Homeಸಾಮಾಜಿಕತೆರೆಮರೆ: ದೇಶಾಂಶ ಹುಡಗಿ

ತೆರೆಮರೆ: ದೇಶಾಂಶ ಹುಡಗಿ

- Advertisement -
- Advertisement -

ಭೀಮಾಶಂಕರ ಬಿರಾದಾರ |

15 ವರ್ಷಗಳ ಅವಿರತ ಶ್ರಮ ಮತ್ತು ಶ್ರದ್ಧೆಯಿಂದ ಕುರಿತು ದೇಶಾಂಶ ಹುಡಗಿಯವರು ರೂಪಿಸಿದ ‘ಬೀದರ ಕನ್ನಡ ಕೋಶ’ ಕೃತಿಯು ಸಾಂಸ್ಕೃತಿಕ, ಸಾಹಿತ್ಯ ಮತ್ತು ಭಾಷಾ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆ.

ಕರ್ನಾಟಕದ ತುತ್ತ ತುದಿಯಲ್ಲಿ ಇರುವ ಬೀದರ್ ಹಲವು ಭಾಷೆಗಳ ಆಡುಂಬೊಲ. ವಿವಿಧ ಭಾಷೆಗಳ ಪರಸ್ಪರ ಮುಖಾಮುಖಿ, ಅನುಸಂಧಾನ, ಕೊಡುಕೊಳುವಿಕೆಯಿಂದ ಹೊಸ ಮತ್ತು ವಿಭಿನ್ನ ಭಾಷೆ-ಪದಗಳು ರೂಪುಗೊಂಡಿವೆ. ಜೊತೆಗೆ ಹಳೆಗನ್ನಡದ ಅಚ್ಚದೇಸಿ ಪದಗಳು ಕೂಡ ಇಂದಿಗೂ ಬಳಕೆಯಲ್ಲಿವೆ. ಅವುಗಳನ್ನು ಹುಡುಕಿ ತಂದು ಒಂದೆಡೆ ಸೇರಿಸಿ ನಿಘಂಟು ರಚಿಸುವ ಅನನ್ಯ ಕೆಲಸವನ್ನು ದೇಶಾಂಶ ಹುಡಗಿ ಅವರು ಮಾಡಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಮತ್ತು ಬದಲಾವಣೆಗಳು ಅನ್ಯ ಭಾಷೆ ಮತ್ತು ಸಾಹಿತ್ಯದ ಜತೆಗಿನ ಒಡನಾಟದೊಂದಿಗೆ ನಡೆದಿದೆ. ಒಂದು ಕಾಲಕ್ಕೆ ಸಂಸ್ಕೃತದೊಂದಿಗೆ ಮುಖಾಮುಖಿಯಾದ ಕನ್ನಡವು ಅನಂತರದಲ್ಲಿ ಅನುಸಂಧಾನ ಮತ್ತು ಆಪ್ತತೆಗಳಿಂದ ಹೊಸ ತಿಳಿವಳಿಕೆ ಪಡೆಯುತ್ತ, ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಕವಿರಾಜಮಾರ್ಗಕಾರನ ಪರಿಕಲ್ಪನೆಯ ಹಲವು ಕನ್ನಡಗಳು ಇಲ್ಲಿವೆ. ಅದರಲ್ಲಿ ಬೀದರ ಕನ್ನಡವೂ ಒಂದು. ಹಿಂದಿ, ಉರ್ದು, ತೆಲಗು, ಮರಾಠಿ, ಪರ್ಷಿಯನ್, ಇಂಗ್ಲಿಷ್, ಅರೆಬಿಕ್, ಮೊದಲಾದ ಭಾಷೆಗಳ ಸಂಪರ್ಕದಿಂದ ಬೀದರ ಕನ್ನಡ ಪದ ರಚನೆಯಲ್ಲಿ ಅವೆಲ್ಲವು ಬೆರೆತುಹೋಗಿವೆ. ತೆಲಂಗಾಣಾ, ಮಹಾರಾಷ್ಟ್ರ, ಕನ್ನಡದ ಸೀಮಾಂತ ಜಿಲ್ಲೆಯಾದ ಬೀದರನ ಕನ್ನಡದಲ್ಲಿ ಅನ್ಯ ಭಾಷೆಯ ಅನೇಕ ಪದಗಳನ್ನು ಕನ್ನಡೀಕರಿಸುವ ಶಕ್ತಿ ಪಡೆದಿದೆ. ಸಂಸ್ಕೃತದಿಂದ ಕನ್ನಡಿಕರಣಗೊಂಡು ತದ್ಭವವಾಗುವಂಥ ಗುಣ ಈ ಭಾಷೆಗೆ ಇದೆ.

ಇಂಥ ಭಾಷೆಯ ಮೂಡಿಬಂದ ಈ ಕೋಶ ಬೀದರ ಕನ್ನಡದಲ್ಲಿ ಉಳಿದುಕೊಂಡ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಅಸಂಖ್ಯ ಪದಗಳನ್ನ ಪೋಷಿಸಿ ಅವನ್ನು ಅರ್ಥದ ಆವರಣಕ್ಕೆ ತಂದು ನಿಲ್ಲಿಸಿದ್ದು ವಿಶೇಷವಾಗಿದೆ.

ಕಾಲದಿಂದ ಕಾಲಕ್ಕೆ ಭಾಷೆಯ ಬಳಕೆ ಭಿನ್ನವಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ನೆಲದ ಭಾಷೆಯ ರಚನೆ, ಅದರ ಸ್ವರೂಪ, ಈ ಬಳಕೆಯಾಗುವ ಪ್ರತ್ಯಯಗಳು, ಭಾಷಾ ಪ್ರಯೋಗದ ಬಗೆಗಳು, ಅವುಗಳ ಅರ್ಥಗ್ರಹಿಕೆ ಇವೆಲ್ಲವುದರ ಕುರಿತು ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗವೊಂದನ್ನು ಸೃಷ್ಟಿಸಬಲ್ಲ ಕೋಶವನ್ನು ಹುಡಗಿಯವರು ಕಟ್ಟಿಕೊಟ್ಟಿದ್ದಾರೆ. ಸ್ಥಳೀಯ ಭಾಷೆ, ಸಂಪ್ರದಾಯ, ಸಂಸ್ಕೃತಿ, ಜನಪದ, ದೇವರು, ದೆವ್ವ, ನಂಬಿಕೆ, ಆಚರಣೆ, ಗಾದೆ, ಬೈಗಳು ಎಲ್ಲವು ಈ ಕೋಶದ ವ್ಯಪ್ತಿಗೆ ಸೇರಿವೆ.

1936 ನವೆಂಬರ್ 06ರಂದು ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹುಡಗಿಯಲ್ಲಿ ಜನಿಸಿದ ಶಾಂತಪ್ಪ ದೇವರಾಯ ಅವರು ‘ದೇಶಾಂಶ ಹುಡಗಿ’ ಎಂದೇ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರು. ತಂದೆ ಶರಣಪ್ಪ. ತಾಯಿ ಭೀಮಾಬಾಯಿ. ಕೃಷಿ ಹಿನ್ನಲೆಯ ಕುಟುಂಬದವರು. 1952ರಿಂದ ಕವಿತೆಗಳು ಬರೆಯುತ್ತಿರುವ ಹುಡಗಿಯವರು 1980ರಲ್ಲಿ ‘ಗ್ರಾಮಶಿಲ್ಪಿಗಳು’ ಕೃತಿಯನ್ನು ಮೊದಲಿಗೆ ಪ್ರಕಟಿಸಿದರು. ಕನ್ನಡದ ಜೊತೆಗೆ ಹಿಂದಿ, ಮರಾಠಿ, ಉರ್ದು, ಇಂಗ್ಲೀಷ ಮೊದಲಾದ ಬಹುಭಾಷೆಗಳಲ್ಲಿ ಪ್ರಾವಿಣ್ಯ ಹೊಂದಿದ ದೇಶಾಂಶ ಹುಡಗಿಯವರು ಕವಿ, ಕತೆಗಾರ, ಸಂಪಾದಕ, ಚರಿತ್ರೆಕಾರ, ನಿಘಂಟುತಜ್ಞ, ಅನುವಾದಕ, ಸಂಘಟಕರಾಗಿ ಸಾಹಿತ್ಯ ಜಗತ್ತಿನಲ್ಲಿ ಮಹತ್ವ ಪಡೆದಿದ್ದಾರೆ.

‘ಬದುಕಿನ ಸುತ್ತ’ (1988),’ಅಕ್ಷರಜ್ಯೋತಿ’ (1992), ಕವನ ಸಂಕಲನಗಳನ್ನು ಬರೆದ ಇವರು, ವ್ಯಕ್ತಿ ಮತ್ತು ವ್ಯಕ್ತಿತ್ವದ ಕನ್ನಡಿಯಾಗಿ ‘ಬೀದರ ಜಿಲ್ಲೆಯ ಬರಹಗಾರರು’, ‘ಬೀದರ ಜಿಲ್ಲೆಯಲ್ಲಿ ಕನ್ನಡ ಕಟ್ಟಿದವರು’, ‘ಗ್ರಾಮಶಿಲ್ಪಿಗಳು’ ಕೃತಿಗಳನ್ನು ಬರೆದಿದ್ದಾರೆ. ಸಾವಿರ ರುಬಾಯಿಗಳ ಸಂಗ್ರಹ ‘ಪ್ರಚಲಿತ’, ‘ಬಚ್ಚನ್ನನ ಮಧುಶಾಲಾ’ (ಹರಿವಂಶರಾಯ್ ಬಚ್ಚನ್), ‘ಆಧ್ಯಾತ್ಮವಾದಿ ವಿಶ್ವವಿಭೂತಿ ಮಹಾತ್ಮ ಬಸವೇಶ್ವರರು’ (ಡಾ.ಭಗವಾನದಾಸ ತಿವಾರಿ) ಅನುವಾದಿತ ಶ್ರೀ ಚನ್ನಬಸವ ಚರಿತ್ರೆ (2014 ಮಹಾಕಾವ್ಯ) ಕೃತಿಗಳಾಗಿವೆ.

ಬಿ.ಎ, ಬಿ.ಇಡಿ. ಪದವೀಧರರಾದ ಶಾಂತಪ್ಪನವರು ಪ್ರೌಢಶಾಲಾ ಶಿಕ್ಷಕರಾಗಿ, ಸಾಕ್ಷರತಾ ಶಿಕ್ಷಣ ಯೋಜನಾಧಿಕಾರಿಯಾಗಿ, ಶಾಲಾ ತನಿಖಾಧಿಕಾರಿಯಾಗಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಂಗಭೂಮಿಯ ನಂಟಿನಿಂದ 25 ನಾಟಕಗಳಲ್ಲಿ ಅಭಿನಯಿಸಿದ್ದು, 20 ನಾಟಕಗಳನ್ನು ನಿರ್ದೇಶಿಸಿದ್ದಾರೆ. 1999ರಲ್ಲಿ ಧರಿನಾಡು ಕನ್ನಡ ಸಂಘ ಹುಟ್ಟು ಹಾಕಿ, ಹೊಸ ಪೀಳಿಗೆಯ ಕನ್ನಡ ಓದುಗ ಮತ್ತು ಬರಹಗಾರರನ್ನು ಬೆಳೆಸಿ ಪ್ರೋತ್ಸಾಹಿಸುತ್ತಿದ್ದಾರೆ. ಧರಿನಾಡು ಕನ್ನಡ ಸಂಘದ ಅಡಿಯಲ್ಲಿ ಪುಸ್ತಕ ಪ್ರಕಟಣೆ, ಕವಿಗೋಷ್ಠಿ, ವಿಚಾರ ಸಂಕಿರಣ, ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿದ ‘ಕೆ.ಜಿ.ಕುಂದಣಗಾರ ಗಡಿಕನ್ನಡ ಸಾಹಿತ್ಯ ಪ್ರಶಸ್ತಿ’, ಕನಾಟಕ ಜಾನಪದ ಅಕಾಡೆಮಿಯಿಂದ ಜಾನಪದತಜ್ಞ (2012), ಪಿ.ಎಚ್. ಜವರಪ್ಪ ಸಮಾಜಮುಖಿ ಪ್ರಶಸ್ತಿ, ಕಾಯಕ ಸಮ್ಮಾನ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ದೇಶಾಂಶರ ಸಾಹಿತ್ಯ ಸೇವೆಗೆ ಸಂದಿವೆ.

ದೇಶಾಂಶರ ಬಹುಮುಖ ಪ್ರತಿಭೆ, ಕ್ರಿಯಾಶೀಲ ವ್ಯಕ್ತಿತ್ವ, ಸೃಜನ ಮತ್ತು ಸೃಜನೇತರ ಸಾಹಿತ್ಯವು ಕನ್ನಡದ ಒಂದುತಲೆಮಾರಿನ ಓದುಗರಲ್ಲಿ ಗ್ರಾಮ್ಯಪ್ರಜ್ಞೆ ಮತ್ತು ಲೋಕಪ್ರಜ್ಞೆಯನ್ನು ಮೂಡಿಸಿ, ಸಾಂಸ್ಕೃತಿಕ ಪರಕೀಯತೆಯನ್ನು ಹೋಗಲಾಡಿಸಿ, ದೇಶಿಯತೆ ಹಾಗೂ ಸ್ಥಳೀಯತೆಯ ಸಂಗಡ ನಿಕಟ ಸಂಬಂಧವೊಂದನ್ನು ಬೆಳೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...