Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...