HomeUncategorizedಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

- Advertisement -
- Advertisement -

ಯಾಹೂ |

ಸಿನಿಮಾ ರಂಗದಲ್ಲಿ ಮತ್ತು ರಾಜಕಾರಣದಲ್ಲಿ ಹಾಗೂ ಖಾಸಗೀ ಬದುಕಿನಲ್ಲಿ ವೈರಿಗಳೇ ಇಲ್ಲದಂತೆ ಬದುಕಿದ ಅಂಬರೀಶ್‍ಗೆ ಗ್ರಹಗತಿಗಳು ಮುನಿಸಿಕೊಂಡಿದ್ದವು ಎಂದು ಟಿ.ವಿ.ಯೊಳಗೆ ಸೇರಿಕೊಂಡಿರುವ ಪುರೋಹಿತ ಪಿಂಡಗಳು ವಾದಿಸತೊಡಗಿವೆಯಂತಲ್ಲಾ. ಈ ಪಿಂಡಗಳ ವಿಶೇಷವೆಂದರೆ, ತ್ರಿಕಾಲಜ್ಞಾನಿಗಳಂತಾಡುವ ಇವು ಯಾವುದೇ ಘಟನೆ ನಡೆಯುವ ಮುನ್ನ ಬಾಯಿ ಬಿಡುವುದಿಲ್ಲ. ವಿಷ್ಣು ತೀರಿಕೊಂಡ ನಂತರವೇ ಅವರಿಗೆ ನಾಗವಲ್ಲಿ ಕಾಟ ಅಮರಿಕೊಂಡಿತ್ತು ಎಂದು ವದರಿದವು. ಸಕ್ಕರೆ ಕಾಯಿಲೆ ದೆಸೆಯಿಂದ ಹೃದಯಾಘಾತಕ್ಕೆ ತುತ್ತಾದ ವಿಷ್ಣುಗೆ ನಾಗವಲ್ಲಿ ಕಾಟವಿತ್ತು, ಯಾಗ ಮಾಡಿಸಿದ್ದರೆ ಸರಿಹೋಗುತ್ತಿತ್ತು ಎನ್ನುವ ಈ ಪಿಂಡಗಳು ಈಗ ಅಂಬರೀಶ್ ಸಾವಿಗೂ ಪುರೋಹಿತಶಾಹಿ ತಂತ್ರವನ್ನೇ ಬಳಸತೊಡಗಿರುವುದು ಕಂಡು ದಿಗಿಲಾಗಿ ಜ್ಯೋತಿಷ್ಯ ಬ್ರಹ್ಮ ಪ್ರಕಾಶ ಮಣ್ಣುರಾಯರಿಗೆ ಫೋನ್ ಮಾಡಲಾಗಿ ರಿಂಗಾಯ್ತು,
ರಿಂಗ್‍ಟೋನ್: “ಹೋನ್ಹೀ ತೋ ಹೋನ್ಹೀ ಹೀ ಹೈ, ಅನ್ಹೋಹ್ಹೀ ನಹೀಂ ಭವತ್ಯೇವ ಭವತವ್ಯಂ….. ಹಲೋ ಯಾರು.”
“ಗುರುಗಳೇ ನಾನು ಪತ್ರಕರ್ತ”
“ಯಾವ ಪತ್ರಿಕೆ.”
“ನ್ಯಾಯಪಥ.”
“ನ್ಯಾಯಪಥ ಅಂದರೆ ಸತ್ಯದ ದಾರಿ.”
“ಹೌದು ಸ್ವಾಮಿ, ನಿಮ್ಮ ಫೋನಿನ ರಿಂಗ್‍ಟೋನ್ ಅರ್ಥ ಆಗಲಿಲ್ಲ.”
“ನಡೆಯಬೇಕಾದದ್ದು ನಡೆದೇ ನಡೆಯುತ್ತದೆ, ನಡೆಯಬೇಕಾದ ರೀತಿಯಲ್ಲೇ ನಡೆಯುತ್ತದೆ ಅಂತ ಅರ್ಥ.”
“ಹಾಗಿದ್ದರೆ ಜ್ಯೋತಿಷ್ಯದ ಅಗತ್ಯವೇನು.”
“ನೀವು ಆಸ್ತಿಕರೋ ನಾಸ್ತಿಕರೋ.”
“ಸದ್ಯಕ್ಕೆ ನಾಸ್ತಿಕ.”
“ಹಾಗಾದರೆ ನಿಮ್ಮೊಟ್ಟಿಗೆ ಮಾತನಾಡಿ ಪ್ರಯೋಜನ ಇಲ್ಲ.”
“ಹಾಗನ್ನಬೇಡಿ ಗುರುವೆ, ನಮ್ಮ ಅಂಬರೀಶಣ್ಣನ ಸಾವಿನ ಬಗ್ಗೆ ತಿಳಕೊಬೇಕು.”
“ನೋಡಿ, ಅಂಬರೀಶ್ ನಮ್ಮನ್ನು ಭೇಟಿಮಾಡಿ ನಾವು ಹೇಳಿದಂತೆ ಕೇಳಿದ್ದರೆ ಬದುಕುತ್ತಿದ್ದರು.”
“ಅದು ಹ್ಯೆಂಗೆ ಗುರುಗಳೇ.”
“ಒಂದು ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಮೃತ್ಯುಂಜಯ ಹೋಮ ಅಂದರೆ ಸಾವನ್ನ ಜಯಿಸುವ ಹೋಮ ಅಲ್ಲವೆ ಗುರು.”
“ಹೌದು.”
“ಈ ಮೃತ್ಯುಂಜಯ ಹೋಮ ಮಾಡಿಸಿದ್ರೆ ಎಷ್ಟು ದಿನ ಬದುಕಬಹುದು.”
“ನೋಡಿ, ನಮಗಿರುವ ಆಯಸ್ಸು ಬ್ರಹ್ಮನದಲ್ಲ ನಾವು ನಮ್ಮ ಆಯಸ್ಸನ್ನ ವೃದ್ಧಿಸಿಕೊಳ್ಳಬೇಕು. ಮರಣದಲ್ಲಿ ನೂರ ಒಂದು ಪ್ರಕಾರಗಳುಂಟು. ನೂರನ್ನ ಜಯಿಸಬಹುದು. ಒಂದನ್ನ ಮಾತ್ರ ಜಯಿಸಲಾಗುವುದಿಲ್ಲ.”
“ಅದ್ಯಾವುದು ಗುರುಗಳೇ.”
“ನಿಜವಾದ ಮರಣ!”
“ಈಗ ಅಂಬರೀಶ್‍ಗೆ ಸಂಭವಿಸಿದ್ದು ನಿಜವಾದ ಮರಣ ಅಲ್ಲವ.”
“ಇಲ್ಲ ಅವರದ್ದು ಭಾವೋದ್ವೇಗದ ಮರಣ. ಅದಕ್ಕಾಗಿ ನಾಗಾರಾಧನೆಯ ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಅದನ್ನ ಅವರಿಗೆ ಹೇಳಬೇಕಾಗಿತ್ತು.”
“ಅವರು ಬಂದು ಕೇಳಬಹುದಿತ್ತು, ನಾವು ಅವರ ಬಳಿಗೆ ಹೋಗುವುದಿಲ್ಲ.”
“ಅವರ ಜೀವ ಮುಖ್ಯ ಅಲ್ಲವೆ?”
“ಅದೌದು. ನಾವು ಸಂಸ್ಕಾರವಂತ ಜ್ಯೋತಿಷಿಗಳು. ಅವರಾಗಿ ಬಂದರೆ ಹೇಳ್ತೇವೆ.”
“ಅವುರಾಗಿ ಬಂದ್ರೆ ಹೇಳೋ ಅಂತವರು, ಈಗ ಟಿವಿಯೊಳಗಡೆ ಬಂದು ಯಾಕೇಳ್ತಿದೀರಿ”
“ನಾವು ಬಂದದ್ದಲ್ಲ ಟಿವಿಯವರು ಕರೆದದ್ದು.”
“ಬಂದು-ಬಳಗದೋರು ಕರೆದ್ರೆ ಹೊಗಬೇಕಾಗತ್ತೆ ಬಿಡಿ. ತಮ್ಮ ಪ್ರಕಾರ ಅಂಬರೀಶ್ ಜಾತಕ ಹೇಗಿತ್ತು ಗುರುಗಳೇ.”
“ಅಂಬರೀಶ್ ಜಾತಕದಲ್ಲಿ ಗುರುವಿನ ಬಲವಿತ್ತು. ಶನಿ ದೂರವಿದ್ದ. ಈಗ ಅವರ ಬಳಿ ಶನಿ ಸಂಚಾರ ಆರಂಭವಾಗಿತ್ತು. ಮೃತ್ಯುಂಜಯ ಹೋಮದಿಂದ ಶನಿಯನ್ನ ದೂರ ಮಾಡಬಹುದಿತ್ತು.”
“ಬ್ರಹ್ಮರ್ಷಿಗಳೇ ನಾಗನ ಆರಾಧನೆ ಯಾಕೆ ಮಾಡ್ತರೆ ಗೊತ್ತೆ.”
“ನಾಗದೋಷ ಪರಿಹಾರಕ್ಕೆ.”
“ಅದಲ್ಲ, ಹಾವುಗಳ ಪೈಕಿ ನಾಗರಹಾವಿಗೆ ವಿಷ ಇದೆ. ಅದು ಕಡುದ್ರೆ ಮನುಷ್ಯ ಸತ್ತೋಗ್ತನೆ. ಪೂಜೆ ಮಾಡಿದ್ರೆ ಅದು ಕಡಿಯಲ್ಲ ಅನ್ನೋ ಕಾರಣಕ್ಕೆ. ಅಂದ್ರೆ ಭಯ ಭಕ್ತಿ ಮೂಡಿಸುತ್ತೆ ಅಲ್ಲವಾ.”
“ಅದೌದು. ಭಯ ನಿವಾರಣೆ ನಮ್ಮ ಕೆಲಸ.”
“ನಿಮ್ಮ ಮೃತ್ಯುಂಜಯ ಹೋಮದಿಂದ ಅರ್ಭುದ ರೋಗ ನಿವಾರಿಸಬಹುದಾ?”
“ಹೌದು.”
“ಹಾಗಾದ್ರೆ ಅನಂತಕುಮಾರ್ ಅದರಲ್ಲೇ ಹೋದರಲ್ಲ. ಅವರ ಸಂಬಂಧಿಯಾದ ನೀನು ಆಗ ಕತ್ತೆ ಕಾಯ್ತಾಯಿದ್ದ?”
“ಯಾಕೆ ಹಾಗೆ ಕೆಟ್ಟ ಮಾತನ್ನಾಡುವುದು ನೀವು.”
“ಸಾರಿ, ಗೋವು ಕಾಯ್ತಾಯಿದ್ರ.”
“ನೋಡಿ ಇವರೆ, ನಿಮ್ಮಂತ ಅಸಂಸ್ಕೃತ ಅಹಂಕಾರಿಗಳನ್ನ ನಾವು ಸಹಿಸಿಕೊಂಡು ಉತ್ತರ ಕೊಡಬೇಕಾಗ್ತದೆ, ಅಂಬರೀಶರು ಭಾವೋದ್ವೇಗದ ವ್ಯಕ್ತಿ. ಆನೆ ನಡೆದದ್ದೇ ದಾರಿ ಅಂತ ಹೇಳುವ ಹಾಗೆ ಅವರು ಯಾರ ಮಾತನ್ನ ಕೇಳಲಿಲ್ಲ. ಕೇಳಿದ್ದರೆ ನಮ್ಮಲ್ಲಿ ಪರಿಹಾರವಿತ್ತು.”
“ಏನು ಪರಿಹಾರ ಹೇಳಿ.”
“ನೋಡಿ ಮನುಷ್ಯನ ಬಾಹ್ಯ ವರ್ತನೆಗೆ ಆಂತರ್ಯದ ಸಮಸ್ಯೆಗಳು ಕಾರಣ. ನಮ್ಮ ದೇಹದಲ್ಲಿ 72 ಸಾವಿರ ನಾಡಿಗಳಿವೆ. ಅವುಗಳ ಸಮತೋಲನ ಮುಖ್ಯ. ಅವುಗಳ ಏರುಪೇರಿನಿಂದ ಮನುಷ್ಯ ಕೀಳರಿಮೆಗೆ ತುತ್ತಾಗುವುದುಂಟು. ಆಗ ನಾವು ಆತ್ಮವಿಶ್ವಾಸ ಮೂಡಿಸುತ್ತೇವೆ.”
“ಯಾವ ತರ.”
“ನಮ್ಮ ಹೆಂಡತಿಗೆ ಒಂದಿಷ್ಟು ಉಬ್ಬು ಹಲ್ಲುಗಳಿದ್ದವು.”
“ಹಲ್ಲಿಗೇ ಮುತ್ತು ಕೊಡೋತರ.”
“ಹಾಗಂದುಕೊಳ್ಳಬಹುದು. ಆಗ ನಾನು ಆಕೆಗೆ ಆತ್ಮವಿಶ್ವಾಸ ತುಂಬಿದೆ. ನಿನ್ನ ಹಲ್ಲುಗಳ ಬಗ್ಗೆ ಕೀಳರಿಮೆ ಬೇಡ. ಮನೆಯ ಮೆಟ್ಟಿಲು ಕಲ್ಲುಗಳು, ಮನೆಯ ಹೊರಗಿರುತ್ತವೆ, ಒಳಗಲ್ಲ ಅಂತ ಹಾಸ್ಯ ಮಾಡಿ ಹೇಳಿದೆ. ಆಕೆಗೆ ಕೀಳರಿಮೆ ಹೋಯ್ತು. ನಮ್ಮ ಬದುಕು ಸರಾಗವಾಯ್ತು. ಹೀಗೆ ನಾವು ಮನುಷ್ಯನ ಆಂತರ್ಯದಲ್ಲಿನ ಕೀಳರಿಮೆ ಹೋಗಲಾಡಿಸಿಬಿಡ್ತೇವೆ.”
“ಇದಕ್ಕೂ ಅಂಬರೀಶ್ ವಿಷಯಕ್ಕೂ ಏನು ಸಂಬಂಧ.”
“ಸಂಬಂಧವುಂಟು, ಅಂಬರೀಶ್ರಲ್ಲಿದ್ದ ಭಾವೋದ್ವೇಗ ಕಡಿಮೆ ಮಾಡಿ, ಇನ್ನೂ ಬದುಕುವಂತೆ ಮಾಡ್ತಾಯಿದ್ದೆ.”
“ಮಿಸ್ಟರ್ ಬ್ರಹ್ಮ, ನಿಮ್ಮ ಜೋತಿಷ್ಯ ಪ್ರಧಾನವಾಗಿ ಹೊಟ್ಟೆ ಪಾಡಿಂದು, ಈ ದೇಶದ ಮುಗ್ಧ ಮನಸ್ಸುಗಳ ತಲೆಗೆ ಪುರಾಣ ತುಂಬಿ ದೇಶನೆ ಬಾಳೆಎಲೆ ಮಾಡಿಕೊಂಡು ಉಂಡ್ರಿ ಅಂತ ನಮ್ಮ ತೇಜಸ್ವಿ ಹೇಳತಿದ್ರು. ಏನಾದ್ರು ಮಾಡಿಕೊಂಡು ಹಾಳಾಗೋಗಿ. ಆದ್ರೆ ಅಂಬರೀಶ್ ವಿಷಯದಲ್ಲಿ ಪುರಾಣ ಶುರುಮಾಡಿದ್ರೆ ಸರಿಯಾಗಿ ಮಾಡಬೇಕಾಯ್ತದೆ.”
“ಯಂತ ಮಾಡ್ತಿರಿ.”
“ನಿನ್ನ ರಿಂಗ್‍ಟೋನಿದೆಯಲ್ಲ ಆ ತರ ನಡೆಯಬೇಕಾದ್ದು ನಡದೇ ನಡೆಯುತ್ತೆ. ನಡೆಯಬೇಕಾದ ರೀತಿಯಲ್ಲೇ ನಡೆಯುತ್ತೆ.”
“ನನ್ನನ್ನ ಬೆದರಿಸುತ್ತೀಯ, ಶಾಪ ಕೊಡ್ತೇನೆ.”
“ನಿನ್ನ ಶಾಪ ನನ್ನ ಕೂದಲಿಗೆ ಸಮ.”
“ಛೇ ಕೆಟ್ಟವನೆ.”
ಥೂತ್ತೇರಿ….!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...