Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...