Homeಅಂಕಣಗಳುಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ‘ಅಟ್ಯಾಕ್ ಹನ್ಮಂತ’. ಇದೀಗ ದೊಡ್ ಸುದ್ದಿಗಳು.
ಪರದೇಶಿ ದುಡ್ಡಿಗೆ ಆಸೆಪಟ್ಟು ಬ್ಲೂಜೆಪಿ ಮಾಡ್ತು ಎಡವಟ್ಟು: ಕಾನೂನಿಗೆ ತಂದ್ರು ತಿದ್ದುಪಡಿ, ಕೋರ್ಟ್ ಇಡ್ತು ದೊಡ್ಡ ಧಡಿ.
ಪೊಲಿಟಿಕಲ್ ಪಾರ್ಟಿಗಳು ವಿದೇಶದಿಂದ ಯಾವುದೇ ಬಗೆಯ ದೇಣಿಗೆ ಪಡೆಯುವುದು ಅಪರಾಧ ಎಂದಿದ್ದ ಹಿಂದಿನ ಕಾನೂನನ್ನು ಬದಲಾಯಿಸಿ, ದೇಶದೊಳಗಿನ ಪಕ್ಷಗಳು ಯಾವ ದೇಶದ ಶ್ರೀಮಂತರಿಂದ ಬೇಕಾದರೂ ಕೋಟಿಗಟ್ಟಲೆ ತಿರುಪೆ ಎತ್ತಬಹುದು ಎಂದು ತಿದ್ದುಪಡಿ ಮಾಡಿಕೊಂಡಿದ್ದ ಬ್ಲೂಜೆಪಿ ಪಕ್ಷದ ಮುಖಕ್ಕೆ ಖಡಕ್ ನೊಟೀಸ್ ಕಳಿಸಿರುವ ದೆಹಲಿ ಹೈಕೋರ್ಟ್, ಇಷ್ಟ ಬಂದಂತೆ ಕಾನೂನನ್ನು ಬದಲಿಸಲು, ಕೋರ್ಟ್‍ನ ತೀರ್ಪುಗಳನ್ನು ತಿರುಚಲು ಕಾನೂನು ನಿಮ್ಮಪ್ಪನ ಮನೆಯ ಆಸ್ತಿಯಲ್ಲ ಎಂದು ಕ್ಯಾಕರಿಸಿ ಉಗಿದಿದೆ. ಅಕ್ರಮವಾಗಿ ಅಘೋಷಿತ ಮೂಲಗಳಿಂದ ಪಕ್ಷಕ್ಕೆ ದೇಣಿಗೆ ಪಡೆದು ಜೇಬು ತುಂಬಿಸಿಕೊಂಡಿದ್ದ ಕಮಲ ಪಕ್ಷ ಕಾನೂನಿನ ಕುಣಿಕೆಗೆ ಸಿಲುಕಿ ಮುಖ ಕೆತ್ತಿಸಿಕೊಳ್ಳುವ ಸಂದರ್ಭ ಎದುರಾಗಿದೆ. ಕೈ ಪಕ್ಷ ಕೂಡ ಈ ದಂಧೆಯಲ್ಲಿ ಕಮಲ ಪಕ್ಷಕ್ಕೆ ಸಾಥ್ ಕೊಟ್ಟಿರುವುದೂ ಕೂಡ ಜಗಜ್ಜಾಹೀರಾಗಿದೆ. ಕಾನೂನು ಕುಣಿಕೆಯಿಂದ ಬಚಾವಾಗಲು ಎಫ್.ಸಿ.ಆರ್.ಎ ಕಾಯ್ದೆಗೇ ತಿದ್ದುಪಡಿ ತಂದು ಎಸ್ಕೇಪ್ ರೂಟ್ ಹುಡುಕಿದ್ದ ಊಸರವಳ್ಳಿ ಪಕ್ಷ ಈಗ ಹೆಗ್ಗಣ ಹಿಡಿಯಲು ಇಟ್ಟಿದ್ದ ಇಕ್ಕಳದೊಳಗೆ ಮುಖ ಸಿಗಿಸಿಕೊಂಡು ತಪ್ಪಿಸಿಕೊಳ್ಳಲಾರದೆ ಕುಯ್ಯೋ ಮರ್ರೋ ಎಂದು ನರಳಾಡುತ್ತಿರುವುದು ದೇಶದ ಜನತೆಗೆ ಸಂತಸವುಂಟು ಮಾಡಿದೆ.

*****

ಲಾಚಾರ್ ಸಾಹಿತಿ ‘ಬೊಯ್ರಪ್ಪ’ನ ‘ಮಕ್ಕನ್ ಮಾರ್’ ಅವಾಂತರ: ಈ ಸಲ ಗ್ಯಾರಂಟಿ ವಕ್ಕರಿಸುತ್ತಂತೆ ಜ್ಞಾನಪೀಠಕ್ಕೇ ಗಂಡಾಂತರ
ದೇಶದ ಅತ್ಯುನ್ನತ ಪ್ರಶಸ್ತಿಗಳು ಘೋಷಣೆಯಾಗಲು ಒಂದೆರಡು ತಿಂಗಳು ಇರುವಂತೆಯೇ ಗರ್ಭಧರಿಸಿದ ಬೆಕ್ಕಿನಂತೆ ಕಯೋವ್, ಮಿಯೋವ್ ಎಂದು ಎದ್ದು ಕೂರುವ ಕುಖ್ಯಾತ ಸಾಹಿತಿ ‘ಬೊಯ್ರಪ್ಪ’ನವರು ಪ್ರತೀವರ್ಷದಂತೆ ಈ ವರ್ಷವೂ ತಮ್ಮ ಮನೆಯಿಂದ ಹೊರಗೆ ಬಂದು ನರಳಾಡಲು ಶುರು ಮಾಡಿದ್ದಾರೆ. ದೇಶವನ್ನು ಅಭಿವೃದ್ಧಿಪಡಿಸಲು ಪಕೋಡೇಂದ್ರ ಫಕೀರಪ್ಪನಿಗೆ 5 ವರ್ಷಗಳು ಜುಜುಬಿ, ಕನಿಷ್ಟಪಕ್ಷ ಎರಡು ಶತಮಾನವಾದರೂ ಪಕೋಡಯ್ಯನು ದೇಶದ ಪ್ರಧಾನಿಯಾದರೆ ದೇಶ ಉದ್ದಾರವಾಗುತ್ತದೆ ಎಂಬ ಸುಸ್ಸು ಸ್ಟೇಟ್‍ಮೆಂಟನ್ನು ಮನೆಯೆದುರಿನ ಲೈಟುಕಂಬಕ್ಕೆ ಕಾಲೆತ್ತಿ ಹುಯ್ದು ವಾಪಸ್ ಮನೆಯೊಳಗೆ ಬುಡುಬುಡನೆ ಓಡಿಹೋಗಿ ಹೊಟ್ಟೆ ಮಕಾಡೆ ಮಲಗಿಬಿಟ್ಟರೆಂದು ನಂಬಲರ್ಹ ಗಾಳಿಸುದ್ದಿಗಳು ತಿಳಿಸಿವೆ.

*****

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಮುಸುಡಿಗೆ ಬಿತ್ತು ಕೋರ್ಟ್ ತಪರಾಕಿ: ಕೇಜ್ರಿವಾಲ್ ಎದುರು ಮಕಾಡೆಬಿದ್ದ ಬ್ಲೂಜೆಪಿ ಬಾಯಿಗೆ ಆನೆಪಟಾಕಿ.
ದೆಹಲಿಯಲ್ಲಿ ಕೇಜ್ರಿವಾಲ್ ಕೈಲಿ ಸಮಾ ಇಕ್ಕಿಸಿಕೊಂಡು ಚರಂಡಿಪಾಲಾಗಿದ್ದ ದ್ವೇಷಭಕ್ತ ಬ್ಲೂಜೆಪಿಗಳು ಮರ್ಮಸ್ಥಳಕ್ಕೆ ಬಿದ್ದ ಸುತ್ತಿಗೆ ಏಟಿಗೂ ಜಗ್ಗದೆ ಕೇಜ್ರಿವಾಲ್ ತಲೆಯ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಗಢವಗೂಬೆಯೊಂದನ್ನು ಕೂರಿಸಿ ಬ್ಯಾಕ್‍ಡೋರ್ ಪಾಲಿಟಿಕ್ಸಿಗೆ ಇಳಿದಿದ್ದರು. ಈ ಬಗ್ಗೆ ಸುಪ್ರೀಂಕೋರ್ಟಿಗೆ ಕೇಸು ಜಡಾಯಿಸಿದ್ದ ಕೇಜ್ರಿವಾಲ್ ಈ ವನ್ಯಜೀವಿ ಗಢವಗೂಬೆಯನ್ನು ಯಾವುದಾದರೂ ಅಭಯಾರಣ್ಯಕ್ಕೆ ಎಸೆಯಬೇಕೆಂದು ಹೋರಾಟ ನಡೆಸುತ್ತಿದ್ದರು. ಈ ಕೇಸಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ‘ಲೆಫ್ಟಿನೆಂಟ್ ಗೌರ್ನರ್’ ಎಂಬ ಹುದ್ದೆಯೇ ಮೂರುಕಾಸಿನದ್ದು, ಅದಕ್ಕೆ ಯಾರೂ ಬೆಲೆ ಕೊಡುವ ಅಗತ್ಯವಿಲ್ಲ, ಬ್ಲೂಜೆಪಿಯ ಈ ಲಡಕಾಸಿ ಗೌರ್ನರ್ ಜನಪ್ರತಿನಿಧಿಗಳ ಅಧಿಕಾರದಲ್ಲಿ ಮೂಗುತೂರಿಸದೆ ಸರ್ವಾಂಗಗಳನ್ನೂ ಮುಚ್ಚಿಕೊಂಡು ತೆಪ್ಪಗಿರಬೇಕೆಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಕೇಜ್ರಿವಾಲ್ ಕೈ ಮೇಲಾಗಿ, ಬ್ಲೂಜೆಪಿಯ ವಯೋವೃದ್ಧ ಪಾಖಂಡಿಗಳು ತಾವು ಬಿದ್ದಿದ್ದ ಚರಂಡಿಯೊಳಗಿಂದ ಎದ್ದುಬರಲು ಯತ್ನಿಸುತ್ತಿರುವಾಗಲೇ ಮತ್ತೊಂದು ಮ್ಯಾನ್‍ಹೋಲ್ ಒಳಕ್ಕೆ ತಲೆಕೆಳಗಾಗಿ ಬಿದ್ದಂತಾಗಿದೆಯೆಂಬ ವಿಶ್ಲೇಷಣೆ ಹೊರಬಿದ್ದಿದೆ. ಈ ಕಿತಾಪತಿ ಪಿತೂರಿಯಲ್ಲಿ ಕೈ ಪಕ್ಷದ ಹಾಸ್ಯನಟರೂ ಸೇರಿಕೊಂಡು ಕೇಜ್ರಿವಾಲರನ್ನು ಈ ಸಲ ಕೆಡವಲು ನಡೆಸುತ್ತಿದ್ದ ಸಂಚು ಈ ಮೂಲಕ ವಿಫಲವಾಗಿದ್ದು, ಸದ್ಯಕ್ಕೆ ರಾಜಧಾನಿಯ ಗೋಶಾಲೆಯಲ್ಲಿ ಹಿಂಡಿಬೂಸಾ ಮೆಲ್ಲುತ್ತ ಪೊಗದಸ್ತಾಗಿದ್ದ ಕೈ ಪಕ್ಷದ ದೆಹಲಿ ನಾಯಕರು ಈ ಕೋರ್ಟ್ ತೀರ್ಪು ಕೇಳಿದ ಕೂಡಲೇ ಅಂಬಾ ಎಂದು ಅರಚಿ, ನಾಲಿಗೆ ಹೊರಚಾಚಿ ಮೂರ್ಛೆ ಹೋಗಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*****

ಕ್ಯಾನ್ಸರ್‍ಗೆ ದನದ ಮೂತ್ರದಲ್ಲಿ ಔಷಧಿ ಕಂಡುಹಿಡಿದ್ರು ಗುಜರಾತಿಗರು: ಫ್ರಥಮ ದರ್ಜೆ ಮುಠ್ಠಾಳರ ಸಂಶೋಧನೆಯಾಯ್ತು ಜಗಜ್ಜಾಹೀರು
‘ಆಧುನಿಕ ವೈದ್ಯಶಾಸ್ತ್ರ’ ಅಂದರೆ ಕೇಜಿಗೆಷ್ಟು, ಅದು ನೋಡಲಿಕ್ಕೆ ಕರ್ರಗಿರುತ್ತೋ ಬೆಳ್ಳಗಿರುತ್ತೋ ಎಂದು ಕೇಳುವ ಪ್ರಥಮದರ್ಜೆ ಮುಠ್ಠಾಳರ ಗುಜರಾತಿನ ಪಡೆಯೊಂದು, ದನದ ಮೂತ್ರದಲ್ಲಿ ಕ್ಯಾನ್ಸರ್‍ಗೆ ಔಷಧಿ ಇದೆಯೆಂಬ ಎದೆಯೊಡೆಯುವ ಹಾಸ್ಯಾಸ್ಪದ ಸಂಶೋಧನೆಯನ್ನು ಮಾಡಿ ಮುಗಿಸಿದ್ದಾರೆ. ಗುಜರಾತಿನ ಜುನಾಗಢ್ ಯೂನಿವರ್ಸಿಟಿಯ ಪ್ರಾಧ್ಯಾಪಕರು ಈ ಕಿಸಲಗೇಡಿ ಕ್ರಿಸ್ತಪೂರ್ವ ಕಾಲದ ತಾಳೆಗರಿ ಸಂಶೋಧನೆ ನಡೆಸಿದ್ದಾರೆ. ಈ ಸುದ್ದಿ ತಿಳಿದ ವಿದೇಶದ ಯೂನಿವರ್ಸಿಟಿಗಳು ಈ ನಾಲ್ಕನೇ ದರ್ಜೆ ಸಂಶೋಧನೆ ನಡೆಸಿದ ಆದಿಮಾನವರು ಶಿಲಾಯುಗ ಕಾಲದಿಂದ 21ನೇ ಶತಮಾನಕ್ಕೆ ಟೈಂಟ್ರಾವೆಲ್ ಮಾಡಿಕೊಂಡು ಬಂದದ್ದಾದರೂ ಹೇಗೆ ಎಂಬ ಬಗ್ಗೆ ಸಂಶೋಧನೆ ನಡೆಸಲು ಅನುಮತಿ ಕೋರಿ ದ್ವೇಷಭಕ್ತರ ಸರ್ಕಾರದ ಅನುಮತಿ ಕೋರಿದ್ದಾರಂತೆ. ಈ ಅರ್ಜಿಯನ್ನು ಓದಿದ ಸನ್ಮಾನ್ಯ ಕೌಡಂಗ್‍ಪ್ರಿಯ ಪಕೋಡೇಂದ್ರ ಅವರು ಆ ಸಂಶೋಧನೆಗಿಂತಲೂ ಮುಂಚೆ ತನ್ನ ತಲೆಯನ್ನೇ ಮೊದಲು ಆಪರೇಷನ್ ಮಾಡಿ ಒಳಗಿರುವುದು ಮಾಂಸಮಜ್ಜೆಯಿಂದಾದ ಮಿದುಳೋ, ಇಲ್ಲಾ.. ದನದ ಸೆಗಣಿಯಿಂದ ತಯಾರಾದ ಮಿದುಳೋ ಎಂದು ಪತ್ತೆ ಮಾಡಿಕೊಡಲು ವಿದೇಶಿ ಸಂಶೋಧಕರನ್ನು ಅಂಗಲಾಚಿದ್ದಾರಂತೆ.

*****

ಹೊಲದಲ್ಲಿ ನಿಂತು ಮಂತ್ರ ಹೇಳಿದ್ರೆ ಬೆಳೆ ಬರುತ್ತಂತೆ
ಗೋವಾ ಬ್ಲೂಜೆಪಿ ಸಚಿವನ ತಲೆಕೆಟ್ಟ ಅಂತೆಕಂತೆ
ರೈತರ ಹೊಲದಲ್ಲಿ ಸರಿಯಾಗಿ ಬೆಳೆ ಬರದೇ ಇದ್ರೆ ರೈತರು ಹೊಲದಲ್ಲಿ ನಿಂತು “ಓಂ ರುಂ ಜುಂ ಸ್ವಾಹಾ, ಓಂ ರುಂ ಜುಂ ಸ್ವಾಹಾ” ಎಂದು ಮಂತ್ರ ಪಠಿಸಿದರೆ ಬೆಳೆ ಚೆನ್ನಾಗಿ ಬರುತ್ತದೆಂದು ಗೋವಾದ ಬ್ಲೂಜೆಪಿ ಪಕ್ಷದ ಕೃಷಿಸಚಿವ ಹೊಸ ಸಂಶೋಧನೆ ಮಾಡಿದ್ದಾನೆ. ಹೀಗೆ ಮಂತ್ರ ಪಠಿಸುವಾಗ ಹಿಂದಿನಿಂದ ಯಾವುದಾದರೂ ಕೊಳಕುಮಂಡಲದ ಹಾವು ಬಂದು ತೊಡೆಗೆ ಕಡಿದರೆ ಓಡಿ ಹೋಗುವುದೋ, ಕಚ್ಚಿಸಿಕೊಂಡು ಅಲ್ಲೇ ನಿಂತು “ಓಂ ರುಂ ಜುಂ ಸ್ವಾಹಾ” ಮಂತ್ರ ಪಠಿಸುವುದೋ ಎಂದು ವದರಿಗಾರರು ಕೇಳಿದ ಪ್ರಶ್ನೆಗೆ ಸಚಿವರು ಕೆಂಡಾಮಂಡಲರಾಗಿ ಕೈಲಿ ಹಿಡಿದಿದ್ದ ಮೈಕನ್ನೇ ಕಚಪಚನೆ ಅಗಿದು ‘ಪ್ಯಾಕಪ್’ ಎಂದು ಕಿರುಚಿ ಓಡಿಹೋದರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಎಲ್ಲ ಬಿಟ್ಟು ಈ ಬ್ಲೂಜೆಪಿಯವರಿಗೇ ಈ ಕಜ್ಜಿ ಐಡಿಯಾಗಳು ಹೇಗೆ ಬರುತ್ತವೆ? ಯಾವ ಫ್ಯಾಕ್ಟರಿಯಲ್ಲಿ ಇವರ ಮೆದುಳುಗಳನ್ನು ಪ್ರೊಡಕ್ಷನ್ ಮಾಡಲಾಗುತ್ತದೆ ಎಂದು ಕಕ್ಕಾಬಿಕ್ಕಿಯಾಗಿರುವ ಕೃಷಿ ವಿಜ್ಞಾನಿಗಳು ಸದರಿ ಬ್ಲೂಜೆಪಿ ಕೃಷಿ ಸಚಿವನನ್ನು ಗುಂಪುಗಲಭೆಯಲ್ಲಿ ಹೊಡೆದು ರೈತರ ಹೊಲಗಳಿಂದ ಒದ್ದೋಡಿಸಲು ತಯಾರಾಗಿದ್ದಾರೆಂದು ವರದಿಯಾಗಿದೆ. ಈ ಮನೆಹಾಳು ಐಡಿಯಾ ಮಾಡಿದ ಕೃಷಿಸಚಿವನ ಎಬಡೇಶಿ ಹೇಳಿಕೆಯ ದೆಸೆಯಿಂದ ಕಂಗಾಲಾಗಿರುವ ಗೋವಾದ ರೈತರು, ಹಂದಿ ಆಹಾರವನ್ನು ಪ್ಯಾಕ್ ಮಾಡಿ ವಿದೇಶಗಳಿಗೆ ಸಾಗಿಸುವ ಹಡಗಿನಲ್ಲಿ ಈ ಸಚಿವನನ್ನು ಹಾಕಿ ಯಾವುದಾದರೂ ಆಫ್ರಿಕನ್ ದೇಶಕ್ಕೆ ಆದಷ್ಟು ಬೇಗ ರಫ್ತು ಮಾಡಬೇಕೆಂದು ಒಕ್ಕೊರಲಿನಿಂದ ಸರ್ಕಾರವನ್ನು ಇನ್ನೂ ಆಗ್ರಹಿಸಿಲ್ಲದಿರುವುದು ಆಶ್ಚರ್ಯ ಹುಟ್ಟಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನಷ್ಟು ಮತ್ತಷ್ಟು ಆಘಾತ ಹುಟ್ಟಿಸುವ ವಾರ್ತೆಗಳಿಗಾಗಿ ಮುಂದಿನವಾರ ಸಿಗೋಣ. ಧನ್ಯವಾದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...