HomeUncategorizedಥೂತ್ತೇರಿ : ಈಟು ದಿನ ಎಲ್ಲಿ ಮಲಗಿದ್ದ್ಯೆವ್ವಾ?

ಥೂತ್ತೇರಿ : ಈಟು ದಿನ ಎಲ್ಲಿ ಮಲಗಿದ್ದ್ಯೆವ್ವಾ?

- Advertisement -
- Advertisement -

ಯಾಹೂ |

ನಮ್ಮ ಸಾಣೆಹಳ್ಳಿ ರಂಗಭೂಮಿ ದೇಶದಲ್ಲೇ ಹೆಸರುವಾಸಿಯಾದ ರಂಗ ಪ್ರದೇಶ. ಏಕೆಂದರೆ, ಅಲ್ಲಿನ ಜಗದ್ಗುರುವಾದ ಪಂಡಿತಾರಾಧ್ಯರು ತಮ್ಮ ವಂಶವನ್ನು ನಾಟಕದ ಚಟುವಟಿಕೆಗೆ ಮೀಸಲಾಗಿರಿಸಿದ್ದಾರೆ. ಇಂತಹ ಸಾಹಸವನ್ನು ಯಾರೂ ಮಾಡಿಲ್ಲ. ಹೆಗ್ಗೋಡನ್ನು ಬಿಟ್ಟರೆ ರಾಜ್ಯಾದ್ಯಂತ ರಂಗಸಂಚಾರ ಆರಂಭಿಸಿದ ಸಾಣೆಹಳ್ಳಿ ಮಠ, ಹೆಗ್ಗೋಡನ್ನು ಸೈಡಿಗೆ ಸರಿಸಿದ್ದು ಈಗ ಇತಿಹಾಸ. ಏಕೆಂದರೆ ಹೆಗ್ಗೋಡು ಬರುಬರುತ್ತಾ ಹೆಗ್ಗೋಳಾಗಿ ಕಾಟಾಚಾರಕ್ಕೆ ತಿರುಗಾಟ ಶುರುವಿಟ್ಟುಕೊಂಡಾಗ ನಮ್ಮ ಪ್ರೇಕ್ಷಕರು ಅತ್ತ ತಾತ್ಸಾರ ತೋರಿದ್ದು, ಇದಕ್ಕೆ ಉತ್ತರವಾಗಿ ಹೆಗ್ಗೋಡಿನ ಹವ್ಯಕರು ಆಪ್ತರಂಗಭೂಮಿ ಮಾಡಿಕೊಂಡು ತಾವೇ ಎಂಟತ್ತು ಜನ ಸುತ್ತ ಕುಳಿತು ಎಲೆಯಡಿಕೆ ಜಗಿದು ನಾಟಕ ಅಂತ ನೋಡಿದ್ದು ಈಗ ಇತಿಹಾಸ. ಇದಕ್ಕೆ ಉತ್ತರವೆಂಬಂತೆ ಸಾಣೆಹಳ್ಳಿಯ ರಂಗಭೂಮಿ, ಏಕಕಾಲಕ್ಕೆ ನಾಲ್ಕೈದು ಸಾವಿರ ಜನ ಒಮ್ಮೆಲೆ ನಾಟಕ ನೋಡುವಂತೆ ಮಾಡಿದ್ದು, ಆಡಿದ್ದೂ ಒಂದು ದಾಖಲೆ. ಇಂತಿರುವಾಗ ಈಚೆಗೆ ನಾಟಕೋತ್ಸವ ಮಾಡಿದ ಸಾಣೆಹಳ್ಳಿ ಶ್ರೀಗಳು ಉತ್ಸವಕ್ಕೆ ಕರೆಸಿದ ಗೆಸ್ಟುಗಳ ಲಿಸ್ಟು ನೋಡಿದಾಗ ಬಿಜೆಪಿ ಲೀಡರ್‌ಗಳ ಪರಿಷೆಯೇ ನೆರೆದಂತಿತ್ತಲ್ಲಾ! ಈ ಬಗ್ಗೆ ಪೂರ್ವಗ್ರಹಪೀಡಿತ ಪ್ರಶ್ನೆ ಕೇಳಿದಾಗ, ಸಾಣೆಹಳ್ಳಿ ಅಂಗಳದಿಂದ ಬಂದ ಉತ್ತರ ದಂಗುಬಡಿಸುವಂತಿತ್ತು. ಜಾತ್ಯತೀತ ಮನೋಭಾವ, ಭಾರತೀಯ ಸಹಿಷ್ಣು ಚಿಂತನೆಯ ಸಾರ, ಸರ್ವಜನಾಂಗದ ಶಾಂತಿಯ ತೋಟದಲ್ಲಿ ತಾವೂ ಒಂದು ಗಿಡವಾಗಿ, ಮರವಾಗಿ, ಕಡೆಗೆ ಹುಲ್ಲಾಗುವ ಜ್ಞಾನ ಬೇಕಿರುವುದು ಈ ಬಿಜೆಪಿಯ ಜನಕ್ಕೆ. ಅದಕ್ಕೆ ಸಾಣೆಹಳ್ಳಿ ಗುರುಗಳು ಬಿಜೆಪಿಯ ಹೆಚ್ಚು ಜನರನ್ನ ಕರೆಸಿದ್ದಾರಂತಲ್ಲಾ, ಥೂತ್ತೇರಿ!

* * * *

ಸಾಣೆಹಳ್ಳಿಯ ರಂಗಭೂಮಿಗೆ ಉಪಮುಖ್ಯಮಂತ್ರಿ ಪರಮೇಶ್ವರರೂ ಬಂದಿದ್ದರು. ಅಪರೂಪದ ಜೀವಿಯಾದ ಪರಮೇಶ್ವರರ ಭೋಜನವನ್ನು ಜೀವರಕ್ಷಕರಾದ ವೈದ್ಯರು ಕಡ್ಡಿಯಲ್ಲಿ ಕೆದಕಿ, ಪರೀಕ್ಷಿಸಿ ಪರಮೇಶ್ವರ್‌ಗೆ ತಿನ್ನಿಸಬಹುದೆಂದು ಪರವಾನಗಿ ಕೊಟ್ಟದ್ದು ಜಗದ್ಗುರುಗಳ ಕೋಪಾಗ್ನಿಗೆ ಕಾರಣವಾಯ್ತಂತಲ್ಲಾ. ಸಾವಿರಾರು ಜನ ಪ್ರಸಾದ ಸ್ವೀಕರಿಸುವ ಜಾಗಕ್ಕೆ ಬಂದು ಅತಿಥಿಯೊಬ್ಬನ ಭೋಜನಕ್ಕೆ ಕಡ್ಡಿ ಎಟ್ಟಿ ಪರಿಶೀಲಿಸುವುದು ಎಷ್ಟು ಸರಿ. ಸಾವಿರಾರು ಜನರ ಪ್ರಾಣ ಮುಖ್ಯವೋ ಅಥವಾ ಒಬ್ಬನ ಪ್ರಾಣ ಮುಖ್ಯವೋ. ಒಂದು ಜೀವ ಹೋದರೆ ನಷ್ಟವೇನು ಎಂದರಂತಲ್ಲಾ. ಶ್ರೀಗಳು ತಮ್ಮ ನಿಷ್ಠುರ ಮಾತಿನ ಸಾಣೆಯನ್ನು ಹರಿತಗೊಳಿಸಿಕೊಳ್ಳಲು ಆಡಿದ ಮಾತು, ನಾಡಿನ ಪರಮ ಶಿಷ್ಯರನ್ನು ಕೆಣಕಿದೆಯಂತಲ್ಲಾ. ಪರಮೇಶ್ವರರ ಜೀವದ ಬಗ್ಗೆ ಹೀಗೆ ಹಗುರವಾಗಿ ಮಾತಾಡಿರುವ ಶ್ರೀಗಳು ಎಡೂರಪ್ಪನ ಹೀಗೆ ಮಾತಾಡಬಲ್ಲರೆ, ಇಲ್ಲ ಸಿದ್ದರಾಮಯ್ಯನ ಬಗ್ಗೆ ಹೀಗೆ ಹೇಳಬಲ್ಲರೆ. ಅಗ್ಗವಾಗಿ ಸಿಕ್ಕಿದ ನಮ್ಮ ಪರಮಣ್ಣನಿಗೆ ಹೀಗಂದಿರುವುದು ಸರಿಯಲ್ಲ ಎಂದು ಸಣ್ಣದಾಗಿ ಗೊಣಗಿದರಲ್ಲಾ. ನಮ್ಮ ಪರಮಣ್ಣನ ಜೀವ ಸದ್ಯಕ್ಕೆ ಅಮೂಲ್ಯವಾದುದೇ ಸರಿ. ಇಷ್ಟು ವರ್ಷಗಳ ನಂತರ ಮುಖ್ಯಮಂತ್ರಿ ಪದವಿ ಸನಿಹಕ್ಕೆ ತೆವಳಿದ್ದಾರೆ. ಅದೂ ಶಿಕ್ಷಣ ಸಂಸ್ಥೆ ಮಾಡಿಕೊಂಡು ಶಾಮನೂರರ ತಮ್ಮನಂತಾದ ಕಾರಣಕ್ಕೆ. ದೇವೇಗೌಡರ ಮಗ ಎಂಬ ಕಾರಣಕ್ಕೆ ಅನಾಯಾಸವಾಗಿ ಎರಡು ಬಾರಿ ಮುಖ್ಯಮಂತ್ರಿಯಾದ ಕುಮಾರಣ್ಣನವರಿಗೆ ಹೋಲಿಸಿದರೆ ಪರಮಣ್ಣನ ಜೀವ ಬಹು ಬೆಲೆಯದ್ದು ಎಂದು ಡಿಎಸ್‌ಎಸ್ ವೈರಿ ವೆಂಕಟಸ್ವಾಮಿಯ ವ್ಯಾಖ್ಯಾನವಾಗಿದೆಯಲ್ಲಾ, ಥೂತ್ತೇರಿ!

* * * *

ನಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲದ ಸಮಸ್ಯೆಯನ್ನು ಚಿಟಕಿ ಹೊಡೆದಂತೆ ಬಗೆಹರಿಸುತ್ತೇನೆಂದು ಅಧಿಕಾರಕ್ಕೆ ಬಂದ ಕುಮಾರಣ್ಣನನ್ನು ಬೆಳಗಾವಿಯ ಕಬ್ಬಿನ ಬೆಳೆ ರೈತರು ಗಾಣಕ್ಕೆ ಹಾಕಿ ಹರೆಯತೊಡಗಿದ್ದಾರಂತಲ್ಲಾ. ಇದಕ್ಕೆ ಕಾರಣ ಕುಮಾರಣ್ಣನ ನುಡಿಮುತ್ತುಗಳೇ ಹೊರತು ರೈತರಲ್ಲಾ ಎಂಬುದು ರೈತ ಸಂಘದ ದೂರಾಗಿದೆಯಲ್ಲಾ. ಬೆಳಗಾವಿ ಕಡೆ ರೈತರು ಕಬ್ಬು ಬೆಳೆಗಾರರು ಕಬ್ಬು ಬೆಳೆಯಷ್ಟು ರಗಳೆ ಬೆಳೆಯಲ್ಲ. ನೆಟ್ಟು, ನೀರು ಗೊಬ್ಬರ ಕೊಟ್ಟರಾಯ್ತು ಕಟಾವಿಗೆ ಬರುವವರೆಗೆ ಬೆಳಗಾವಿಯಲ್ಲಿ ಅಡ್ಡಾಡಬಹುದು ಅಥವಾ ಆರಾಮವಾಗಿರಬಹುದು. ಇದನ್ನು ಗ್ರಹಿಸಿಯೋ ಏನೋ ಕುಮಾರಣ್ಣ ರೈತ ಮಹಿಳೆಯೊಬ್ಬರಿಗೆ `ಯಾವುದೋ ಕಂಪನಿಯಿಂದ ಬರಬೇಕಾದ ಸಾಲಕ್ಕೆ ನನ್ನನ್ನು ದೂರುವ ನೀನು ಇಷ್ಟು ದಿನ ಎಲ್ಲಿ ಮಲಗಿದ್ದೆವ್ವ’ ಎಂದು ಬುಟ್ಟಿದ್ದಾರಲ್ಲಾ. ಈ ಸಮಯದಲ್ಲಿ ಲಂಕೇಶರ ಹಾಡಾದ ‘ಎಲ್ಲಿದ್ದೆ ಇಲ್ಲಿತಂಕ ಎಲ್ಲಿಂದ ಬಂದ್ಯವ್ವ’ ಎಂಬ ಹಾಡು ನೆನಪಾಗುವುದರ ಜೊತೆಗೆ ಮುಖ್ಯಮಂತ್ರಿಯಾದವನು ಮಾತನ್ನು ಬಂಗಾರದಂತೆ ತೂಗಿ ಆಡಬೇಕು, ಎಲ್ಲಿ ಮಲಗಿದ್ದೆ ಎಂದರೆ ಏನರ್ಥ, ನಿನ್ನಂತೆ ಎಲ್ಲೆಲ್ಲೋ ಮಲಗಿ ಉಪಸಂಸಾರ ಮಾಡಿಕೊಂಡಿಲ್ಲ, ನನ್ನ ಜಮೀನಿನಲ್ಲಿ ಕಬ್ಬು ಬೆಳೆದು, ಅ ಬೆಳೆಯೊಳಗೆ ಮಲಗಿದ್ದೆ, ಇಂತಹ ಮಾತನಾಡುವ ನೀನು ಮುಖ್ಯಮಂತ್ರಿಯಾಗಲು ನಾಲಾಯಕ್ ಎಂದು ಬೆಳಗಾವಿಯ ಭೂದೇವಿ ಅಬ್ಬರಿಸಿದ್ದಾಳಲ್ಲ. ಬೆಳಗಾವಿ ಅಧಿವೇಶನದ ವೇಳೆ ರೈತರನ್ನು ಎತ್ತಿಕಟ್ಟಿ ಸಿದ್ದುಗೆ ಸಮಸ್ಯೆಯೊಡ್ಡಿದ್ದ ಕುಮಾರಣ್ಣನ ಕತೆಯೀಗ ಮಾಡಿದ್ದುಣ್ಣೋ ಮಾರಾಯನಂತಾಯ್ತಲ್ಲಾ, ಥೂತ್ತೇರಿ!

* * * *

ಮೀಟು ಪ್ರಖರಣಗಳ ಕಾವು ಕಡಿಮೆಯಗುತ್ತಿರುವ ಈ ಹೊತ್ತಿನಲ್ಲಿ, ಡಾಬಸ್‌ಪೇಟೆಯ ಕನ್ನಡದ ಪ್ರಖರ ವಿಮರ್ಶಕರು ಎಚ್ಚೆತ್ತುಕೊಂಡು ಮೀಟೂ ಕಡೆ ಬ್ಯಾಟರಿ ಹಚ್ಚಿ ನೋಡ ತೊಡಗಿದ್ದಾರಂತಲ್ಲಾ. ವಯೋಮಾನದ ಕಾರಣಕ್ಕೆ ಮೀಟು ಪ್ರಕರಣ ಮಬ್ಬಾಗಿ ಕಂಡದ್ದರಿಂದಲೋ ಏನೋ, ಸಿಟ್ಟಾಗಿರುವ ವಿಮರ್ಶಕರು ಮೀಟುಗೆ ತುತ್ತಾದ ನಟಿ ಇಷ್ಟು ದಿನ ಎಲ್ಲಿದ್ದಳು? ಆ ಸಮಯದಲ್ಲೇಕೆ ಸುಮ್ಮನಿದ್ದಳು? ಕೇಳಿದಕೂಡಲೆ ಅಂಗಾತ ಮಲಗಲು ಆಕೆಯೇನು ಹಳ್ಳಿಯವಳೆ? ಪ್ರತಿಷ್ಠಿತ ಶಿಕ್ಷಿತ ಸಮಾಜದವಳಾದ ಆಕೆ ಸುಮ್ಮನಿದ್ದುದ್ದೇಕೆ? ಅಮೆರಿಕಾದಿಂದ ಆಮದಾದ ಆ ಮೀಟುವನ್ನು ಇಲ್ಲಿ ಒಪ್ಪಲು ಸಾಧ್ಯವೆ? ಇತ್ಯಾದಿ ಪ್ರಶ್ನಿಸಿ ನಟಿಯ ನಡವಳಿಕೆ ಮೇಲೆ ಹರಿಹಾಯ್ದಿದ್ದಾರಂತಲ್ಲಾ. ಹರಿತವಾದ ಆಯುಧ ಹೊಂದಿರುವ ಸದರಿ ವಿಮರ್ಶಕರು. ಯಾರ ಮೇಲಾದರೂ ಹರಿಹಾಯಲೇಬೇಕಾಗುತ್ತದೆ. ವಿಮರ್ಶಕರ ಈ ಮಾನದಂಡವಿಡಿದು ಮಾತನಾಡುವುದಾದರೆ ನಮ್ಮ ರಾಮಚಂದ್ರಾಪುರ ಮಠದ ಕೆಂದು ಹೋರಿ ಇನ್ನು ಕಡಸುಗಳ ಮೇಲೆ ಹಾರುತ್ತ ಹಾಯಾಗಿರುತ್ತಿತ್ತು. ವಿಮರ್ಶಕರೇ ಹೇಳುವಂತೆ ನಮ್ಮ ಸಂಸ್ಕೃತಿಯೇ ನಮ್ಮ ಕಾಮವನ್ನು ನಿಯಂತ್ರಿಸುವುದಾಗಿದ್ದರೆ, ರಾಘವ ರೂಢಿಸಿಕೊಂಡ ಸಂಸ್ಕೃತಿ ಯಾವುದು. ಹೆಂಡತಿಯಿಂದ ಸುಕ್ಷೇಮ ದೂರ ಕಾಪಾಡಿಕೊಂಡು ಬದುಕುವ ಸಾಹಿತಿಗಳ ಸಮಸ್ಯೆ ಸಾರ್ವತ್ರಿಕವಾಗಲು ಸಾಧ್ಯವಿಲ್ಲವಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...