Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...