಥ, ಕಾಲಾನುಕ್ರಮದಲ್ಲಿ ಆದ ಬದಲಾವಣೆಗಳು ಎಲ್ಲವನ್ನೂ ವಿವರಿಸಿ ಹೇಳುತ್ತಿದ್ದರು. “ನಿಮಗೆ ಅರ್ಧವಾಗದೆ ನೀವಿದನ್ನು ಮಾಡಿ ಏನು ಪ್ರಯೋಜನ?” ಎಂಬ ಅವರ ಮಾತನ್ನು ಈಗಿನ ಸುಲಿಗೆಕೋರರಿಗೂ, ಅವರ ಬಕ್ರಾಗಳಿಗೂ ಕೇಳಬೇಕು!
ಹಿಂದೂ ಧರ್ಮ ಪ್ರಕಾರ ನನ್ನ ದಿವಂಗತ ದೊಡ್ಡಪ್ಪ ಮತ್ತು ದೊಡ್ಡಮ್ಮನಿಗೆ ಸ್ಥಾನಮಾನ ಬೇರೆ ಬೇರೆಯಾಗಿದ್ದುದರಿಂದ ಪಿತೃ ಪ್ರಧಾನ ಸಂಸ್ಕೃತಿಯಂತೆ ಗಂಡು-ಹೆಣ್ಣು ತಾರತಮ್ಯದ ಕ್ರಿಯೆಗಳು ನಡೆದವು. ಅದು ಯಾಕೆ ಇತ್ಯಾದಿಗಳನ್ನೂ ಅವರು ‘ವೇದಾಧಾರದಲ್ಲಿ’ ವಿವರಿಸಿದರು.
ಇದನ್ನು ಯಾಕೆ ಹೇಳಿದೆನೆಂದರೆ ಈಗ ನಿಮ್ಮನ್ನು ಹುಸಿಮಂತ್ರಗಳ ಭಯದ ಕತ್ತಲಲ್ಲಿಟ್ಟು ನೀವು ಬೆರಳು ತೋರಿಸದೆಯೇ ಹಸ್ತ ಮಾತ್ರವಲ್ಲ, ಇಡೀ ದೇಹವನ್ನೇ ನುಂಗುವ ಜೋಯಿಸರುಗಳು ಟಿವಿಗಳಲ್ಲೇ ವಕ್ಕರಿಸುತ್ತಿರುವಾಗ ಇಂತವರು ‘ನವಗ್ರಹ’ ಯೋಗದಂತೆ ತಾತಾ ಅಪರೂಪ!
ವಿಶೇಷವೆಂದರೆ ಸರಳವಾಗಿದ್ದ ಈ ವ್ಯಕ್ತಿ ‘ಶಾಸ್ತ್ರ’ದಲ್ಲಿ ಎಷ್ಟು ಹೇಳಿದೆಯೋ ಅಷ್ಟೇ- ಅಂದರೆ, ಪೈಸೆ, ಅಣೆ ಲೆಕ್ಕದಲ್ಲಿ ಚಿಲ್ಲರೆ ಹಣ ಮಾತ್ರ ಪಡೆಯುತ್ತಿದ್ದರು!
“ನಿಮ್ಮಲ್ಲಿ ಚಿಲ್ಲರೆ ಇರಲಿಕ್ಕಿಲ್ಲವಾದುದರಿಂದ ಅದನ್ನೂ ನಾನೇ ತಂದಿದ್ದೇನೆ” ಎಂದು ಜೋಳಿಗೆಯಿಂದ ಹಳೆಯ ನಾಣ್ಯಗಳನ್ನು ತೆಗೆದರು. “ನಿಮಗೆ ನಾನು ಸಾಲ ಕೊಡುತ್ತೇನೆ. ಅದನ್ನು ನೀವು ಶಾಸ್ತ್ರದಂತೆ ನನಗೆ ದಾನ ಮಾಡಬೇಕು. ನಂತರ ನನ್ನ ಸಾಲವನ್ನು ಒಟ್ಟಿಗೆ ತೀರಿಸಿ. ಶಾಸ್ತ್ರದ ಪ್ರಕಾರ ನೀವು ನನಗೆ ಗೋದಾನ ಮಾಡಬೇಕು. ಈಗ ಈ ನಗರದಲ್ಲಿ ಗೋವನ್ನು ಎಲ್ಲಿಂದ ತರುತ್ತೀರಿ? ನಾನೆಲ್ಲಿ ಸಾಕಲಿ? ಗೋವು ಇಲ್ಲದಿದ್ದಲ್ಲಿ ಶಾಸ್ತ್ರದಲ್ಲಿ ಚಿನ್ನದ ಪ್ರತಿಮೆ ದಾನ ಮಾಡಬಹುದೆಂದಿದೆ. ನಾನು ಅದನ್ನೂ ತಂದಿದ್ದೇನೆ” ಎಂದು ಜೋಳಿಗೆಯಿಂದ ಚಿನ್ನದ ಚಿಕ್ಕ ದನದ ಪ್ರತಿಮೆ ತೆಗೆದರು.
“ನಾನು ನಿಮಗೆ ಹಣ ಸಾಲಕೊಟ್ಟು ಇದನ್ನು ಮಾರುತ್ತೇನೆ. ಆ ಕಾಲದ ರೇಟು ಒಂದೂ ಕಾಲು ರೂಪಾಯಿ. ಹಣ ನಂತರ ಕೊಡಿ” ಎಂದು ಚಿನ್ನದ ದನವನ್ನು ಅತ್ತೆಗೆ ಮಾರಿದರು. ನಂತರ ಅದನ್ನೇ ದಾನವಾಗಿ ಪಡೆದರು ಎನ್ನಿ! ಮಾರಿದ ಹಣ ಬೇರೆ, ದಾನ ಲಾಭ ಪ್ರತ್ಯೇಕ! ಅದರೂ ಅವರು ದನದ ಪ್ರಸ್ತುತ ರೇಟು ಪಡೆಯಲಿಲ್ಲ! ಅದೇ ರೀತಿ ಜೋಳಿಗೆಯಿಂದ ಮಣ್ಣನ್ನು ತೆಗೆದು ತಾವೇ ಮಾರಿ, ಭೂದಾನವನ್ನೂ ಪಡೆದರು. ಎಲ್ಲವನ್ನೂ ಅಣೆ ಪೈ ಲೆಕ್ಕದಲ್ಲಿ ದಕ್ಷಿಣೆ ಪಡೆದರು. ನಾನು ಈ ವರ್ಚುವಲ್ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ ನೋಡಿ ಅಚ್ಚರಿಪಟ್ಟೆ.
ನನ್ನ ಅತ್ತೆಯವರಿಗಂತೂ ಖುಷಿಯಾಗಿ ಕೊನೆಗೆ ಉದಾರ ದಕ್ಷಿಣೆ ಕೊಟ್ಟ ರೂ, ಅವರು ಅದರಲ್ಲಿ ಈಗಿನ ಲೆಕ್ಕಾಚಾರ ಹಾಕಿ ಸ್ವಲ್ಪವನ್ನೇ ತೆಗೆದುಕೊಂಡರು! “ನಿಮಗಿದು ಈಗ ಕಡಿಮೆ ಕಾಣಬಹುದು. ಹಿಂದಿನ ಕಾಲದಲ್ಲಿ ಇದು ಭಾರೀ ದೊಡ್ಡ ಹಣ!” ಎಂದು ನೆನಪಿಸಿದರು ಬೇರೆ!!
ಇವೆಲ್ಲಾ ನಮಗೆ ಜೀವನದ ಅರ್ಥ ಮಾಡಿಸುವ ಸಾಂಕೇತಿಕ ಕ್ರಿಯೆಗಳು ಮಾತ್ರ ಅವುಗಳಿಗೆ ಪ್ರಸ್ತುತತೆ ಅರ್ಥ ಇಲ್ಲ. ಹಿಂದಿನವರ ಜೀವನಕ್ರಮ, ಅವರು ಕಂಡುಕೊಂಡ ಅರ್ಥವನ್ನು ನೆನಪಿಸುವುದು ಇವುಗಳ ಉದ್ದೇಶ ಎಂದೂ ವಿವರಿಸಿದರು.
ನಾನು ಒಂದು ಕಡೆ ಬೆರಗಾಗುತ್ತಾ, ಇನ್ನೊಂದು ಕಡೆ ಮನಸ್ಸಿನಲ್ಲೇ ನಗುತ್ತಾ ಇದ್ದೆ! ಯಾಕೆಂದರೆ, ಕ್ರಿಯೆ ನಡೆಯುತ್ತಿದ್ದಾಗ ನಾನು ಈ ರೀತಿಯ ಪಿಂಡ ಪ್ರಧಾನ ನಡೆಯುವ ಕೆಲವು ಕಡೆಗೆಲ್ಲ ಹೋಗಿ ಇಣುಕ್ಕಿದ್ದೆ! ಕಾಟಾಚಾರಕ್ಕೆ ಕ್ರಿಯೆಗಳು ಅವಸರವಸರದಲ್ಲಿ ನಡೆದು, ಕಂತೆ ಕಂತೆ ನೋಟುಗಳು ಕೈಬದಲಿಸುತ್ತಿದ್ದವು! ದಂಧೆ ಜೋರಾಗಿ ನಡೆಯುತ್ತಿತ್ತು.
ನಮಗೆ ಸಿಕ್ಕಂತಹ ಪ್ರಾಮಾಣಿಕ ಅರ್ಚಕನನ್ನು ನಾನು ಜನ್ಮದಲ್ಲಿ ನೋಡಿಲ್ಲ. ಸುಲಿಯುವವರೇ ಹೆಚ್ಚು!
ನನಗೆ ಸಂಸ್ಕೃತ ಅರೆಬರೆ ಅರ್ಥ ಅಗುವುದರಿಂದ ತಪ್ಪು ಮಂತ್ರ ಹೇಳಿದ್ದಕ್ಕೆ ಹಿಂದೆ ನಾನು ಒಂದಿಬ್ಬರು ಪರಿಚಯದ ಅರ್ಚಕರನ್ನು ಪ್ರಶ್ನಿಸಿದ್ದೆ! ನನ್ನ ವಿಷಯ ಗೊತ್ತಿದ್ದುದರಿಂದ ‘ನಮ್ಮದು ಬಾಯಿಪಾಠ ಮಾರಾಯ್ರೆ, ಎಲ್ಲರೆದುರು ಮರ್ಯಾದೆ ತೆಗೆಯಬೇಡಿ’ ಅಂದಿದ್ದರು!
ನಂಬಿಕೆ ಸಂಕೀರ್ಣವಾದ ವಿಷಯ. ನುಂಗುವಂತಿಲ್ಲ, ಉಗುಳುವಂತಿಲ್ಲ! ಅದಕ್ಕಾಗಿ ಸುಮ್ಮನಿದ್ದೆ! ಇಂತವರನ್ನು ನಾವು ದೇವರ ಕಮೀಷನ್ ಏಜೆಂಟರಾಗಿ ಒಪ್ಪಿಕೊಂಡು ಬಕ್ರಾಗಳಾಗುತ್ತಿದ್ದೇವೆ.
ಮೇಲೆ ಹೇಳಿದ ಅರ್ಚಕರಿಗೆ ವ್ಯತಿರಿಕ್ತವಾಗಿ ಈಗಿನ ವಂಚಕರು ಗೋದಾನ, ಭೂದಾನ, ಸುವರ್ಣ ದಾನ ಎಂದು ಅವರೇ ಮಾರಿ, ಅವರೇ ಪಡೆದು ಎಂತಹ ದರೋಡೆ ಮಾಡುತ್ತಿದ್ದಾರೆಂಬುದಕ್ಕೆ ಹಿನ್ನೆಲೆಯಾಗಿ ಈ ಘಟನೆಯನ್ನು ವಿವರಿಸಿದೆ. ಇವರಲ್ಲಿ ಕೆಲವರು ‘ಕನ್ಯಾದಾನ’ ಪಡೆಯಲು ಹೋಗಿ ಏಟುತಿಂದ, ಕೇಸು ಸುತ್ತಿಸಿಕೊಂಡ ಮಹಾನುಭಾವರೂ ಇದ್ದಾರೆಂಬುದನ್ನು ನೆನಪಿಸಿಕೊಳ್ಳಿ! ಸಾವಿನಂತಹ ದುಃಖದ ಘಟನೆಯಿಂದಲೂ ಹಿಂಡಲು ಎಂತಹಾ ಮಹಾ ಭಯಂಕರ ಆವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ಮುಂದೆ ನೋಡೋಣ. ಅದಕ್ಕಿದು ಪೀಠಿಕೆ ಅಷ್ಟೇ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...