HomeUncategorizedದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

- Advertisement -
- Advertisement -

ಭಾರತ-ಪಾಕಿಸ್ತಾನ ವಿಭಜೆಗೆ ಕಾಂಗ್ರೆಸ್ಸೇ ಕಾರಣ. ಮೊಹಮದ್ ಆಲಿ ಜಿನ್ನಾ ಜೊತೆಗೆ ಸೇರಿಕೊಂಡು ದೇಶ ವಿಭಜನೆ ಮಾಡಿದರು. ವಿಭಜನೆಯ ಪಾಪದ ಕೂಸು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ ಕಾಂಗ್ರೆಸ್ ನಾಯಕರು ಜಿನ್ನಾ ಜೊತೆ ಮಾಡಿಕೊಂಡ ಭಾಗವಾಗಿ ದೇಶ ವಿಭಜೆಯಾಯಿತು. ದೇಶ ವಿಭಜನೆಗೆ RSS ಮತ್ತು BJPಕಾರಣವಲ್ಲ. ಕಾಂಗ್ರೆಸ್ ಪಾಪದ ಕೂಸು ಎಂದು ದೂರಿದರು.

ನಾಥೂರಾಮ್ ಗೋಡ್ಸೆ ಒಂದು ಬಾರಿ ಗಾಂಧಿಯನ್ನು ಕೊಂದ. ಆತ ಮಾಡಿದ್ದು ಪಾಪದ ಕೆಲಸ. ಆದರೆ ಗಾಂಧಿ ಟೋಟಿ ಧರಿಸಿ ಗಾಂಧಿ ತತ್ವಗಳನ್ನು ನಿತ್ಯವೂ ಕೊಂದದ್ದು ಕಾಂಗ್ರೆಸ್. ಹಾಗೆ ನೋಡಿದರೆ ಗೋಡ್ಸೆ ಮಾಡಿದ ಕೃತ್ಯಕ್ಕಿಂತ ಕಾಂಗ್ರೆಸ್ ಮಾಡಿದ ಕೃತ್ಯವೇ ಹೆಚ್ಚು. ಗೂಡ್ಸೆ ಮಾಡಿದ್ದು ತಪ್ಪಾದರೆ ಕಾಂಗ್ರೆಸ್ ದೇಶಕ್ಕೆ ದ್ರೋಹ ಬಗೆದು ಮಹಾತಪ್ಪ ಮಾಡಿತು. ಗೋಡ್ಸೆ ಮಾಡಿದ ಅನ್ಯಾಯಕ್ಕಿಂತ ಕಾಂಗ್ರೆಸ್ ಮಾಡಿದ ಅನ್ಯಾಯ ದೊಡ್ಡದು ಎಂದು ಗೋಡ್ಸೆಯನ್ನು ಒಂದು ಹಂತದಲ್ಲಿ ಸಮರ್ಥನೆ ಮಾಡಿಕೊಂಡರು.

ಗಾಂಧಿ ಟೋಪಿ ಹಾಕಿದರೆ, ಖಾದಿ ಬಟ್ಟೆ ಧರಿಸಿದ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯನ್ನು ಕಟುವಾಗಿ ಟೀಕಿಸಿದರು. ದೇಶ ಮೊದಲ ನಂತರ ಪಕ್ಷ. ಆದರೆ ಕಾಂಗ್ರೆಸ್ ಗೆ ನೋಟು ಮೊದಲು ನಂತರ ದೇಶ. ರಾಹುಲ್ ಗಾಂಧಿ ಹತಾಶೆಯಿಂದ ಟೀಕೆ ಮಾಡುತ್ತಿದ್ದಾರೆ. ಅವರು ಹೇಳಿಕೆಗಳೆಲ್ಲವು ಅಪ್ರಬುದ್ಧತೆಯಿಂದ ಕೂಡಿವೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಮುಂದಿನ ಪ್ರಧಾನಿಯಾಗಬಲ್ಲ ವ್ಯಕ್ತಿ ಎಂಬ ಪ್ರಶ್ನೆಗೆ ತಿರುಕನೋರ್ವ ಮುರುಕು ಗುಡಿಸಲಲ್ಲಿ ಕನಸು ಕಂಡನಂತೆ ಎಂದು ಗೇಲಿ ಮಾಡಿದರು.

ಮಹಾತ್ಮಗಾಂಧೀಜಿ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಪೌರತ್ವ ನೀಡಬೇಕೆಂದು ಹೇಳಿದ್ದರು. ದೌರ್ಜನ್ಯ ನಡಯುತ್ತಿದ್ದ ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ. ಅಂದು ಗಾಂಧೀಜಿ ಕಂಡಿದ್ದ ಕನಸನ್ನು ಇಂದು ನಮ್ಮ ಸರ್ಕಾರ ನನಸು ಮಾಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಬಲಾಢ್ಯ ರಾಜಕಾರಣಿ. ಅವರನ್ನು ಯಾರಿಂದಲೂ ಆಟವಾಡಿಸಲು ಸಾಧ್ಯವಿಲ್ಲ. ಸಾಮರ್ಥ್ಯವಿರುವ ಯಡಿಯೂರಪ್ಪ ಅವರನ್ನು ಆಟವಾಡಿಸಲು ಆಗುವುದಿಲ್ಲ. ಅವರು ಬಲಿಷ್ಟವಾಗಿದ್ದು ಬೇರೆಯವರನ್ನು ಆಟವಾಡಿಸಬಲ್ಲ ಶಕ್ತಿ ಇದೆ.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ ದೆಹಲಿಯ ಚುನಾವಣೆ ಸಮೀಪದಲ್ಲಿದೆ. ಆ ಕಾರಣಕ್ಕೆ ವಿಳಂಬವಾಗಿದೆ. ಪಕ್ಷದ ಕೈಮಾಂಡ್ ಅಧ್ಯತೆ ಮೇಲೆ ವಿಷಯಗಳನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯ ವಿಷಯ ಬಂದಾಗ ಸಣ್ಣ ವಿಷಯಗಳು ಪಕ್ಕಕ್ಕೆ ಸರಿಯುತ್ತವೆ ಎಂದು ಸಂಪುಟ ವಿಸ್ತರಣೆಗೆ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದರು.

ಪಕ್ಷದ ಹೈಕಮಾಂಡ್ ರೋಗಿಯನ್ನು ನೋಡಿಕೊಳ್ಳುತ್ತಿದೆ. ಮೊದಲು ಬಿಪಿ ಮತ್ತು ಶುಗರ್ ಕಂಟ್ರೋಲ್ ಮಾಡಿ ನಂತರ ಶಸ್ತ್ರಚಿಕಿತ್ಸೆ ಮಾಡುತ್ತಾರಲ್ಲವೇ? ಹಾಗೆ ಸಂಪುಟ ವಿಸ್ತರಣೆ ಎಂದು ಸಂಪುಟ ವಿಸ್ತರಣೆಯಲ್ಲಿ ಬಿಪಿ, ಶುಗರ್ ಹೆಚ್ಚಾಗಿದೆ ಎಂಬ ಸೂಚನೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...