Homeಅಂಕಣಗಳುಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ‘ಅಟ್ಯಾಕ್ ಹನ್ಮಂತ’. ಇದೀಗ ದೊಡ್ ಸುದ್ದಿಗಳು.
ಪರದೇಶಿ ದುಡ್ಡಿಗೆ ಆಸೆಪಟ್ಟು ಬ್ಲೂಜೆಪಿ ಮಾಡ್ತು ಎಡವಟ್ಟು: ಕಾನೂನಿಗೆ ತಂದ್ರು ತಿದ್ದುಪಡಿ, ಕೋರ್ಟ್ ಇಡ್ತು ದೊಡ್ಡ ಧಡಿ.
ಪೊಲಿಟಿಕಲ್ ಪಾರ್ಟಿಗಳು ವಿದೇಶದಿಂದ ಯಾವುದೇ ಬಗೆಯ ದೇಣಿಗೆ ಪಡೆಯುವುದು ಅಪರಾಧ ಎಂದಿದ್ದ ಹಿಂದಿನ ಕಾನೂನನ್ನು ಬದಲಾಯಿಸಿ, ದೇಶದೊಳಗಿನ ಪಕ್ಷಗಳು ಯಾವ ದೇಶದ ಶ್ರೀಮಂತರಿಂದ ಬೇಕಾದರೂ ಕೋಟಿಗಟ್ಟಲೆ ತಿರುಪೆ ಎತ್ತಬಹುದು ಎಂದು ತಿದ್ದುಪಡಿ ಮಾಡಿಕೊಂಡಿದ್ದ ಬ್ಲೂಜೆಪಿ ಪಕ್ಷದ ಮುಖಕ್ಕೆ ಖಡಕ್ ನೊಟೀಸ್ ಕಳಿಸಿರುವ ದೆಹಲಿ ಹೈಕೋರ್ಟ್, ಇಷ್ಟ ಬಂದಂತೆ ಕಾನೂನನ್ನು ಬದಲಿಸಲು, ಕೋರ್ಟ್‍ನ ತೀರ್ಪುಗಳನ್ನು ತಿರುಚಲು ಕಾನೂನು ನಿಮ್ಮಪ್ಪನ ಮನೆಯ ಆಸ್ತಿಯಲ್ಲ ಎಂದು ಕ್ಯಾಕರಿಸಿ ಉಗಿದಿದೆ. ಅಕ್ರಮವಾಗಿ ಅಘೋಷಿತ ಮೂಲಗಳಿಂದ ಪಕ್ಷಕ್ಕೆ ದೇಣಿಗೆ ಪಡೆದು ಜೇಬು ತುಂಬಿಸಿಕೊಂಡಿದ್ದ ಕಮಲ ಪಕ್ಷ ಕಾನೂನಿನ ಕುಣಿಕೆಗೆ ಸಿಲುಕಿ ಮುಖ ಕೆತ್ತಿಸಿಕೊಳ್ಳುವ ಸಂದರ್ಭ ಎದುರಾಗಿದೆ. ಕೈ ಪಕ್ಷ ಕೂಡ ಈ ದಂಧೆಯಲ್ಲಿ ಕಮಲ ಪಕ್ಷಕ್ಕೆ ಸಾಥ್ ಕೊಟ್ಟಿರುವುದೂ ಕೂಡ ಜಗಜ್ಜಾಹೀರಾಗಿದೆ. ಕಾನೂನು ಕುಣಿಕೆಯಿಂದ ಬಚಾವಾಗಲು ಎಫ್.ಸಿ.ಆರ್.ಎ ಕಾಯ್ದೆಗೇ ತಿದ್ದುಪಡಿ ತಂದು ಎಸ್ಕೇಪ್ ರೂಟ್ ಹುಡುಕಿದ್ದ ಊಸರವಳ್ಳಿ ಪಕ್ಷ ಈಗ ಹೆಗ್ಗಣ ಹಿಡಿಯಲು ಇಟ್ಟಿದ್ದ ಇಕ್ಕಳದೊಳಗೆ ಮುಖ ಸಿಗಿಸಿಕೊಂಡು ತಪ್ಪಿಸಿಕೊಳ್ಳಲಾರದೆ ಕುಯ್ಯೋ ಮರ್ರೋ ಎಂದು ನರಳಾಡುತ್ತಿರುವುದು ದೇಶದ ಜನತೆಗೆ ಸಂತಸವುಂಟು ಮಾಡಿದೆ.

*****

ಲಾಚಾರ್ ಸಾಹಿತಿ ‘ಬೊಯ್ರಪ್ಪ’ನ ‘ಮಕ್ಕನ್ ಮಾರ್’ ಅವಾಂತರ: ಈ ಸಲ ಗ್ಯಾರಂಟಿ ವಕ್ಕರಿಸುತ್ತಂತೆ ಜ್ಞಾನಪೀಠಕ್ಕೇ ಗಂಡಾಂತರ
ದೇಶದ ಅತ್ಯುನ್ನತ ಪ್ರಶಸ್ತಿಗಳು ಘೋಷಣೆಯಾಗಲು ಒಂದೆರಡು ತಿಂಗಳು ಇರುವಂತೆಯೇ ಗರ್ಭಧರಿಸಿದ ಬೆಕ್ಕಿನಂತೆ ಕಯೋವ್, ಮಿಯೋವ್ ಎಂದು ಎದ್ದು ಕೂರುವ ಕುಖ್ಯಾತ ಸಾಹಿತಿ ‘ಬೊಯ್ರಪ್ಪ’ನವರು ಪ್ರತೀವರ್ಷದಂತೆ ಈ ವರ್ಷವೂ ತಮ್ಮ ಮನೆಯಿಂದ ಹೊರಗೆ ಬಂದು ನರಳಾಡಲು ಶುರು ಮಾಡಿದ್ದಾರೆ. ದೇಶವನ್ನು ಅಭಿವೃದ್ಧಿಪಡಿಸಲು ಪಕೋಡೇಂದ್ರ ಫಕೀರಪ್ಪನಿಗೆ 5 ವರ್ಷಗಳು ಜುಜುಬಿ, ಕನಿಷ್ಟಪಕ್ಷ ಎರಡು ಶತಮಾನವಾದರೂ ಪಕೋಡಯ್ಯನು ದೇಶದ ಪ್ರಧಾನಿಯಾದರೆ ದೇಶ ಉದ್ದಾರವಾಗುತ್ತದೆ ಎಂಬ ಸುಸ್ಸು ಸ್ಟೇಟ್‍ಮೆಂಟನ್ನು ಮನೆಯೆದುರಿನ ಲೈಟುಕಂಬಕ್ಕೆ ಕಾಲೆತ್ತಿ ಹುಯ್ದು ವಾಪಸ್ ಮನೆಯೊಳಗೆ ಬುಡುಬುಡನೆ ಓಡಿಹೋಗಿ ಹೊಟ್ಟೆ ಮಕಾಡೆ ಮಲಗಿಬಿಟ್ಟರೆಂದು ನಂಬಲರ್ಹ ಗಾಳಿಸುದ್ದಿಗಳು ತಿಳಿಸಿವೆ.

*****

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಮುಸುಡಿಗೆ ಬಿತ್ತು ಕೋರ್ಟ್ ತಪರಾಕಿ: ಕೇಜ್ರಿವಾಲ್ ಎದುರು ಮಕಾಡೆಬಿದ್ದ ಬ್ಲೂಜೆಪಿ ಬಾಯಿಗೆ ಆನೆಪಟಾಕಿ.
ದೆಹಲಿಯಲ್ಲಿ ಕೇಜ್ರಿವಾಲ್ ಕೈಲಿ ಸಮಾ ಇಕ್ಕಿಸಿಕೊಂಡು ಚರಂಡಿಪಾಲಾಗಿದ್ದ ದ್ವೇಷಭಕ್ತ ಬ್ಲೂಜೆಪಿಗಳು ಮರ್ಮಸ್ಥಳಕ್ಕೆ ಬಿದ್ದ ಸುತ್ತಿಗೆ ಏಟಿಗೂ ಜಗ್ಗದೆ ಕೇಜ್ರಿವಾಲ್ ತಲೆಯ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಗಢವಗೂಬೆಯೊಂದನ್ನು ಕೂರಿಸಿ ಬ್ಯಾಕ್‍ಡೋರ್ ಪಾಲಿಟಿಕ್ಸಿಗೆ ಇಳಿದಿದ್ದರು. ಈ ಬಗ್ಗೆ ಸುಪ್ರೀಂಕೋರ್ಟಿಗೆ ಕೇಸು ಜಡಾಯಿಸಿದ್ದ ಕೇಜ್ರಿವಾಲ್ ಈ ವನ್ಯಜೀವಿ ಗಢವಗೂಬೆಯನ್ನು ಯಾವುದಾದರೂ ಅಭಯಾರಣ್ಯಕ್ಕೆ ಎಸೆಯಬೇಕೆಂದು ಹೋರಾಟ ನಡೆಸುತ್ತಿದ್ದರು. ಈ ಕೇಸಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ‘ಲೆಫ್ಟಿನೆಂಟ್ ಗೌರ್ನರ್’ ಎಂಬ ಹುದ್ದೆಯೇ ಮೂರುಕಾಸಿನದ್ದು, ಅದಕ್ಕೆ ಯಾರೂ ಬೆಲೆ ಕೊಡುವ ಅಗತ್ಯವಿಲ್ಲ, ಬ್ಲೂಜೆಪಿಯ ಈ ಲಡಕಾಸಿ ಗೌರ್ನರ್ ಜನಪ್ರತಿನಿಧಿಗಳ ಅಧಿಕಾರದಲ್ಲಿ ಮೂಗುತೂರಿಸದೆ ಸರ್ವಾಂಗಗಳನ್ನೂ ಮುಚ್ಚಿಕೊಂಡು ತೆಪ್ಪಗಿರಬೇಕೆಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಕೇಜ್ರಿವಾಲ್ ಕೈ ಮೇಲಾಗಿ, ಬ್ಲೂಜೆಪಿಯ ವಯೋವೃದ್ಧ ಪಾಖಂಡಿಗಳು ತಾವು ಬಿದ್ದಿದ್ದ ಚರಂಡಿಯೊಳಗಿಂದ ಎದ್ದುಬರಲು ಯತ್ನಿಸುತ್ತಿರುವಾಗಲೇ ಮತ್ತೊಂದು ಮ್ಯಾನ್‍ಹೋಲ್ ಒಳಕ್ಕೆ ತಲೆಕೆಳಗಾಗಿ ಬಿದ್ದಂತಾಗಿದೆಯೆಂಬ ವಿಶ್ಲೇಷಣೆ ಹೊರಬಿದ್ದಿದೆ. ಈ ಕಿತಾಪತಿ ಪಿತೂರಿಯಲ್ಲಿ ಕೈ ಪಕ್ಷದ ಹಾಸ್ಯನಟರೂ ಸೇರಿಕೊಂಡು ಕೇಜ್ರಿವಾಲರನ್ನು ಈ ಸಲ ಕೆಡವಲು ನಡೆಸುತ್ತಿದ್ದ ಸಂಚು ಈ ಮೂಲಕ ವಿಫಲವಾಗಿದ್ದು, ಸದ್ಯಕ್ಕೆ ರಾಜಧಾನಿಯ ಗೋಶಾಲೆಯಲ್ಲಿ ಹಿಂಡಿಬೂಸಾ ಮೆಲ್ಲುತ್ತ ಪೊಗದಸ್ತಾಗಿದ್ದ ಕೈ ಪಕ್ಷದ ದೆಹಲಿ ನಾಯಕರು ಈ ಕೋರ್ಟ್ ತೀರ್ಪು ಕೇಳಿದ ಕೂಡಲೇ ಅಂಬಾ ಎಂದು ಅರಚಿ, ನಾಲಿಗೆ ಹೊರಚಾಚಿ ಮೂರ್ಛೆ ಹೋಗಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*****

ಕ್ಯಾನ್ಸರ್‍ಗೆ ದನದ ಮೂತ್ರದಲ್ಲಿ ಔಷಧಿ ಕಂಡುಹಿಡಿದ್ರು ಗುಜರಾತಿಗರು: ಫ್ರಥಮ ದರ್ಜೆ ಮುಠ್ಠಾಳರ ಸಂಶೋಧನೆಯಾಯ್ತು ಜಗಜ್ಜಾಹೀರು
‘ಆಧುನಿಕ ವೈದ್ಯಶಾಸ್ತ್ರ’ ಅಂದರೆ ಕೇಜಿಗೆಷ್ಟು, ಅದು ನೋಡಲಿಕ್ಕೆ ಕರ್ರಗಿರುತ್ತೋ ಬೆಳ್ಳಗಿರುತ್ತೋ ಎಂದು ಕೇಳುವ ಪ್ರಥಮದರ್ಜೆ ಮುಠ್ಠಾಳರ ಗುಜರಾತಿನ ಪಡೆಯೊಂದು, ದನದ ಮೂತ್ರದಲ್ಲಿ ಕ್ಯಾನ್ಸರ್‍ಗೆ ಔಷಧಿ ಇದೆಯೆಂಬ ಎದೆಯೊಡೆಯುವ ಹಾಸ್ಯಾಸ್ಪದ ಸಂಶೋಧನೆಯನ್ನು ಮಾಡಿ ಮುಗಿಸಿದ್ದಾರೆ. ಗುಜರಾತಿನ ಜುನಾಗಢ್ ಯೂನಿವರ್ಸಿಟಿಯ ಪ್ರಾಧ್ಯಾಪಕರು ಈ ಕಿಸಲಗೇಡಿ ಕ್ರಿಸ್ತಪೂರ್ವ ಕಾಲದ ತಾಳೆಗರಿ ಸಂಶೋಧನೆ ನಡೆಸಿದ್ದಾರೆ. ಈ ಸುದ್ದಿ ತಿಳಿದ ವಿದೇಶದ ಯೂನಿವರ್ಸಿಟಿಗಳು ಈ ನಾಲ್ಕನೇ ದರ್ಜೆ ಸಂಶೋಧನೆ ನಡೆಸಿದ ಆದಿಮಾನವರು ಶಿಲಾಯುಗ ಕಾಲದಿಂದ 21ನೇ ಶತಮಾನಕ್ಕೆ ಟೈಂಟ್ರಾವೆಲ್ ಮಾಡಿಕೊಂಡು ಬಂದದ್ದಾದರೂ ಹೇಗೆ ಎಂಬ ಬಗ್ಗೆ ಸಂಶೋಧನೆ ನಡೆಸಲು ಅನುಮತಿ ಕೋರಿ ದ್ವೇಷಭಕ್ತರ ಸರ್ಕಾರದ ಅನುಮತಿ ಕೋರಿದ್ದಾರಂತೆ. ಈ ಅರ್ಜಿಯನ್ನು ಓದಿದ ಸನ್ಮಾನ್ಯ ಕೌಡಂಗ್‍ಪ್ರಿಯ ಪಕೋಡೇಂದ್ರ ಅವರು ಆ ಸಂಶೋಧನೆಗಿಂತಲೂ ಮುಂಚೆ ತನ್ನ ತಲೆಯನ್ನೇ ಮೊದಲು ಆಪರೇಷನ್ ಮಾಡಿ ಒಳಗಿರುವುದು ಮಾಂಸಮಜ್ಜೆಯಿಂದಾದ ಮಿದುಳೋ, ಇಲ್ಲಾ.. ದನದ ಸೆಗಣಿಯಿಂದ ತಯಾರಾದ ಮಿದುಳೋ ಎಂದು ಪತ್ತೆ ಮಾಡಿಕೊಡಲು ವಿದೇಶಿ ಸಂಶೋಧಕರನ್ನು ಅಂಗಲಾಚಿದ್ದಾರಂತೆ.

*****

ಹೊಲದಲ್ಲಿ ನಿಂತು ಮಂತ್ರ ಹೇಳಿದ್ರೆ ಬೆಳೆ ಬರುತ್ತಂತೆ
ಗೋವಾ ಬ್ಲೂಜೆಪಿ ಸಚಿವನ ತಲೆಕೆಟ್ಟ ಅಂತೆಕಂತೆ
ರೈತರ ಹೊಲದಲ್ಲಿ ಸರಿಯಾಗಿ ಬೆಳೆ ಬರದೇ ಇದ್ರೆ ರೈತರು ಹೊಲದಲ್ಲಿ ನಿಂತು “ಓಂ ರುಂ ಜುಂ ಸ್ವಾಹಾ, ಓಂ ರುಂ ಜುಂ ಸ್ವಾಹಾ” ಎಂದು ಮಂತ್ರ ಪಠಿಸಿದರೆ ಬೆಳೆ ಚೆನ್ನಾಗಿ ಬರುತ್ತದೆಂದು ಗೋವಾದ ಬ್ಲೂಜೆಪಿ ಪಕ್ಷದ ಕೃಷಿಸಚಿವ ಹೊಸ ಸಂಶೋಧನೆ ಮಾಡಿದ್ದಾನೆ. ಹೀಗೆ ಮಂತ್ರ ಪಠಿಸುವಾಗ ಹಿಂದಿನಿಂದ ಯಾವುದಾದರೂ ಕೊಳಕುಮಂಡಲದ ಹಾವು ಬಂದು ತೊಡೆಗೆ ಕಡಿದರೆ ಓಡಿ ಹೋಗುವುದೋ, ಕಚ್ಚಿಸಿಕೊಂಡು ಅಲ್ಲೇ ನಿಂತು “ಓಂ ರುಂ ಜುಂ ಸ್ವಾಹಾ” ಮಂತ್ರ ಪಠಿಸುವುದೋ ಎಂದು ವದರಿಗಾರರು ಕೇಳಿದ ಪ್ರಶ್ನೆಗೆ ಸಚಿವರು ಕೆಂಡಾಮಂಡಲರಾಗಿ ಕೈಲಿ ಹಿಡಿದಿದ್ದ ಮೈಕನ್ನೇ ಕಚಪಚನೆ ಅಗಿದು ‘ಪ್ಯಾಕಪ್’ ಎಂದು ಕಿರುಚಿ ಓಡಿಹೋದರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಎಲ್ಲ ಬಿಟ್ಟು ಈ ಬ್ಲೂಜೆಪಿಯವರಿಗೇ ಈ ಕಜ್ಜಿ ಐಡಿಯಾಗಳು ಹೇಗೆ ಬರುತ್ತವೆ? ಯಾವ ಫ್ಯಾಕ್ಟರಿಯಲ್ಲಿ ಇವರ ಮೆದುಳುಗಳನ್ನು ಪ್ರೊಡಕ್ಷನ್ ಮಾಡಲಾಗುತ್ತದೆ ಎಂದು ಕಕ್ಕಾಬಿಕ್ಕಿಯಾಗಿರುವ ಕೃಷಿ ವಿಜ್ಞಾನಿಗಳು ಸದರಿ ಬ್ಲೂಜೆಪಿ ಕೃಷಿ ಸಚಿವನನ್ನು ಗುಂಪುಗಲಭೆಯಲ್ಲಿ ಹೊಡೆದು ರೈತರ ಹೊಲಗಳಿಂದ ಒದ್ದೋಡಿಸಲು ತಯಾರಾಗಿದ್ದಾರೆಂದು ವರದಿಯಾಗಿದೆ. ಈ ಮನೆಹಾಳು ಐಡಿಯಾ ಮಾಡಿದ ಕೃಷಿಸಚಿವನ ಎಬಡೇಶಿ ಹೇಳಿಕೆಯ ದೆಸೆಯಿಂದ ಕಂಗಾಲಾಗಿರುವ ಗೋವಾದ ರೈತರು, ಹಂದಿ ಆಹಾರವನ್ನು ಪ್ಯಾಕ್ ಮಾಡಿ ವಿದೇಶಗಳಿಗೆ ಸಾಗಿಸುವ ಹಡಗಿನಲ್ಲಿ ಈ ಸಚಿವನನ್ನು ಹಾಕಿ ಯಾವುದಾದರೂ ಆಫ್ರಿಕನ್ ದೇಶಕ್ಕೆ ಆದಷ್ಟು ಬೇಗ ರಫ್ತು ಮಾಡಬೇಕೆಂದು ಒಕ್ಕೊರಲಿನಿಂದ ಸರ್ಕಾರವನ್ನು ಇನ್ನೂ ಆಗ್ರಹಿಸಿಲ್ಲದಿರುವುದು ಆಶ್ಚರ್ಯ ಹುಟ್ಟಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನಷ್ಟು ಮತ್ತಷ್ಟು ಆಘಾತ ಹುಟ್ಟಿಸುವ ವಾರ್ತೆಗಳಿಗಾಗಿ ಮುಂದಿನವಾರ ಸಿಗೋಣ. ಧನ್ಯವಾದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...