HomeUncategorizedದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ ಜವಾಹರಲಾಲ್ ನೆಹರು ಪಾಪದ ಕೂಸು : ಸಚಿವ ಸಿ.ಟಿ.ರವಿ ಆರೋಪ

- Advertisement -
- Advertisement -

ಭಾರತ-ಪಾಕಿಸ್ತಾನ ವಿಭಜೆಗೆ ಕಾಂಗ್ರೆಸ್ಸೇ ಕಾರಣ. ಮೊಹಮದ್ ಆಲಿ ಜಿನ್ನಾ ಜೊತೆಗೆ ಸೇರಿಕೊಂಡು ದೇಶ ವಿಭಜನೆ ಮಾಡಿದರು. ವಿಭಜನೆಯ ಪಾಪದ ಕೂಸು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ ಕಾಂಗ್ರೆಸ್ ನಾಯಕರು ಜಿನ್ನಾ ಜೊತೆ ಮಾಡಿಕೊಂಡ ಭಾಗವಾಗಿ ದೇಶ ವಿಭಜೆಯಾಯಿತು. ದೇಶ ವಿಭಜನೆಗೆ RSS ಮತ್ತು BJPಕಾರಣವಲ್ಲ. ಕಾಂಗ್ರೆಸ್ ಪಾಪದ ಕೂಸು ಎಂದು ದೂರಿದರು.

ನಾಥೂರಾಮ್ ಗೋಡ್ಸೆ ಒಂದು ಬಾರಿ ಗಾಂಧಿಯನ್ನು ಕೊಂದ. ಆತ ಮಾಡಿದ್ದು ಪಾಪದ ಕೆಲಸ. ಆದರೆ ಗಾಂಧಿ ಟೋಟಿ ಧರಿಸಿ ಗಾಂಧಿ ತತ್ವಗಳನ್ನು ನಿತ್ಯವೂ ಕೊಂದದ್ದು ಕಾಂಗ್ರೆಸ್. ಹಾಗೆ ನೋಡಿದರೆ ಗೋಡ್ಸೆ ಮಾಡಿದ ಕೃತ್ಯಕ್ಕಿಂತ ಕಾಂಗ್ರೆಸ್ ಮಾಡಿದ ಕೃತ್ಯವೇ ಹೆಚ್ಚು. ಗೂಡ್ಸೆ ಮಾಡಿದ್ದು ತಪ್ಪಾದರೆ ಕಾಂಗ್ರೆಸ್ ದೇಶಕ್ಕೆ ದ್ರೋಹ ಬಗೆದು ಮಹಾತಪ್ಪ ಮಾಡಿತು. ಗೋಡ್ಸೆ ಮಾಡಿದ ಅನ್ಯಾಯಕ್ಕಿಂತ ಕಾಂಗ್ರೆಸ್ ಮಾಡಿದ ಅನ್ಯಾಯ ದೊಡ್ಡದು ಎಂದು ಗೋಡ್ಸೆಯನ್ನು ಒಂದು ಹಂತದಲ್ಲಿ ಸಮರ್ಥನೆ ಮಾಡಿಕೊಂಡರು.

ಗಾಂಧಿ ಟೋಪಿ ಹಾಕಿದರೆ, ಖಾದಿ ಬಟ್ಟೆ ಧರಿಸಿದ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯನ್ನು ಕಟುವಾಗಿ ಟೀಕಿಸಿದರು. ದೇಶ ಮೊದಲ ನಂತರ ಪಕ್ಷ. ಆದರೆ ಕಾಂಗ್ರೆಸ್ ಗೆ ನೋಟು ಮೊದಲು ನಂತರ ದೇಶ. ರಾಹುಲ್ ಗಾಂಧಿ ಹತಾಶೆಯಿಂದ ಟೀಕೆ ಮಾಡುತ್ತಿದ್ದಾರೆ. ಅವರು ಹೇಳಿಕೆಗಳೆಲ್ಲವು ಅಪ್ರಬುದ್ಧತೆಯಿಂದ ಕೂಡಿವೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಮುಂದಿನ ಪ್ರಧಾನಿಯಾಗಬಲ್ಲ ವ್ಯಕ್ತಿ ಎಂಬ ಪ್ರಶ್ನೆಗೆ ತಿರುಕನೋರ್ವ ಮುರುಕು ಗುಡಿಸಲಲ್ಲಿ ಕನಸು ಕಂಡನಂತೆ ಎಂದು ಗೇಲಿ ಮಾಡಿದರು.

ಮಹಾತ್ಮಗಾಂಧೀಜಿ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಪೌರತ್ವ ನೀಡಬೇಕೆಂದು ಹೇಳಿದ್ದರು. ದೌರ್ಜನ್ಯ ನಡಯುತ್ತಿದ್ದ ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ. ಅಂದು ಗಾಂಧೀಜಿ ಕಂಡಿದ್ದ ಕನಸನ್ನು ಇಂದು ನಮ್ಮ ಸರ್ಕಾರ ನನಸು ಮಾಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಬಲಾಢ್ಯ ರಾಜಕಾರಣಿ. ಅವರನ್ನು ಯಾರಿಂದಲೂ ಆಟವಾಡಿಸಲು ಸಾಧ್ಯವಿಲ್ಲ. ಸಾಮರ್ಥ್ಯವಿರುವ ಯಡಿಯೂರಪ್ಪ ಅವರನ್ನು ಆಟವಾಡಿಸಲು ಆಗುವುದಿಲ್ಲ. ಅವರು ಬಲಿಷ್ಟವಾಗಿದ್ದು ಬೇರೆಯವರನ್ನು ಆಟವಾಡಿಸಬಲ್ಲ ಶಕ್ತಿ ಇದೆ.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ ದೆಹಲಿಯ ಚುನಾವಣೆ ಸಮೀಪದಲ್ಲಿದೆ. ಆ ಕಾರಣಕ್ಕೆ ವಿಳಂಬವಾಗಿದೆ. ಪಕ್ಷದ ಕೈಮಾಂಡ್ ಅಧ್ಯತೆ ಮೇಲೆ ವಿಷಯಗಳನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯ ವಿಷಯ ಬಂದಾಗ ಸಣ್ಣ ವಿಷಯಗಳು ಪಕ್ಕಕ್ಕೆ ಸರಿಯುತ್ತವೆ ಎಂದು ಸಂಪುಟ ವಿಸ್ತರಣೆಗೆ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದರು.

ಪಕ್ಷದ ಹೈಕಮಾಂಡ್ ರೋಗಿಯನ್ನು ನೋಡಿಕೊಳ್ಳುತ್ತಿದೆ. ಮೊದಲು ಬಿಪಿ ಮತ್ತು ಶುಗರ್ ಕಂಟ್ರೋಲ್ ಮಾಡಿ ನಂತರ ಶಸ್ತ್ರಚಿಕಿತ್ಸೆ ಮಾಡುತ್ತಾರಲ್ಲವೇ? ಹಾಗೆ ಸಂಪುಟ ವಿಸ್ತರಣೆ ಎಂದು ಸಂಪುಟ ವಿಸ್ತರಣೆಯಲ್ಲಿ ಬಿಪಿ, ಶುಗರ್ ಹೆಚ್ಚಾಗಿದೆ ಎಂಬ ಸೂಚನೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...