Homeಕರ್ನಾಟಕ‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಹಗ್ಗದ ಮೇಲೆ ನಡೆದಷ್ಟು ನಾಜೂಕಾಗಿ ತೂಗಾಡುತ್ತಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ಇದೀಗ ಇನ್ನೊಂದು ತೂಗುಗತ್ತಿ ಬಿದ್ದಿದೆ. ಸೀರಿಯಸ್ ವಿಷಯ ಅಂದ್ರೆ, ಆ ತೂಗುಗತ್ತಿಯನ್ನು ಗುರಿಯಿಟ್ಟು ಬಿಸಾಡಿರೋದು ಮಾಜಿ ಪ್ರಧಾನಿ ದೇವೇಗೌಡ್ರು. ಇವತ್ತು ಮಾಧ್ಯಮದವರ ಜೊತೆ ಮಾತನಾಡುತ್ತ ಮಧ್ಯಂತರ ಚುನಾವಣೆ ನಡೆಯೋದರ ಬಗ್ಗೆ ಡೌಟೇ ಬೇಡ ಎಂಬ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದು ಬ್ರೇಕಿಂಗ್ ನ್ಯೂಸ್ ಆಗುವ ಸುಳಿವು ಸಿಗುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿರುವ ಅವರು ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಬೇಡಿ. ನಾನು ಹೇಳಿದ್ದು ಲೋಕಲ್ ಬಾಡಿ ಎಲೆಕ್ಷನ್ ಬಗ್ಗೆಯೇ ಹೊರತು, ರಾಜ್ಯ ವಿಧಾನಸಭೆ ಕುರಿತಂತೆ ಅಲ್ಲ. ಕುಮಾರಸ್ವಾಮಿಯವರು ಹೇಳಿದಂತೆ ಈ ಸರ್ಕಾರ ಇನ್ನು ನಾಲ್ಕು ವರ್ಷ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಆದ್ರೆ, ದೇವೇಗೌಡ್ರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾ ಆಡಿದ್ದ ಸಂಪೂರ್ಣ ಮಾತುಗಳನ್ನು ಕೇಳಿಸಿಕೊಂಡವರಿಗೆ ಅವರು ರಾಜ್ಯ ವಿಧಾನಸಭೆ ಗಮನದಲ್ಲಿಟ್ಟುಕೊಂಡೇ ಹೇಳಿರೋದು ಎಂಬುದು ಖಾತ್ರಿಯಾಗುತ್ತದೆ. ಯಾಕೆಂದರೆ ಮಧ್ಯಂತರ ಚುನಾವಣೆಯ ಮಾತನ್ನು ಮುಂದುವರೆಸುತ್ತಾ ಮಧ್ಯಂತರ ಚುನಾವಣೆ ನಡೆಯೋದ್ರ ಬಗ್ಗೆ ಡೌಟೇ ಬೇಡ. ಅವರು (ಕಾಂಗ್ರೆಸ್) ಐದು ವರ್ಷ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದ್ರು, ಆದ್ರೆ ಅವರು ಈಗ ಹೇಗೆ ವರ್ತಿಸ್ತಿದಾರೆ ನೋಡಿ. ನಮ್ಮ ಜನ ಬುದ್ದಿವಂತರು. ಎಲ್ಲವನ್ನೂ ಗಮನಿಸ್ತಾ ಇರ್‍ತಾರೆ. ನಾವೇನು ಮೈತ್ರಿ ಮಾಡಿಕೊಳ್ಳಿ ಅಂತ ಕೇಳಿರಲಿಲ್ಲ. ನನ್ನ ಮಗನನ್ನೇ (ಕುಮಾರಸ್ವಾಮಿ) ಮುಖ್ಯಮಂತ್ರಿ ಮಾಡಿ ಅಂತಾನು ಕೇಳಿರಲಿಲ್ಲ. ಅವರೇ (ಕಾಂಗ್ರೆಸ್) ನನ್ನನ್ನು ಕರೆದ್ರು, ಸರ್ಕಾರ ರಚಿಸುವಂತೆ ಹೇಳಿದ್ರು. ನಾನು ನನ್ನ ಕೆಲಸ ಮುಂದುವರೆಸ್ತೀನಿ. ಯಾರನ್ನೂ ದೂಷಿಸೋದಕ್ಕೆ ಹೋಗಲ್ಲ ಎಂದಿದ್ದರು. ಅಲ್ಲಿಗೆ ದೇವೇಗೌಡರು ಯಾವ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡ್ತಾ ಇದಾರೆ ಅನ್ನೋದು ಖಾತ್ರಿ ಆಯ್ತು. ಅತ್ತ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಮಾಡಲು ಕಲ್ಬುರ್ಗಿಗೆ ತೆರಳಿರುವ ವೇಳೆಯಲ್ಲಿ ಕ್ಯಾಪಿಟಲ್ ಸಿಟಿಯಲ್ಲಿ ಕೂತು ದೇವೇಗೌಡರು ಈ ಮಾತು ಹೇಳಿರೋದು ಕೇವಲ ಬಾಯಿ ತಪ್ಪಿ ಆಡಿದ ಮಾತಲ್ಲ. ಯಾಕೆಂದರೆ, ದೇವೇಗೌಡರು ಮಾತನಾಡೋದು ಕಮ್ಮಿ. ಆಡುವ ಮಾತನ್ನೂ ಬಲು ತೂಗಿಯೇ ಮಾತನಾಡಿರುತ್ತಾರೆ. ಲೋಕಲ್ ಬಾಡಿ ಎಲೆಕ್ಷನ್‌ಗಳ ಬಗ್ಗೆ ತಾನು ಮಾತನಾಡಿದ್ದು ಎಂಬುದಾಗಿ ದೇವೇಗೌಡರು ಕೊಟ್ಟಿರುವ ಸ್ಪಷ್ಟೀಕರಣರ ನೆಪ ಮಾತ್ರದ್ದಷ್ಟೆ. ಅದರ ಹಿಂದೆ ನಿರ್ದಿಷ್ಟ ಲೆಕ್ಕಾಚಾರಗಳಿವೆ. ಬಸವಳಿದು ಕೂತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಸ್ಪಷ್ಟ ಇರಾದೆಯಿದೆ.

ಸಿದ್ದರಾಮಯ್ಯನ ದಿಲ್ಲಿ ಭೇಟಿಯ ತರುವಾಯ ಕೆಪಿಸಿಸಿಯನ್ನು ಹೆಚ್ಚೂಕಮ್ಮಿ ವಿಸರ್ಜಿಸಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಹೈಕಮಾಂಡ್ ಸಿದ್ದುಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದರ ಉದ್ದೇಶ ದೇವೇಗೌಡರ ದೂರದೃಷ್ಟಿಗೆ ಸ್ಪಷ್ಟವಾಗಿ ಗೋಚರಿಸಿದೆ. ಪಕ್ಷ ಸಂಘಟನೆ ಅಂದ್ರೆ, ಅದು ಯುದ್ದ ಸನಿಹದ ಶಸ್ತ್ರಾಸ್ತ್ರಾಭ್ಯಾಸವಿದ್ದಂತೆ ಎಂಬುದನ್ನು ಅರ್ಥ ಮಾಡಿಕೊಳ್ಳದಷ್ಟು ದೇವೇಗೌಡರು ದಡ್ಡರೇನಲ್ಲ. ಅದೂ ಅಲ್ಲದೆ ಮೈತ್ರಿಗೆ ಮೊದಲಿಂದಲೂ ಮಗ್ಗುಲ ಮುಳ್ಳಾಗಿ ಇರಿಯುತ್ತಿರುವ ಸಿದ್ರಾಮಯ್ಯ ‘ಮೈತ್ರಿಯಿಂದ ಏನೂ ಪ್ರಯೋಜನವಿಲ್ಲ’ ಎಂಬ ಹೇಳಿಕೆ ನೀಡಿದ್ದು ಅವರ ಅನುಮಾನವನ್ನು ಸ್ಪಷ್ಟವಾಗಿಸಿದೆ. ಒಂದುಕಡೆಯಿಂದ ದಾಳಿ ಶುರುವಾದ ಮೇಲೆ ಮತ್ತೊಂದು ಕಡೆಯಿಂದ ಪ್ರತಿದಾಳಿ ನಡೆಸಲೇಬೇಕಾಗುತ್ತೆ. ಮಧ್ಯಂತರ ಚುನಾವಣೆಗೆ ನೀವಷ್ಟೆ ಅಲ್ಲ, ನಾವೂ ತಯಾರಾಗಿದ್ದೇವೆ ಎಂಬ ಸೂಚ್ಯ ಮೆಸೇಜನ್ನು ದಿಲ್ಲಿ ಕೈ ನಾಯಕರಿಗೆ ರವಾನಿಸುವ ಇರಾದೆಯಿಂದಲೇ ದೇವೇಗೌಡರು ಈ ಬಾಣ ಬಿಟ್ಟಿದ್ದಾರೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಕಡೆಗಣಿಸಿರುವ ಒಂದು ವಾಸ್ತವವಿದೆ. ತಾವು ಮೈತ್ರಿ ಮುರಿದುಕೊಂಡು ಸರ್ಕಾರವನ್ನು ಪತನಗೊಳಿಸಿದ ಕೂಡಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದುಬಿಡುತ್ತೆ ಎಂದುಕೊಂಡಂತಿವೆ. ಆದರೆ ಸೆಂಚುರಿ ಮೇಲೆ ಒಂದು ಅದ್ಭುತ ಬೌಂಡರಿ ಮೂಲಕ 104 ನಾಟ್‌ಔಟ್ ಪೊಸೀಷನ್‌ನಲ್ಲಿರುವ; ಅಂಪೈರ್ (ರಾಜ್ಯಪಾಲ), ಥರ್ಡ್ ಅಂಪೈರ್ (ಪ್ರಧಾನಿ), ಮ್ಯಾಚ್ ರೆಫರಿ (ರಾಷ್ಟ್ರಪತಿ) ಸೇರಿದಂತೆ ಸಮಸ್ತ ತನ್ನದೇ ಹೋಮ್‌ಗ್ರೌಂಡ್‌ನಲ್ಲಿ ಸಜ್ಜಾಗಿ ನಿಂತಿರುವ ಬಿಜೆಪಿ ಅಷ್ಟು ಸುಲಭವಾಗಿ ಮಧ್ಯಂತರ ಚುನಾವಣೆ ನಡೆಸಲು ಬಿಡುತ್ತಾ? ಖಂಡಿತ ಇಲ್ಲ. ಅವರೇ ಕಿತ್ತಾಡಿ ಸರ್ಕಾರ ಬೀಳಿಸಿಕೊಳ್ಳುವ ಸನಿಹಕ್ಕೆ ಬರುತ್ತಿದ್ದಾರೆ ಎಂದಕೂಡಲೇ ಅಖಾಡಕ್ಕಿಳಿಯುವ ಬಿಜೆಪಿ ಈಗ ಸಚಿವಗಿರಿ ಸಿಗದೆ ಅತೃಪ್ತರಾಗಿರುವ ಕೈ-ತೆನೆ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿಬಿಡುತ್ತೆ.

ಮೇಲ್ನೋಟಕ್ಕೆ ಯಡಿಯೂರಪ್ಪನವರು ನಾವು ಆಪರೇಷನ್ ಕಮಲ ಮಾಡಲ್ಲ, ರಚನಾತ್ಮಕ ವಿರೋಧ ಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದು ಈಗಾಗಲೇ ಅಹೋರಾತ್ರಿ ಧರಣಿಗಳನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಸದ್ದಿಲ್ಲದೆ ಬಿಜೆಪಿ ಹೈಕಮಾಂಡ್, ಆಪರೇಷನ್ ಕಮಲ ನಡೆಸಲು ಯಡ್ಯೂರಪ್ಪನವರಿಗೆ ಲಾಸ್ಟ್ ಚಾನ್ಸ್ ನೀಡಿದ್ದು, ನಾವು ನೇರವಾಗಿ ಅಖಾಡಕ್ಕಿಳಿಯದೆ ದೂರದಲ್ಲೆ ನಿಂತು ಗೈಡ್ ಮಾಡುತ್ತೇವೆ, ಸಾಧಕ ಬಾಧಕಗಳನ್ನೆಲ್ಲ ಲೋಕಲ್ ಲೀಡರುಗಳೇ ಹೊತ್ತುಕೊಂಡು ಆಪರೇಷನ್ ನಡೆಸಬೇಕು ಎಂಬ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವರ್ತಮಾನ ಬಿಜೆಪಿ ಮೂಲಗಳಿಂದಲೇ ಬೆಳಕಿಗೆ ಬಂದಿದೆ. ಈಚೆಗೆ ನಡೆದ ಲೋಕಸಭಾ ಎಲೆಕ್ಷನ್‌ನಲ್ಲಿ ಮೈತ್ರಿ ಅಖಾಡದ ಸುಮಾರು ಮೂವತ್ತು ಕಾಂಗ್ರೆಸ್-ಜೆಡಿಎಸ್ ಎಮ್ಮೆಲ್ಲೆಗಳು ಬೇರೆಬೇರೆ ಸ್ಥಳೀಯ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದಲೇ ೨೫ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದದ್ದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆ ಮೂವತ್ತು ಜನರು ಆಪರೇಷನ್ ಕಮಲಕ್ಕೆ ಈಡಾಗುವ ಸಂಭವ ಇಲ್ಲವಾದರು ಅದರಲ್ಲಿ ಅರ್ಧದಷ್ಟು ಜನರಾದರು ಬಿಜೆಪಿಯತ್ತ ಒಲವಿಟ್ಟುಕೊಂಡೇ ಈ ಪಕ್ಷದ್ರೋಹ ಬಗೆದಿರೋದು ಬಿಜೆಪಿಯ ಹುಮ್ಮಸ್ಸನ್ನು ಇನ್ನಷ್ಟು ಹೆಚ್ಚಿಸಿದೆಯಂತೆ.

ಇಂಥಾ ಸಮಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳು ಮಧ್ಯಂತರ ಚುನಾವಣೆಯ ಕನವರಿಸುತ್ತಾ ಒಬ್ಬರ ಕಾಲು ಮತ್ತೊಬ್ಬರು ಎಳೆದಾಡಿಕೊಳ್ಳುತ್ತಿರೋದು ಬಿಜೆಪಿ ಪಾಲಿಗೆ ‘ಲಡ್ಡು ಬಂದು ಬಾಯಿಗೆ ಬಿತ್ತು’ ಎಂಬಂತಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...