Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...