Homeಮುಖಪುಟತೆಲಂಗಾಣ ಪಶು ವೈದ್ಯೆಯ ಅತ್ಯಾಚಾರ, ಕೊಲೆಯ ನಾಲ್ಕು ಆರೋಪಿಗಳು 'ಎನ್ ಕೌಂಟರ್'ನಲ್ಲಿ ಸಾವು..

ತೆಲಂಗಾಣ ಪಶು ವೈದ್ಯೆಯ ಅತ್ಯಾಚಾರ, ಕೊಲೆಯ ನಾಲ್ಕು ಆರೋಪಿಗಳು ‘ಎನ್ ಕೌಂಟರ್’ನಲ್ಲಿ ಸಾವು..

- Advertisement -
- Advertisement -

ತೆಲಂಗಾಣದ ಪಶು ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಕೇಸಿನ ನಾಲ್ಕು ಆರೋಪಿಗಳು ಇಂದು ಮುಂಜಾನೆ 3 ಗಂಟೆಗೆ ‘ಎನ್ ಕೌಂಟರ್’ನಲ್ಲಿ ಹತರಾಗಿದ್ದಾರೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ಪಾಶ, ಜೊಲ್ಲು ಶಿವ, ಜೊಲ್ಲು ನವೀನ ಮತ್ತು ಕೇಶವುಲು ಎಂಬ ಆರೋಪಿಗಳನ್ನು ವಿಚಾರಣೆಗೆಂದು ಪಶು ವೈದ್ಯೆಯ ಶವ ದೊರಕಿದ್ದ ಜಾಗಕ್ಕೆ ಕರೆದುಕೊಂಡು ಹೋಗಿದ್ದೆವೆಂದು ಪೊಲೀಸರು ಹೇಳಿದ್ದಾರೆ.

ನಾವು ಸ್ಥಳ ಪರಿಶೀಲನೆ ಮಾಡುತ್ತಿದ್ದೆವು. ಆಗ ನಾಲ್ವರಲ್ಲಿ ಒಬ್ಬ ತಪ್ಪಿಸಿಕೊಳ್ಳಲು ಸನ್ನೆ ಮಾಡಿದ. ಅವರು ಪೊಲೀಸರ ಗನ್ ಗಳನ್ನು ಕಿತ್ತುಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಹಾಗಾಗಿ ಎನ್ ಕೌಂಟರ್ ಮಾಡಿದೆವು. ನಂತರ ಆಂಬುಲೆನ್ಸ್ ಗೆ ಕರೆ ಮಾಡಿತಾದರೂ ಅದು ಬರುವಷ್ಟರಲ್ಲಿ ನಾಲ್ವರು ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಕಾಶ್ ರೆಡ್ಡಿ ತಿಳಿಸಿದ್ದಾರೆ.

ಪಶು ವೈದ್ಯೆಯ ತಂದೆ ಎ.ಎನ್‌.ಐ ಜೊತೆ ಮಾತನಾಡಿ ನನ್ನ ಮಗಳನ್ನು ಕಳೆದುಕೊಂಡ ಹತ್ತು ದಿನಗಳ ನಂತರ ನಮಗೆ ನ್ಯಾಯ ದೊರಕಿದೆ‌. ನನ್ನ ಮಗಳ ಆತ್ಮವೀಗ ಶಾಂತವಾಗಿದೆ. ಇದಕ್ಕಾಗಿ ತೆಲಂಗಾಣ ಸರ್ಕಾರ ಮತ್ತು ಪೊಲೀಸರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಈ ಎನ್ ಕೌಂಟರ್ ಕುರಿತು ಸಮಾಜದಲ್ಲಿ ಪರ ವಿರೋಧದ ಚರ್ಚೆಗಳು ಆರಂಭವಾಗಿದೆ.

ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತೆ ವೃಂದ ಗ್ರೋವರ್ ಪೊಲೀಸ್ ಎನ್ ಕೌಂಟರ್ ಅನ್ನು ಖಂಡಿಸಿದ್ದಾರೆ. ” ಈ ರೀತಿಯ ಪೊಲೀಸ್ ನ್ಯಾಯ ನಮಗೆ ಬೇಕಾಗಿಲ್ಲ. ಬಂದೂಕಿನ ನಳಿಕೆಯ ನ್ಯಾಯ ಸಾಧ್ಯವಿಲ್ಲ. ಪೊಲೀಸರ ಮೇಲೆ ಎಫ್.ಐ.ಆರ್ ದಾಖಲಿಸಿ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಬೇಕು. ಪೊಲೀಸರು ಉತ್ತರದಾಯಿತ್ವವಾಗಿರಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಬೇಕೇ ಹೊರತು ಪೊಲೀಸರೇ ತೀರ್ಪು ಕೊಡುವುದು ಸರಿಯಲ್ಲ. ಇದನ್ನು ಸಮಾಜ ಒಪ್ಪುವುದಾದರೆ, ಪೊಲೀಸರು ಬಲಶಾಲಿಗಳಾಗುತ್ತಾರೆ, ನ್ಯಾಯಾಂಗ ದುರ್ಬಲವಾಗುತ್ತದೆ. ಆಗ ಪ್ರಜಾರಾಜ್ಯ ಹಿನ್ನೆಲೆಗೆ ಸರಿದು, ಪೊಲೀಸ್ ರಾಜ್ಯ ಮುನ್ನೆಲೆಗೆ ಬರುತ್ತದೆ.
    ರಾತ್ರಿ ಮೂರು ಗಂಟೆಯಲ್ಲಿ ಮಹಜರ್ ಮಾಡಿದ್ದು ಏಕೆ ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ.

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...