Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...