Homeನ್ಯಾಯ ಪಥತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

ತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

- Advertisement -
- Advertisement -

| ಸಂಪಾದಕೀಯ |

ಕೇಂದ್ರ ಸರ್ಕಾರ ತಾನು ಆಡಳಿತ ನಡೆಸಿದ 5 ವರ್ಷಗಳಲ್ಲಿ ಸುಪ್ರೀಂ ಕೋರ್ಟ್, ಆರ್‍ಬಿಐ, ಸಿ.ಬಿ.ಐ, ದತ್ತಾಂಶ ಸಂಸ್ಥೆಗಳು ಸೇರಿದಂತೆ ಆಡಳಿತದ ಎಲ್ಲಾ ಸಾಂಸ್ಥಿಕ ಆಯಾಮಗಳನ್ನು ಹದಗೆಡಿಸಿರುವುದು ಪ್ರಜ್ಞಾವಂತರಿಗೆ ಗೊತ್ತೇ ಇದೆ. ಸರ್ಕಾರದ ಅನಧಿಕೃತ ಸಂಸ್ಥೆಗಳ ಮೂಲಕ ದೇಶದ ಜನ ಏನು ತಿನ್ನಬೇಕು, ಯಾವ ರೀತಿಯ ಬಟ್ಟೆ ಹಾಕಬೇಕು ಎನ್ನುವ ಫರ್ಮಾನು ಸಹ ಹೊರಡಿಸಲಾಯಿತು. ಈಗ ಅದೇ ಸರ್ಕಾರ ತನ್ನ ಕೊನೆಯ ದಿನಗಳಲ್ಲಿ ದೇಶದ ಮಕ್ಕಳು ಏನು ಕಲಿಯಬೇಕು ಏನು ಬಿಡಬೇಕು ಎಂದು ನಿರ್ಧರಿಸಲು ಮುಂದಾಗಿರುವುದು ಪ್ರಜಾಪ್ರಭುತ್ವ ಘೋರ ಅಣಕವಾಗಿದೆ.

ಭಾರತ ಬಹುತ್ವ ದೇಶ. ಈ ವೈವಿಧ್ಯತೆಯೇ ಅದರ ಜೀವಾಳ. ಈ ವೈವಿಧ್ಯತೆಯೂ ದೇಶದ ಎಲ್ಲಾ ರಂಗಗಳಲ್ಲೂ ಕಂಡಿಬಂದಿದ್ದು ಸಹಜವಾಗಿಯೇ ಮಕ್ಕಳ ಕಲಿಕೆಯಲ್ಲಿಯೂ ಸೇರಿಕೊಂಡಿದೆ. ಭಾರತದ ಪಠ್ಯಪುಸ್ತಕಗಳು ಸಮಗ್ರತೆಯಿಂದ ಕೂಡಿದ್ದು ಇಡೀ ದೇಶದ ಸಂಸ್ಕೃತಿ ಆಚಾರ ವಿಚಾರ ಜನಾಂಗಗಳ ಕುರಿತ ಮಾಹಿತಿಗಳನ್ನು ಒಳಗೊಂಡಿರಬೇಕೆನ್ನುವುದು ಸಂವಿಧಾನದ ಆಶಯ ಮಾತ್ರವಲ್ಲ ಮಕ್ಕಳ ಕಲಿಕೆಯ ದೃಷ್ಟಿಯಿಂದ, ಅವರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವೆಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾವಿನ್ನು ನಮ್ಮ ಪಠ್ಯಪುಸ್ತಕಗಳಲ್ಲಿ ಒಳಗೊಳ್ಳಬೇಕಿರುವ ಸಾವಿರಾರು ಅಂಶಗಳಿದ್ದರೂ ಆ ಕಡೆ ಹೆಜ್ಜೆ ಇಟ್ಟೆದ್ದೆವು. ಆದರೆ ಈ ಸರ್ಕಾರ ಅದರಿಂದ ಹಿಂದೆ ಬರುವ ಸೂಚನೆಗಳನ್ನು ನೀಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಮೂರು ದಿನ ಹಿಂದೆಯಷ್ಟೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇಡ್‍ಕರ್‍ ರವರ ನಿರ್ದೇಶನದ ಮೇರೆಗೆ ಮಕ್ಕಳ ಕಲಿಕೆಯ ಹೊರೆ ಕಡಿಮೆ ಮಾಡುವ ನೆಪಹೊಡ್ಡಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಮಂಡಳಿಯು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಭಾರೀ ಬದಲಾವಣೆಗಳನ್ನು ತಂದಿದೆ. ಭಾರತ ಮತ್ತು ಸಮಕಾಲೀನ ಜಗತ್ತು-1 ಎಂಬ ಪಠ್ಯಪುಸ್ತಕದಲ್ಲಿ 70 ಪುಟಗಳನ್ನು ಕೈಬಿಟ್ಟಿದೆ. ಆದರೆ ಅದರಲ್ಲಿ ಕೇರಳದ ಟ್ರಾವೆಂಕೂರ್‍ನಲ್ಲಿ ಕೆಳ ಜಾತಿಯವರಾಗಿ ಪರಿಗಣಿಸುವ ನಾಡಾರ್ ಮಹಿಳೆಯರು ಎದೆಭಾಗವನ್ನು ಬಟ್ಟೆಯಿಂದ ಮುಚ್ಚಿಕೊಳ್ಳುವುದಕ್ಕಾಗಿ ನಡೆಸಿದ ಹೋರಾಟದ ಕಥನ ಸೇರಿದಂತೆ ಮಹತ್ವದ ಮೂರು ಪಾಠಗಳನ್ನು ತೆಗೆದಿರುವುದು ಕೇವಲ ಹೊರೆ ಕಡಿಮೆ ಮಾಡುವುದಕ್ಕಾಗಿ ಎಂದರೆ ನಂಬಲು ಸಾಧ್ಯವೇ?

ಮುಂದುವರಿದು ಇತಿಹಾಸ ಮತ್ತು ಕ್ರೀಡೆ ಎಂಬ ಅಧ್ಯಾಯದಲ್ಲಿ ಭಾರತದಲ್ಲಿ ಕ್ರಿಕೆಟ್ ಆಟವೆಂಬುದು ಕೆಲವೇ ಜಾತಿ, ಪ್ರದೇಶ ಮತ್ತು ಸಮುದಾಯದೊಂದಿಗೆ ಮಾತ್ರ ಬೆಸೆದುಕೊಂಡಿದೆ ಎಂಬುದರ ವಿಮರ್ಶಾತ್ಮಕ ಪಠ್ಯವನ್ನು ಸಹ ಕೈಬಿಡಲಾಗಿದೆ. ಹಾಗಯೇ ಗ್ರಾಮೀಣ ಜನರು ಮತ್ತು ರೈತರು ಎಂಬ ಅಧ್ಯಾಯದಡಿ ಬಂಡವಾಳಶಾಹಿ ಮತ್ತು ವಸಾಹತುಶಾಹಿ ಆಳ್ವಿಕೆಗಳು ಗ್ರಾಮೀಣ ಜನರ ಮೇಲೆ ಅದರಲ್ಲೂ ರೈತರ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಇದ್ದ ಅಧ್ಯಾಯವೂ ಹೊರೆಯ ಕಾರಣಕ್ಕೆ ಕಾಣೆಯಾಗಿದೆ. ಕೈಬಿಟ್ಟಿರುವ ಮೂರು ಪಠ್ಯಗಳು ಸಹ ದೇಶದ ತಳಸಮುದಾಯಗಳ ಕಥನವಾಗಿದ್ದು ಅವರಿಗಾಗುತ್ತಿರುವ ಅನ್ಯಾಯ ಮತ್ತು ಸಮಾಜವನ್ನು ವಿಮರ್ಶಾತ್ಮಕ ನೋಡಲು ಸಾಧ್ಯವಾಗುವಂತವೇ ಆಗಿರುವುದರಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ.

ಈ ಪ್ರಕ್ರಿಯೆ 2016ರಿಂದಲೂ ಚಾಲ್ತಿಯಲ್ಲಿದ್ದು ಈ ಪಠ್ಯಗಳ ಕುರಿತು ಪರೀಕ್ಷೆಗಳಲ್ಲಿ ಪ್ರಶ್ನೆ ಕೇಳಬಾರದೆಂದು ಆಗಲೇ ಸುತ್ತೋಲೆ ಹೊರಡಿಸಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡದೇ ಕೇವಲ ಇತಿಹಾಸ (ಸಾಮಾಜಿಕ ವಿಜ್ಞಾನ)ದ ಪಠ್ಯಪುಸ್ತಕಗಳಲ್ಲಿ ಮಾತ್ರ ಪಠ್ಯಗಳನ್ನು ಕಡಿತ ಮಾಡಿದೆ ಎಂದರೆ ಆಳುವ ಸರ್ಕಾರದ ಹುನ್ನಾರ ಅರ್ಥವಾಗದೇ ಇರುವುದಿಲ್ಲ. ಇದೇ ಸಂದರ್ಭದಲ್ಲಿ ಹೊರೆ ಕಡಿಮೆ ಮಾಡುವ ಉದ್ದೇಶ ಅಂತ ಬಾಯಲ್ಲಿ ಹೇಳುತ್ತಿದ್ದು ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಹಿಂದಿ ಕವನವನ್ನು ಇದೇ ಎನ್‍ಸಿಇಆರ್‍ಟಿ ಪಠ್ಯದಲ್ಲಿ ಸೇರ್ಪಡೆ ಮಾಡಿದೆ.

ಮಕ್ಕಳು ಏನನ್ನು ಕಲಿಯಬೇಕು, ಪಠ್ಯ ಯಾವುದಿರಬೇಕೆಂಬುದನ್ನು ಹಾಗೂ ಎಷ್ಟಿರಬೇಕೆಂಬುದನ್ನು ನಿರ್ಧರಿಸಬೇಕಿರುವುದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು. ಆಳುವ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಮೂಗು ತೂರಿಸುವುದು ಪ್ರಜಾತಂತ್ರ ವಿರೋಧಿಯಾದುದು. ಆದರೆ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಂತೆಲ್ಲಾ ಶಿಕ್ಷಣದ ಕೇಸರಿಕರಣಕ್ಕೆ ನೇರವಾಗಿ ಕೈಹಾಕುತ್ತಾ ಎಳೆಯ ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪ್ರಯತ್ನ ಮಾಡುತ್ತಿವೆ. ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ತಮಗೆ ಮನಸ್ಸಿಗೆ ಬಂದುದ್ದನ್ನು ಪಠ್ಯಪುಸ್ತಕಗಳಲ್ಲಿ ತರಲು ಹೊರಟರೆ ಶಿಕ್ಷಣದ ಉದ್ದೇಶವೇ ಬೀದಿಪಾಲಾಗುತ್ತದೆ.

ಈ ಹಿಂದೆಯೂ 2009ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಆಗ ಕರ್ನಾಟಕದ ಪ್ರಜ್ಞಾವಂತರಿಂದ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. ತದನಂತರ ಸಂಸ್ಕøತ ಭಾಷೆಯನ್ನು ಕಡ್ಡಾಯ ಮಾಡುತ್ತೇವೆಂದು ಒಂದಷ್ಟು ದಿನ ಪ್ರಚಾರ ಮಾಡಿದರು. ಈಗ ವೇದ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತೇವೆಂದು ಗುಲ್ಲೆಬ್ಬಿಸುತ್ತಿದ್ದಾರೆ. ಇಡೀ ಪ್ರಪಂಚವೇ ಆಧುನಿಕ, ವೈಜ್ಞಾನಿಕ ಶಿಕ್ಷಣ ಪಡೆದು ಅಭಿವೃದ್ದಿ ಪಥದಲ್ಲಿ ಮುನ್ನುಗ್ಗುತ್ತಿದ್ದರೆ ಭಾರತ ಮಾತ್ರ ಮತಾಂಧರ ಕೈಗೆ ಸಿಕ್ಕಿ ಹಿಮ್ಮುಖವಾಗಿ ಚಲಿಸುವ ದುಸ್ಥಿಗೆ ತಲುಪಿದೆ.

ಶಿಕ್ಷಣದ ಮೂಲಭೂತ ಉದ್ದೇಶ ಮಾನವೀಯವಾದ, ಪ್ರಜಾತಾಂತ್ರಿಕವಾದ, ಎಲ್ಲಾ ಜನರೂ ಸಮಾನರಾದ, ಬಹು ವೈವಿಧ್ಯತೆಯನ್ನು ಗೌರವಿಸುವ, ಸೃಜನಶೀಲತೆ, ಜ್ಞಾನ ಹಾಗೂ ನೆಮ್ಮದಿಯನ್ನು ಹೆಚ್ಚಿಸುತ್ತಾ ಹೋಗುವ ಸಮಾಜವನ್ನು ನಿರ್ಮಿಸುವುದಾಗಿದೆ. ಅದರ ಈಡೇರಿಕೆಗೆ ಎಲ್ಲಾ ಜಾತಿ ಧರ್ಮದ ಮಕ್ಕಳು ಸಹ ಒಂದೇ ಶಾಲೆಯಲ್ಲಿ ಕಲಿಯುವ ಸಮಾನ ಶಾಲಾ ವ್ಯವಸ್ಥೆಯ ಅಗತ್ಯವಿದೆ. ಆಗ ಮಾತ್ರ ಭಾರತದ ಮಕ್ಕಳು ಯಾವುದೇ ಹೇರಿಕೆ ಇಲ್ಲದೇ ಮುಕ್ತವಾಗಿ ಕಲಿಯುವ ವಾತವರಣ ನಿರ್ಮಾಣವಾಗುತ್ತದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಲಪಂಥೀಯ ಸರ್ಕಾರದ ಅರ್ಥಹೀನ ಕ್ರಮಗಳನ್ನು ವಿರೊಧಿಸುತ್ತಲೇ ಜನಪರ ಕಲಿಕಾ ವಿಧನಕ್ಕಾಗಿ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...