Homeಕರ್ನಾಟಕ‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

‘ಮಧ್ಯಂತರ ಚುನಾವಣೆ ಗ್ಯಾರಂಟಿ’: ದೇವೇಗೌಡರ ಶಾಕಿಂಗ್ ಸ್ಟೇಟ್‌ಮೆಂಟ್‌ನ ಪರಿಣಾಮ ಏನಾಗಬಹುದು?

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಹಗ್ಗದ ಮೇಲೆ ನಡೆದಷ್ಟು ನಾಜೂಕಾಗಿ ತೂಗಾಡುತ್ತಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ಇದೀಗ ಇನ್ನೊಂದು ತೂಗುಗತ್ತಿ ಬಿದ್ದಿದೆ. ಸೀರಿಯಸ್ ವಿಷಯ ಅಂದ್ರೆ, ಆ ತೂಗುಗತ್ತಿಯನ್ನು ಗುರಿಯಿಟ್ಟು ಬಿಸಾಡಿರೋದು ಮಾಜಿ ಪ್ರಧಾನಿ ದೇವೇಗೌಡ್ರು. ಇವತ್ತು ಮಾಧ್ಯಮದವರ ಜೊತೆ ಮಾತನಾಡುತ್ತ ಮಧ್ಯಂತರ ಚುನಾವಣೆ ನಡೆಯೋದರ ಬಗ್ಗೆ ಡೌಟೇ ಬೇಡ ಎಂಬ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದು ಬ್ರೇಕಿಂಗ್ ನ್ಯೂಸ್ ಆಗುವ ಸುಳಿವು ಸಿಗುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿರುವ ಅವರು ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಬೇಡಿ. ನಾನು ಹೇಳಿದ್ದು ಲೋಕಲ್ ಬಾಡಿ ಎಲೆಕ್ಷನ್ ಬಗ್ಗೆಯೇ ಹೊರತು, ರಾಜ್ಯ ವಿಧಾನಸಭೆ ಕುರಿತಂತೆ ಅಲ್ಲ. ಕುಮಾರಸ್ವಾಮಿಯವರು ಹೇಳಿದಂತೆ ಈ ಸರ್ಕಾರ ಇನ್ನು ನಾಲ್ಕು ವರ್ಷ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಆದ್ರೆ, ದೇವೇಗೌಡ್ರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾ ಆಡಿದ್ದ ಸಂಪೂರ್ಣ ಮಾತುಗಳನ್ನು ಕೇಳಿಸಿಕೊಂಡವರಿಗೆ ಅವರು ರಾಜ್ಯ ವಿಧಾನಸಭೆ ಗಮನದಲ್ಲಿಟ್ಟುಕೊಂಡೇ ಹೇಳಿರೋದು ಎಂಬುದು ಖಾತ್ರಿಯಾಗುತ್ತದೆ. ಯಾಕೆಂದರೆ ಮಧ್ಯಂತರ ಚುನಾವಣೆಯ ಮಾತನ್ನು ಮುಂದುವರೆಸುತ್ತಾ ಮಧ್ಯಂತರ ಚುನಾವಣೆ ನಡೆಯೋದ್ರ ಬಗ್ಗೆ ಡೌಟೇ ಬೇಡ. ಅವರು (ಕಾಂಗ್ರೆಸ್) ಐದು ವರ್ಷ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದ್ರು, ಆದ್ರೆ ಅವರು ಈಗ ಹೇಗೆ ವರ್ತಿಸ್ತಿದಾರೆ ನೋಡಿ. ನಮ್ಮ ಜನ ಬುದ್ದಿವಂತರು. ಎಲ್ಲವನ್ನೂ ಗಮನಿಸ್ತಾ ಇರ್‍ತಾರೆ. ನಾವೇನು ಮೈತ್ರಿ ಮಾಡಿಕೊಳ್ಳಿ ಅಂತ ಕೇಳಿರಲಿಲ್ಲ. ನನ್ನ ಮಗನನ್ನೇ (ಕುಮಾರಸ್ವಾಮಿ) ಮುಖ್ಯಮಂತ್ರಿ ಮಾಡಿ ಅಂತಾನು ಕೇಳಿರಲಿಲ್ಲ. ಅವರೇ (ಕಾಂಗ್ರೆಸ್) ನನ್ನನ್ನು ಕರೆದ್ರು, ಸರ್ಕಾರ ರಚಿಸುವಂತೆ ಹೇಳಿದ್ರು. ನಾನು ನನ್ನ ಕೆಲಸ ಮುಂದುವರೆಸ್ತೀನಿ. ಯಾರನ್ನೂ ದೂಷಿಸೋದಕ್ಕೆ ಹೋಗಲ್ಲ ಎಂದಿದ್ದರು. ಅಲ್ಲಿಗೆ ದೇವೇಗೌಡರು ಯಾವ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡ್ತಾ ಇದಾರೆ ಅನ್ನೋದು ಖಾತ್ರಿ ಆಯ್ತು. ಅತ್ತ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಮಾಡಲು ಕಲ್ಬುರ್ಗಿಗೆ ತೆರಳಿರುವ ವೇಳೆಯಲ್ಲಿ ಕ್ಯಾಪಿಟಲ್ ಸಿಟಿಯಲ್ಲಿ ಕೂತು ದೇವೇಗೌಡರು ಈ ಮಾತು ಹೇಳಿರೋದು ಕೇವಲ ಬಾಯಿ ತಪ್ಪಿ ಆಡಿದ ಮಾತಲ್ಲ. ಯಾಕೆಂದರೆ, ದೇವೇಗೌಡರು ಮಾತನಾಡೋದು ಕಮ್ಮಿ. ಆಡುವ ಮಾತನ್ನೂ ಬಲು ತೂಗಿಯೇ ಮಾತನಾಡಿರುತ್ತಾರೆ. ಲೋಕಲ್ ಬಾಡಿ ಎಲೆಕ್ಷನ್‌ಗಳ ಬಗ್ಗೆ ತಾನು ಮಾತನಾಡಿದ್ದು ಎಂಬುದಾಗಿ ದೇವೇಗೌಡರು ಕೊಟ್ಟಿರುವ ಸ್ಪಷ್ಟೀಕರಣರ ನೆಪ ಮಾತ್ರದ್ದಷ್ಟೆ. ಅದರ ಹಿಂದೆ ನಿರ್ದಿಷ್ಟ ಲೆಕ್ಕಾಚಾರಗಳಿವೆ. ಬಸವಳಿದು ಕೂತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಸ್ಪಷ್ಟ ಇರಾದೆಯಿದೆ.

ಸಿದ್ದರಾಮಯ್ಯನ ದಿಲ್ಲಿ ಭೇಟಿಯ ತರುವಾಯ ಕೆಪಿಸಿಸಿಯನ್ನು ಹೆಚ್ಚೂಕಮ್ಮಿ ವಿಸರ್ಜಿಸಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಹೈಕಮಾಂಡ್ ಸಿದ್ದುಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದರ ಉದ್ದೇಶ ದೇವೇಗೌಡರ ದೂರದೃಷ್ಟಿಗೆ ಸ್ಪಷ್ಟವಾಗಿ ಗೋಚರಿಸಿದೆ. ಪಕ್ಷ ಸಂಘಟನೆ ಅಂದ್ರೆ, ಅದು ಯುದ್ದ ಸನಿಹದ ಶಸ್ತ್ರಾಸ್ತ್ರಾಭ್ಯಾಸವಿದ್ದಂತೆ ಎಂಬುದನ್ನು ಅರ್ಥ ಮಾಡಿಕೊಳ್ಳದಷ್ಟು ದೇವೇಗೌಡರು ದಡ್ಡರೇನಲ್ಲ. ಅದೂ ಅಲ್ಲದೆ ಮೈತ್ರಿಗೆ ಮೊದಲಿಂದಲೂ ಮಗ್ಗುಲ ಮುಳ್ಳಾಗಿ ಇರಿಯುತ್ತಿರುವ ಸಿದ್ರಾಮಯ್ಯ ‘ಮೈತ್ರಿಯಿಂದ ಏನೂ ಪ್ರಯೋಜನವಿಲ್ಲ’ ಎಂಬ ಹೇಳಿಕೆ ನೀಡಿದ್ದು ಅವರ ಅನುಮಾನವನ್ನು ಸ್ಪಷ್ಟವಾಗಿಸಿದೆ. ಒಂದುಕಡೆಯಿಂದ ದಾಳಿ ಶುರುವಾದ ಮೇಲೆ ಮತ್ತೊಂದು ಕಡೆಯಿಂದ ಪ್ರತಿದಾಳಿ ನಡೆಸಲೇಬೇಕಾಗುತ್ತೆ. ಮಧ್ಯಂತರ ಚುನಾವಣೆಗೆ ನೀವಷ್ಟೆ ಅಲ್ಲ, ನಾವೂ ತಯಾರಾಗಿದ್ದೇವೆ ಎಂಬ ಸೂಚ್ಯ ಮೆಸೇಜನ್ನು ದಿಲ್ಲಿ ಕೈ ನಾಯಕರಿಗೆ ರವಾನಿಸುವ ಇರಾದೆಯಿಂದಲೇ ದೇವೇಗೌಡರು ಈ ಬಾಣ ಬಿಟ್ಟಿದ್ದಾರೆ.

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಕಡೆಗಣಿಸಿರುವ ಒಂದು ವಾಸ್ತವವಿದೆ. ತಾವು ಮೈತ್ರಿ ಮುರಿದುಕೊಂಡು ಸರ್ಕಾರವನ್ನು ಪತನಗೊಳಿಸಿದ ಕೂಡಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದುಬಿಡುತ್ತೆ ಎಂದುಕೊಂಡಂತಿವೆ. ಆದರೆ ಸೆಂಚುರಿ ಮೇಲೆ ಒಂದು ಅದ್ಭುತ ಬೌಂಡರಿ ಮೂಲಕ 104 ನಾಟ್‌ಔಟ್ ಪೊಸೀಷನ್‌ನಲ್ಲಿರುವ; ಅಂಪೈರ್ (ರಾಜ್ಯಪಾಲ), ಥರ್ಡ್ ಅಂಪೈರ್ (ಪ್ರಧಾನಿ), ಮ್ಯಾಚ್ ರೆಫರಿ (ರಾಷ್ಟ್ರಪತಿ) ಸೇರಿದಂತೆ ಸಮಸ್ತ ತನ್ನದೇ ಹೋಮ್‌ಗ್ರೌಂಡ್‌ನಲ್ಲಿ ಸಜ್ಜಾಗಿ ನಿಂತಿರುವ ಬಿಜೆಪಿ ಅಷ್ಟು ಸುಲಭವಾಗಿ ಮಧ್ಯಂತರ ಚುನಾವಣೆ ನಡೆಸಲು ಬಿಡುತ್ತಾ? ಖಂಡಿತ ಇಲ್ಲ. ಅವರೇ ಕಿತ್ತಾಡಿ ಸರ್ಕಾರ ಬೀಳಿಸಿಕೊಳ್ಳುವ ಸನಿಹಕ್ಕೆ ಬರುತ್ತಿದ್ದಾರೆ ಎಂದಕೂಡಲೇ ಅಖಾಡಕ್ಕಿಳಿಯುವ ಬಿಜೆಪಿ ಈಗ ಸಚಿವಗಿರಿ ಸಿಗದೆ ಅತೃಪ್ತರಾಗಿರುವ ಕೈ-ತೆನೆ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿಬಿಡುತ್ತೆ.

ಮೇಲ್ನೋಟಕ್ಕೆ ಯಡಿಯೂರಪ್ಪನವರು ನಾವು ಆಪರೇಷನ್ ಕಮಲ ಮಾಡಲ್ಲ, ರಚನಾತ್ಮಕ ವಿರೋಧ ಪಕ್ಷವಾಗಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದು ಈಗಾಗಲೇ ಅಹೋರಾತ್ರಿ ಧರಣಿಗಳನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಸದ್ದಿಲ್ಲದೆ ಬಿಜೆಪಿ ಹೈಕಮಾಂಡ್, ಆಪರೇಷನ್ ಕಮಲ ನಡೆಸಲು ಯಡ್ಯೂರಪ್ಪನವರಿಗೆ ಲಾಸ್ಟ್ ಚಾನ್ಸ್ ನೀಡಿದ್ದು, ನಾವು ನೇರವಾಗಿ ಅಖಾಡಕ್ಕಿಳಿಯದೆ ದೂರದಲ್ಲೆ ನಿಂತು ಗೈಡ್ ಮಾಡುತ್ತೇವೆ, ಸಾಧಕ ಬಾಧಕಗಳನ್ನೆಲ್ಲ ಲೋಕಲ್ ಲೀಡರುಗಳೇ ಹೊತ್ತುಕೊಂಡು ಆಪರೇಷನ್ ನಡೆಸಬೇಕು ಎಂಬ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವರ್ತಮಾನ ಬಿಜೆಪಿ ಮೂಲಗಳಿಂದಲೇ ಬೆಳಕಿಗೆ ಬಂದಿದೆ. ಈಚೆಗೆ ನಡೆದ ಲೋಕಸಭಾ ಎಲೆಕ್ಷನ್‌ನಲ್ಲಿ ಮೈತ್ರಿ ಅಖಾಡದ ಸುಮಾರು ಮೂವತ್ತು ಕಾಂಗ್ರೆಸ್-ಜೆಡಿಎಸ್ ಎಮ್ಮೆಲ್ಲೆಗಳು ಬೇರೆಬೇರೆ ಸ್ಥಳೀಯ ಕಾರಣಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದಲೇ ೨೫ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದದ್ದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆ ಮೂವತ್ತು ಜನರು ಆಪರೇಷನ್ ಕಮಲಕ್ಕೆ ಈಡಾಗುವ ಸಂಭವ ಇಲ್ಲವಾದರು ಅದರಲ್ಲಿ ಅರ್ಧದಷ್ಟು ಜನರಾದರು ಬಿಜೆಪಿಯತ್ತ ಒಲವಿಟ್ಟುಕೊಂಡೇ ಈ ಪಕ್ಷದ್ರೋಹ ಬಗೆದಿರೋದು ಬಿಜೆಪಿಯ ಹುಮ್ಮಸ್ಸನ್ನು ಇನ್ನಷ್ಟು ಹೆಚ್ಚಿಸಿದೆಯಂತೆ.

ಇಂಥಾ ಸಮಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗಳು ಮಧ್ಯಂತರ ಚುನಾವಣೆಯ ಕನವರಿಸುತ್ತಾ ಒಬ್ಬರ ಕಾಲು ಮತ್ತೊಬ್ಬರು ಎಳೆದಾಡಿಕೊಳ್ಳುತ್ತಿರೋದು ಬಿಜೆಪಿ ಪಾಲಿಗೆ ‘ಲಡ್ಡು ಬಂದು ಬಾಯಿಗೆ ಬಿತ್ತು’ ಎಂಬಂತಾಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...