HomeUncategorizedಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

- Advertisement -
- Advertisement -

ಯಾಹೂ |

ಸಿನಿಮಾ ರಂಗದಲ್ಲಿ ಮತ್ತು ರಾಜಕಾರಣದಲ್ಲಿ ಹಾಗೂ ಖಾಸಗೀ ಬದುಕಿನಲ್ಲಿ ವೈರಿಗಳೇ ಇಲ್ಲದಂತೆ ಬದುಕಿದ ಅಂಬರೀಶ್‍ಗೆ ಗ್ರಹಗತಿಗಳು ಮುನಿಸಿಕೊಂಡಿದ್ದವು ಎಂದು ಟಿ.ವಿ.ಯೊಳಗೆ ಸೇರಿಕೊಂಡಿರುವ ಪುರೋಹಿತ ಪಿಂಡಗಳು ವಾದಿಸತೊಡಗಿವೆಯಂತಲ್ಲಾ. ಈ ಪಿಂಡಗಳ ವಿಶೇಷವೆಂದರೆ, ತ್ರಿಕಾಲಜ್ಞಾನಿಗಳಂತಾಡುವ ಇವು ಯಾವುದೇ ಘಟನೆ ನಡೆಯುವ ಮುನ್ನ ಬಾಯಿ ಬಿಡುವುದಿಲ್ಲ. ವಿಷ್ಣು ತೀರಿಕೊಂಡ ನಂತರವೇ ಅವರಿಗೆ ನಾಗವಲ್ಲಿ ಕಾಟ ಅಮರಿಕೊಂಡಿತ್ತು ಎಂದು ವದರಿದವು. ಸಕ್ಕರೆ ಕಾಯಿಲೆ ದೆಸೆಯಿಂದ ಹೃದಯಾಘಾತಕ್ಕೆ ತುತ್ತಾದ ವಿಷ್ಣುಗೆ ನಾಗವಲ್ಲಿ ಕಾಟವಿತ್ತು, ಯಾಗ ಮಾಡಿಸಿದ್ದರೆ ಸರಿಹೋಗುತ್ತಿತ್ತು ಎನ್ನುವ ಈ ಪಿಂಡಗಳು ಈಗ ಅಂಬರೀಶ್ ಸಾವಿಗೂ ಪುರೋಹಿತಶಾಹಿ ತಂತ್ರವನ್ನೇ ಬಳಸತೊಡಗಿರುವುದು ಕಂಡು ದಿಗಿಲಾಗಿ ಜ್ಯೋತಿಷ್ಯ ಬ್ರಹ್ಮ ಪ್ರಕಾಶ ಮಣ್ಣುರಾಯರಿಗೆ ಫೋನ್ ಮಾಡಲಾಗಿ ರಿಂಗಾಯ್ತು,
ರಿಂಗ್‍ಟೋನ್: “ಹೋನ್ಹೀ ತೋ ಹೋನ್ಹೀ ಹೀ ಹೈ, ಅನ್ಹೋಹ್ಹೀ ನಹೀಂ ಭವತ್ಯೇವ ಭವತವ್ಯಂ….. ಹಲೋ ಯಾರು.”
“ಗುರುಗಳೇ ನಾನು ಪತ್ರಕರ್ತ”
“ಯಾವ ಪತ್ರಿಕೆ.”
“ನ್ಯಾಯಪಥ.”
“ನ್ಯಾಯಪಥ ಅಂದರೆ ಸತ್ಯದ ದಾರಿ.”
“ಹೌದು ಸ್ವಾಮಿ, ನಿಮ್ಮ ಫೋನಿನ ರಿಂಗ್‍ಟೋನ್ ಅರ್ಥ ಆಗಲಿಲ್ಲ.”
“ನಡೆಯಬೇಕಾದದ್ದು ನಡೆದೇ ನಡೆಯುತ್ತದೆ, ನಡೆಯಬೇಕಾದ ರೀತಿಯಲ್ಲೇ ನಡೆಯುತ್ತದೆ ಅಂತ ಅರ್ಥ.”
“ಹಾಗಿದ್ದರೆ ಜ್ಯೋತಿಷ್ಯದ ಅಗತ್ಯವೇನು.”
“ನೀವು ಆಸ್ತಿಕರೋ ನಾಸ್ತಿಕರೋ.”
“ಸದ್ಯಕ್ಕೆ ನಾಸ್ತಿಕ.”
“ಹಾಗಾದರೆ ನಿಮ್ಮೊಟ್ಟಿಗೆ ಮಾತನಾಡಿ ಪ್ರಯೋಜನ ಇಲ್ಲ.”
“ಹಾಗನ್ನಬೇಡಿ ಗುರುವೆ, ನಮ್ಮ ಅಂಬರೀಶಣ್ಣನ ಸಾವಿನ ಬಗ್ಗೆ ತಿಳಕೊಬೇಕು.”
“ನೋಡಿ, ಅಂಬರೀಶ್ ನಮ್ಮನ್ನು ಭೇಟಿಮಾಡಿ ನಾವು ಹೇಳಿದಂತೆ ಕೇಳಿದ್ದರೆ ಬದುಕುತ್ತಿದ್ದರು.”
“ಅದು ಹ್ಯೆಂಗೆ ಗುರುಗಳೇ.”
“ಒಂದು ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಮೃತ್ಯುಂಜಯ ಹೋಮ ಅಂದರೆ ಸಾವನ್ನ ಜಯಿಸುವ ಹೋಮ ಅಲ್ಲವೆ ಗುರು.”
“ಹೌದು.”
“ಈ ಮೃತ್ಯುಂಜಯ ಹೋಮ ಮಾಡಿಸಿದ್ರೆ ಎಷ್ಟು ದಿನ ಬದುಕಬಹುದು.”
“ನೋಡಿ, ನಮಗಿರುವ ಆಯಸ್ಸು ಬ್ರಹ್ಮನದಲ್ಲ ನಾವು ನಮ್ಮ ಆಯಸ್ಸನ್ನ ವೃದ್ಧಿಸಿಕೊಳ್ಳಬೇಕು. ಮರಣದಲ್ಲಿ ನೂರ ಒಂದು ಪ್ರಕಾರಗಳುಂಟು. ನೂರನ್ನ ಜಯಿಸಬಹುದು. ಒಂದನ್ನ ಮಾತ್ರ ಜಯಿಸಲಾಗುವುದಿಲ್ಲ.”
“ಅದ್ಯಾವುದು ಗುರುಗಳೇ.”
“ನಿಜವಾದ ಮರಣ!”
“ಈಗ ಅಂಬರೀಶ್‍ಗೆ ಸಂಭವಿಸಿದ್ದು ನಿಜವಾದ ಮರಣ ಅಲ್ಲವ.”
“ಇಲ್ಲ ಅವರದ್ದು ಭಾವೋದ್ವೇಗದ ಮರಣ. ಅದಕ್ಕಾಗಿ ನಾಗಾರಾಧನೆಯ ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಅದನ್ನ ಅವರಿಗೆ ಹೇಳಬೇಕಾಗಿತ್ತು.”
“ಅವರು ಬಂದು ಕೇಳಬಹುದಿತ್ತು, ನಾವು ಅವರ ಬಳಿಗೆ ಹೋಗುವುದಿಲ್ಲ.”
“ಅವರ ಜೀವ ಮುಖ್ಯ ಅಲ್ಲವೆ?”
“ಅದೌದು. ನಾವು ಸಂಸ್ಕಾರವಂತ ಜ್ಯೋತಿಷಿಗಳು. ಅವರಾಗಿ ಬಂದರೆ ಹೇಳ್ತೇವೆ.”
“ಅವುರಾಗಿ ಬಂದ್ರೆ ಹೇಳೋ ಅಂತವರು, ಈಗ ಟಿವಿಯೊಳಗಡೆ ಬಂದು ಯಾಕೇಳ್ತಿದೀರಿ”
“ನಾವು ಬಂದದ್ದಲ್ಲ ಟಿವಿಯವರು ಕರೆದದ್ದು.”
“ಬಂದು-ಬಳಗದೋರು ಕರೆದ್ರೆ ಹೊಗಬೇಕಾಗತ್ತೆ ಬಿಡಿ. ತಮ್ಮ ಪ್ರಕಾರ ಅಂಬರೀಶ್ ಜಾತಕ ಹೇಗಿತ್ತು ಗುರುಗಳೇ.”
“ಅಂಬರೀಶ್ ಜಾತಕದಲ್ಲಿ ಗುರುವಿನ ಬಲವಿತ್ತು. ಶನಿ ದೂರವಿದ್ದ. ಈಗ ಅವರ ಬಳಿ ಶನಿ ಸಂಚಾರ ಆರಂಭವಾಗಿತ್ತು. ಮೃತ್ಯುಂಜಯ ಹೋಮದಿಂದ ಶನಿಯನ್ನ ದೂರ ಮಾಡಬಹುದಿತ್ತು.”
“ಬ್ರಹ್ಮರ್ಷಿಗಳೇ ನಾಗನ ಆರಾಧನೆ ಯಾಕೆ ಮಾಡ್ತರೆ ಗೊತ್ತೆ.”
“ನಾಗದೋಷ ಪರಿಹಾರಕ್ಕೆ.”
“ಅದಲ್ಲ, ಹಾವುಗಳ ಪೈಕಿ ನಾಗರಹಾವಿಗೆ ವಿಷ ಇದೆ. ಅದು ಕಡುದ್ರೆ ಮನುಷ್ಯ ಸತ್ತೋಗ್ತನೆ. ಪೂಜೆ ಮಾಡಿದ್ರೆ ಅದು ಕಡಿಯಲ್ಲ ಅನ್ನೋ ಕಾರಣಕ್ಕೆ. ಅಂದ್ರೆ ಭಯ ಭಕ್ತಿ ಮೂಡಿಸುತ್ತೆ ಅಲ್ಲವಾ.”
“ಅದೌದು. ಭಯ ನಿವಾರಣೆ ನಮ್ಮ ಕೆಲಸ.”
“ನಿಮ್ಮ ಮೃತ್ಯುಂಜಯ ಹೋಮದಿಂದ ಅರ್ಭುದ ರೋಗ ನಿವಾರಿಸಬಹುದಾ?”
“ಹೌದು.”
“ಹಾಗಾದ್ರೆ ಅನಂತಕುಮಾರ್ ಅದರಲ್ಲೇ ಹೋದರಲ್ಲ. ಅವರ ಸಂಬಂಧಿಯಾದ ನೀನು ಆಗ ಕತ್ತೆ ಕಾಯ್ತಾಯಿದ್ದ?”
“ಯಾಕೆ ಹಾಗೆ ಕೆಟ್ಟ ಮಾತನ್ನಾಡುವುದು ನೀವು.”
“ಸಾರಿ, ಗೋವು ಕಾಯ್ತಾಯಿದ್ರ.”
“ನೋಡಿ ಇವರೆ, ನಿಮ್ಮಂತ ಅಸಂಸ್ಕೃತ ಅಹಂಕಾರಿಗಳನ್ನ ನಾವು ಸಹಿಸಿಕೊಂಡು ಉತ್ತರ ಕೊಡಬೇಕಾಗ್ತದೆ, ಅಂಬರೀಶರು ಭಾವೋದ್ವೇಗದ ವ್ಯಕ್ತಿ. ಆನೆ ನಡೆದದ್ದೇ ದಾರಿ ಅಂತ ಹೇಳುವ ಹಾಗೆ ಅವರು ಯಾರ ಮಾತನ್ನ ಕೇಳಲಿಲ್ಲ. ಕೇಳಿದ್ದರೆ ನಮ್ಮಲ್ಲಿ ಪರಿಹಾರವಿತ್ತು.”
“ಏನು ಪರಿಹಾರ ಹೇಳಿ.”
“ನೋಡಿ ಮನುಷ್ಯನ ಬಾಹ್ಯ ವರ್ತನೆಗೆ ಆಂತರ್ಯದ ಸಮಸ್ಯೆಗಳು ಕಾರಣ. ನಮ್ಮ ದೇಹದಲ್ಲಿ 72 ಸಾವಿರ ನಾಡಿಗಳಿವೆ. ಅವುಗಳ ಸಮತೋಲನ ಮುಖ್ಯ. ಅವುಗಳ ಏರುಪೇರಿನಿಂದ ಮನುಷ್ಯ ಕೀಳರಿಮೆಗೆ ತುತ್ತಾಗುವುದುಂಟು. ಆಗ ನಾವು ಆತ್ಮವಿಶ್ವಾಸ ಮೂಡಿಸುತ್ತೇವೆ.”
“ಯಾವ ತರ.”
“ನಮ್ಮ ಹೆಂಡತಿಗೆ ಒಂದಿಷ್ಟು ಉಬ್ಬು ಹಲ್ಲುಗಳಿದ್ದವು.”
“ಹಲ್ಲಿಗೇ ಮುತ್ತು ಕೊಡೋತರ.”
“ಹಾಗಂದುಕೊಳ್ಳಬಹುದು. ಆಗ ನಾನು ಆಕೆಗೆ ಆತ್ಮವಿಶ್ವಾಸ ತುಂಬಿದೆ. ನಿನ್ನ ಹಲ್ಲುಗಳ ಬಗ್ಗೆ ಕೀಳರಿಮೆ ಬೇಡ. ಮನೆಯ ಮೆಟ್ಟಿಲು ಕಲ್ಲುಗಳು, ಮನೆಯ ಹೊರಗಿರುತ್ತವೆ, ಒಳಗಲ್ಲ ಅಂತ ಹಾಸ್ಯ ಮಾಡಿ ಹೇಳಿದೆ. ಆಕೆಗೆ ಕೀಳರಿಮೆ ಹೋಯ್ತು. ನಮ್ಮ ಬದುಕು ಸರಾಗವಾಯ್ತು. ಹೀಗೆ ನಾವು ಮನುಷ್ಯನ ಆಂತರ್ಯದಲ್ಲಿನ ಕೀಳರಿಮೆ ಹೋಗಲಾಡಿಸಿಬಿಡ್ತೇವೆ.”
“ಇದಕ್ಕೂ ಅಂಬರೀಶ್ ವಿಷಯಕ್ಕೂ ಏನು ಸಂಬಂಧ.”
“ಸಂಬಂಧವುಂಟು, ಅಂಬರೀಶ್ರಲ್ಲಿದ್ದ ಭಾವೋದ್ವೇಗ ಕಡಿಮೆ ಮಾಡಿ, ಇನ್ನೂ ಬದುಕುವಂತೆ ಮಾಡ್ತಾಯಿದ್ದೆ.”
“ಮಿಸ್ಟರ್ ಬ್ರಹ್ಮ, ನಿಮ್ಮ ಜೋತಿಷ್ಯ ಪ್ರಧಾನವಾಗಿ ಹೊಟ್ಟೆ ಪಾಡಿಂದು, ಈ ದೇಶದ ಮುಗ್ಧ ಮನಸ್ಸುಗಳ ತಲೆಗೆ ಪುರಾಣ ತುಂಬಿ ದೇಶನೆ ಬಾಳೆಎಲೆ ಮಾಡಿಕೊಂಡು ಉಂಡ್ರಿ ಅಂತ ನಮ್ಮ ತೇಜಸ್ವಿ ಹೇಳತಿದ್ರು. ಏನಾದ್ರು ಮಾಡಿಕೊಂಡು ಹಾಳಾಗೋಗಿ. ಆದ್ರೆ ಅಂಬರೀಶ್ ವಿಷಯದಲ್ಲಿ ಪುರಾಣ ಶುರುಮಾಡಿದ್ರೆ ಸರಿಯಾಗಿ ಮಾಡಬೇಕಾಯ್ತದೆ.”
“ಯಂತ ಮಾಡ್ತಿರಿ.”
“ನಿನ್ನ ರಿಂಗ್‍ಟೋನಿದೆಯಲ್ಲ ಆ ತರ ನಡೆಯಬೇಕಾದ್ದು ನಡದೇ ನಡೆಯುತ್ತೆ. ನಡೆಯಬೇಕಾದ ರೀತಿಯಲ್ಲೇ ನಡೆಯುತ್ತೆ.”
“ನನ್ನನ್ನ ಬೆದರಿಸುತ್ತೀಯ, ಶಾಪ ಕೊಡ್ತೇನೆ.”
“ನಿನ್ನ ಶಾಪ ನನ್ನ ಕೂದಲಿಗೆ ಸಮ.”
“ಛೇ ಕೆಟ್ಟವನೆ.”
ಥೂತ್ತೇರಿ….!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...